ಬಾಬಾ ಸಾಹೇಬರ ತತ್ತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅರಿತುಕೊಂಡರೆ ಸಮಾಜದಲ್ಲಿ ಮುಂದೆಬರಲು ಸಾಧ್ಯ ಎಂದು ತಾಪಂ ಇ.ಒ ಶಶಿಧರ್

by | 06/12/23 | ಸುದ್ದಿ


ಚಳ್ಳಕೆರೆ ಡಿ.6 ಬಾಬಾ ಸಾಹೇಬರ ತತ್ತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅರಿತುಕೊಂಡರೆ ಸಮಾಜದಲ್ಲಿ ಮುಂದೆಬರಲು ಸಾಧ್ಯ ಎಂದು ತಾಪಂ ಇ.ಒ ಶಶಿಧರ್ ಹೇಳಿದರು. ನಗರದಲ್ಲಿ ತಾಲೂಕು ಪಂಚಾಯತಿ. ನಗರಸಭೆ ಸಮಾಜ ಕಲ್ಯಾಣ ಇಲಾಖೆ ತಾಲೂಕು ದಲಿತ ಸಂಘಟನೆಗಳ ಒಕ್ಕೂಟ ಆಯೋಜಿಸಿದ್ದ 67ನೇ ಅಂಬೇಡ್ಕರ್ ಪರಿನಿಬ್ಬಾಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಡಾ. ಅಂಬೇಡ್ಕರ್ ಸಂವಿಧಾನದಲ್ಲಿ ಪ್ರತಿಯೊಂದು ಶೋಷಿತ ವರ್ಗಕ್ಕೂ ನ್ಯಾಯವನ್ನು ಒದಗಿಸಿದ್ದಾರೆ.ಮೀಸಲಾತಿಯನ್ನು ಸದ್ಬಳಕೆ ಮಾಡಿಕೊಂಡು ಎಲ್ಲರೂ ಶಿಕ್ಷಣದಲ್ಲಿ ಹಾಗೂ ಉದ್ಯೋಗ ರಂಗದಲ್ಲಿ ಉನ್ನತ ಸ್ಥಾನವನ್ನು ಪಡೆದು ಅಂಬೇಡ್ಕರ್ ಅವರ ಆಶಯಗಳನ್ನು ಸಾಕಾರಗೊಳಿಸಬೇಕೆಂದು ತಿಳಿಸಿದರು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪ್ರಕಾಶ್ ಮೂರ್ತಿ ಮಾತನಾಡಿ ಅಂಬೇಡ್ಕರ್ ತನಗಾಗಿ ಬದುಕದೆ ಸಮಾಜಕ್ಕಾಗಿ ಬದುಕಿದವರು ಅಂಬೇಡ್ಕರ್ ಒಂದು ದೀಪವಿದ್ದಂತೆ ತನ್ನನ್ನು ತಾನೇ ಉರಿದುಕೊಂಡು ಜಗತ್ತಿಗೆ ಬೆಳಕು ನೀಡಿದ  ಮಹಾನ್ ಪುರುಷ ಅಂಬೇಡ್ಕರ್ ಆಶಯಗಳಿಗೆ ವಿರುದ್ಧವಾಗಿ ಇಂದಿನ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ ಸ್ತ್ರೀಯರ ಏಳಿಗೆಗಾಗಿ ಅವರು ಪಟ್ಟ ಶ್ರಮ ಅವಿಸ್ಮರಣೀಯವಾದದ್ದು ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆಎಸ್ ಸುರೇಶ್ ಮಾತನಾಡಿ ಅಂಬೇಡ್ಕರ್ ತಮ್ಮ ಜ್ಞಾನವನ್ನು ಬಳಸಿಕೊಂಡು ಹಣ ಮಾಡಲು ಹೋಗಲಿಲ್ಲ ಬಡವರ ಬಗ್ಗೆ ಚಿಂತನೆ ಮಾಡಿ ಸಮಾನತೆ ತರಬೇಕು ಎಂದು ಚಿಂತಿಸಿದರು ಸ್ವಾತಂತ್ರ್ಯ ಬಂದ ಇಷ್ಟು ವರ್ಷಗಳಾದರೂ ದೀನ ದಲಿತರ ಉದ್ದಾರವಾಗಿಲ್ಲ ಎಲ್ಲಾ ದಲಿತರು ಸಂಘಟನೆಯಾಗುವ ಮೂಲಕ ತಮ್ಮ ಹಕ್ಕುಗಳನ್ನು ಪಡೆಯಬೇಕು ಪುಸ್ತಕಗಳನ್ನು ಅಂಬೇಡ್ಕರ್ ಆಸ್ತಿಯನ್ನಾಗಿ ಮಾಡಿದರು. ಜಯಂತಿಗಳ ಆಚರಣೆಗಳ ಮೂಲ ಉದ್ದೇಶಗಳನ್ನು ಮರೆಯುತ್ತಿದ್ದೇವೆ ಅಂಬೇಡ್ಕರ್ ರವರ ಸ್ವಾಭಿಮಾನದ ತತ್ವವನ್ನು ನಾವೆಲ್ಲರೂ ಪಾಲಿಸಬೇಕು ಎಂದು ತಿಳಿಸಿದರು. 

ನಗರಸಭೆ ಪೌರಾಯುಕ್ತ ಎಂ ಚಂದ್ರಪ್ಪ ಮಾತನಾಡಿ ಅಂಬೇಡ್ಕರ್ ಜಾತಿಗಳನ್ನು ನೋಡಿ ಸಂವಿಧಾನ ರಚನೆ ಮಾಡಲಿಲ್ಲ ಮೀಸಲಾತಿ ಎಲ್ಲ ವರ್ಗಕ್ಕೂ ಸಲ್ಲಿದೆ ಕೆಲವರು ತಪ್ಪು ಕಲ್ಪನೆ ಮಾಡಿಕೊಂಡಿದ್ದಾರೆ ಸಂವಿಧಾನವನ್ನು ಉಳಿಸುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿದರು.

 ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ತಾಲೂಕು ಅಧ್ಯಕ್ಷ ಜಿಟಿ ವೀರಭದ್ರಯ್ಯ ನಗರಸಭೆ ಸದಸ್ಯ ರಮೇಶ್ ಗೌಡ ಇಂದ್ರೇಶ್ ಕುಮಾರ್ ಟಿ ವಿಜಯ್ ಕುಮಾರ್ ಡಿವೈಎಸ್ಪಿ ಟಿ ಬಿ ರಾಜಣ್ಣ ವೃತ್ತ ನಿರೀಕ್ಷಕ ಕೆ ಸಮಿಉಲ್ಲ ನಗರಸಭೆ ಪೌರಾಯುಕ್ತ ಸಿ ಚಂದ್ರಪ್ಪ ದಿವಾಕರ್ ಗಿರೀಶ್ ತಿಪ್ಪೇಸ್ವಾಮಿ ಚೌಳೂರು ಪ್ರಕಾಶ್ಸಮಾಜ ಕಲ್ಯಾಣ ಇಲಾಖೆ ಡಿ ದಯಾನಂದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page