ಚಳ್ಳಕೆರೆಜನ ಧ್ವನಿ ವಾರ್ತೆ ಏ 22
ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ದಿನಾಂಕ ಮುಗಿದ ಬೆನ್ನಲ್ಲೇ ಪಕ್ಷದ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಹಾಗೂ ಪಕ್ಷದ ಸೇರ್ಪಡೆ ಕಾರ್ಯಕ್ರಮಗಳೊಂದಿಗೆ ಚುನಾವಣಾ ಕಣ ರಂಗೇರಿದೆ. ಕಾಂಗ್ರೆಸ್ ಭದ್ರಕೋಟೆಯನ್ನು ಬೇದಿಯಸಲ್ಲು ಬಿಜೆಪಿ ಮುಂದಾಗಿದೆ.
ತಾಲೂಕಿನ ಹುಲಿಕುಂಟೆ ,ಬೆಳಗೆರೆ,ನಾರಾಯಣಪುರ, ಮಹದೇವಪುರ, ಚೌಳೂರು, ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಹಾಗೂ ಮನೆ ಮನೆಗೆ ಭೇಟಿ ನೀಡಿ ರೋಡ್ ಶೋ ಮೂಲಕ ಮತಯಾಚನೆ ಮಾಡಲು ಮುಂದಾಗಿದ್ದಾರೆ.
ಬಿಜೆಪಿ ಮುಖಂಡ ಜಯಪಾಲಯ್ಯ ಮಾತನಾಡಿ ತಾಲೂಕಿನಲ್ಲಿ ವಿವಿಧ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆಯಾ ಗುತ್ತಿರುವುದು. ಬಿಜೆಪಿ ಪಕ್ಷಕ್ಕೆ ಆನೆಬಲ ಬಂದಿದೆ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಅನಿಲ್ ಕುಮಾರ್ ಪ್ರತಿಯೊಬ್ಬರೂ ಮತಹಾಕುವ ಮೂಲಕ ಗೆಲುವು ನೀಡುವಂತೆ ತಿಳಿಸಿದರು.
ಮಂಡಲ ಅಧ್ಯಕ್ಷ ಸುರನಹಳ್ಳಿ ಶ್ರೀನಿವಾಸ್ ಮಾತನಾಡಿ ಕ್ಷೇತ್ರದಲ್ಲಿ ಕಮಲ ಅರಳುವುದು ಖಚಿತ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ಮನದಟ್ಟು ಮಾಡುವ ಮೂಲಕ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ತಿಳಿಸಿದರು.
ಬಿಜಿಪಿ ಅಭ್ಯರ್ಥಿ ಅನಿಲ್ ಕುಮಾರ್ ಮಾತನಾಡಿ ಕ್ಷೇತ್ರದ ಮತದಾರರು ಈ ಬಾರಿ ಬಿಜೆಪಿ ಪಕ್ಷಕ್ಕೆ ಮತ ನೀಡುವಂತೆ ಮತ ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಆಧ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಸೋಮಶೇಖರ್ ಮಂಡಿಮಠ್,ಬಾಳೆಕಾಯಿ ರಾಮದಾಸ್, ಮಾತೃಶ್ರೀ ಮಂಜುನಾಥ, ಬಸವರಾಜ್ ,ಹನುಮಂತರಾಯ, ಈರಣ್ಣ, ಶಿವಮೂರ್ತಿ,ಲೋಕಣ್ಣ,ಕರಿಯಣ್ಣ, ಬೊಮ್ಮಲಿಂಗಪ್ಪ, ಲಿಂಗಪ್ಪ, ಪ್ರಕಾಶ್ ಸೇರಿದಂತೆಇತರರಿದ್ದರು.
ಮತಯಾಚನೆ ಕಾಯಕ್ರಮಕ್ಕೆ ಅಭ್ಯರ್ಥಿಯನ್ನು ಕಾರ್ಯಕರ್ತರು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments