ಹಿರಿಯೂರು :
ಬಾಲಕಾರ್ಮಿಕರ ಹೋಬಳಿವಾರು ಟಾಸ್ಕ್ ಪೋರ್ಸ್ ಕಮಿಟಿ ಅಧಿಕಾರಿಗಳು ತಿಂಗಳಿಗೊಂದು ದಿನ ಬಾಲ ಕಾರ್ಮಿಕರ ಅನಿರೀಕ್ಷಿತ ದಾಳಿಯನ್ನು ಕೈಗೊಳ್ಳುವ ಮೂಲಕ ಮಕ್ಕಳ ರಕ್ಷಣೆಗೆ ಕ್ರಮಕೈಗೊಳ್ಳಬೇಕು ಎಂಬುದಾಗಿ ತಾಲ್ಲೂಕು ತಹಶೀಲ್ದಾರರು ಹಾಗೂ ತಾಲ್ಲೂಕು ಬಾಲಕಾರ್ಮಿಕ ಪುನರ್ವಸತಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ಕುಮಾರ್ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಟಾಸ್ಕ್ ಫೋರ್ಸ್ ಹಾಗೂ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಬಾಲ ಕಾರ್ಮಿಕರ ಹೋಬಳಿವಾರು ಟಾಸ್ಕ್ ಪೋರ್ಸ್ ಕಮಿಟಿ ರಚಿಸಲಾಯಿತು.
ತಂಡದ ವ್ಯಾಪ್ತಿಯಲ್ಲಿ ಬರುವ, ಬಾರ್, ರೆಸ್ಟೋರೆಂಟ್, ಗ್ಯಾರೇಜ್, ಕಟ್ಟಡ ನಿರ್ಮಾಣ, ಪೌಲ್ಟ್ರಿ ಫಾರ್ಮ್ ನಲ್ಲಿ ಅನಿರೀಕ್ಷಿತ ದಾಳಿಯನ್ನು ನಡೆಸಿ ಬಾಲಕಾರ್ಮಿಕ ಮಕ್ಕಳು ಕಂಡುಬಂದರೆ ತಕ್ಷಣ ತಪ್ಪಿತಸ್ಥ ಮಾಲೀಕರ ವಿರುದ್ಧ ಕ್ರಮಕೈಗೊಳ್ಳಬೇಕು ಎಂಬುದಾಗಿ ಅವರು ತಾಲ್ಲೂಕಿನ ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಭೆಯಲ್ಲಿ ನಗರಸಭೆ ಪೌರಾಯುಕ್ತರಾದ ಹೆಚ್.ಮಹಂತೇಶ್, ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಾರ್ಮಿಕ ನಿರೀಕ್ಷಕರು ಹಿರಿಯೂರು, ಬಾಲ ಕಾರ್ಮಿಕ ಯೋಜನೆ ಯೋಜನಾ ನಿರ್ದೇಶಕರು, ಶಿಕ್ಷಣ ಇಲಾಖೆ ಅಧಿಕಾರಿ. ಕೃಷಿ ಇಲಾಖೆ. ಶಿಶು ಅಭಿವೃದ್ಧಿ ಇಲಾಖೆ, ರಕ್ಷಣಾ ಘಟಕ ಸಿಬ್ಬಂದಿ, ಮಕ್ಕಳ ಸಹಾಯವಾಣಿ, ರೇಷ್ಮೆ ಇಲಾಖೆ ಅಧಿಕಾರಿ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments