ಚಳ್ಳಕೆರೆ ಜನಧ್ವನಿ ವಾರ್ತೆ ಮಾ.31ಚಳ್ಳಕೆರೆ: ಯಾವುದೇ ಮಾಹಿತಿ ನೀಡದೆ, ವಾಲ್ಮೀಕಿ ಸಮಾಜವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕ್ಷೇತ್ರಕ್ಕೆ ಬಂದು ಹೋಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ದ ನಗರದಲ್ಲಿ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಅಸಮಾಧಾನ ಹೊರಹಾಕಿದ್ದಾರೆ.
ನಗರದ ಜೈರಾಮ್ ಕಚೇರಿಯಲ್ಲಿ ನಡೆದ ಬಿಜೆಪಿ ಪಕ್ಷದ ವಾಲ್ಮೀಕಿ ಸಮಾಜದ ಮುಖಂಡರು ಸಭೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿ ಪಕ್ಷದಲ್ಲಿ ನಿಷ್ಠಾಂವತ ನಾಯಕ ಸಮಾಜದ ಮುಖಂಡರು ಕಾರ್ಯಕರ್ತರು ಇದ್ದಾರೆ. ಮಾ.30 ರಂದು ಚಳ್ಳಕೆರೆ ಕ್ಷೇತ್ರ ಪ್ರವಾಸ ಮಾಡಿದ ಚಿತ್ರದುರ್ಗ ಲೋಕಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಯಾರಿಗೂ ಮಾಹಿತಿ ನೀಡದೆ, ಸಮಾಜದ ಮುಖಂಡರನ್ನು ಭೇಟಿ ಮಾಡದೆ ಕೆಲವು ಸಮಾಜದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಅವರಿಗೆ ವಾಲ್ಮೀಕಿ ಸಮಾಜದ ಮುಖಂಡರು, ಕಾರ್ಯಕರ್ತರ ಬೆಂಬಲ ಬೇಡವಾ..? ನೀವು ನಮ್ಮನ್ನು ಭೇಟಿ ಮಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಹೋದರೆ ನಮ್ಮ ಸಮಾಜ ಚುನಾವಣೆಯಲ್ಲಿ ಬೆಂಬಲದಿಂದ ಹಿಂದೆ ಸರಿಯಲಿದೆ ಎಂದು ಸಮಾಜದ ಮುಖಂಡರು ಒಕ್ಕೋರಲಿನಿಂದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಚಳ್ಳಕೆರೆ ವಿಧಾನಸಭಾ ಕ್ಷೇತ್ರವು ಎಸ್ಟಿ ಮೀಸಲು ಕ್ಷೇತ್ರದಲ್ಲಿ ಸುಮಾರು 60ಸಾವಿರ ವಾಲ್ಮೀಕಿ ಸಮಾಜ ಮತದಾರರು ಇದ್ದಾರೆ. ಆದರೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಚಳ್ಳಕೆರೆ ಕ್ಷೇತ್ರಕ್ಕೂ ಆಗಮಿಸಿದ್ದಾರೆ, ಯಾರಿಗೂ ಮಾಹಿತಿ ನೀಡದೆ ಕೆಲವು ಸಮಾಜದ ಮುಖಂಡರನ್ನು ಭೇಟಿ ಮಾಡಿ ಹೋಗಿದ್ದಾರೆ. ಅವರಿಗೆ ಅವರ ಮತಮಾತ್ರ ಬೇಕಾಗಿದೆ ಅವರೇ ಚುನಾವಣೆ ಮಾಡಲಿ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಸಭೆಯಲ್ಲಿ ನಗರಸಭೆ ಸದಸ್ಯ ಜಯಣ್ಣ ಮಾತನಾಡಿ ಬಿಜೆಪಿ ಸಂಸದ ಎ.ನಾರಾಯಣಸ್ವಾಮಿ ಕಳೆದ ಐದು ವರ್ಷದಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿರುವುದು ಶೂನ್ಯ. ಅವರ ಹಿಂದೆ-ಮುಂದೆ ಇದ್ದ ಇಲ್ಲಿನ ಮೂರು, ನಾಲ್ಕು ಬಿಜೆಪಿ ಮುಖಂಡರು ಎಲ್ಲ ಚೆನ್ನಾಗಿ ಸೌಲಭ್ಯಗಳು ಪಡೆದುಕೊಂಡರು, ನಾವು ನಾಲ್ಕು ಬಾರಿ ನಗರಸಭೆ ಸದಸ್ಯರಾದರು ನಾವು ಹೇಳಿದ ಅಭಿವೃದ್ಧಿ ಕಾರ್ಯಗಳು ಮಾಡಲಿಲ್ಲ, ಇನ್ನು ಸಾಮಾನ್ಯ ಕಾರ್ಯಕರ್ತರ ಕೆಲಸ ಕಾರ್ಯಗಳು ಮಾಡಿಕೊಡುತ್ತಾರಾ…? ಕಾರ್ಯಕರ್ತರಿಗೂ ಎನಾದರೂ ಸೌಲಭ್ಯಗಳನ್ನು ಕೊಟ್ಟರೆ ತಾನೇ ಪಕ್ಷವನ್ನು ಸಂಘಟನೆ ಮಾಡುವುದು ಎಂದು ಪ್ರಶ್ನೆ ಮಾಡಿದರು.
ಈ ವೇಳೆ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ, ಬಿಜೆಪಿ ಎಸ್ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಅನಿಲ್ ಕುಮಾರ್, ಬಿಜೆಪಿ ಮುಖಂಡ ಟಿ.ಮಂಜುನಾಥ್ ನಗರಸಭೆ ಸದಸ್ಯರಾದ ವೆಂಕಟೇಶ್, ಪಾಲಮ್ಮ, ಮುಖಂಡರಾದ ಜಯರಾಮ್, ತಾಪಂ ಮಾಜಿ ಉಪಾಧ್ಯಕ್ಷ ದೊರೆಬೈಯಣ್ಣ, ಈಶ್ವರ್ ನಾಯಕ, ವಿಶ್ವ ಹಿಂದು ಪರಿಷತ್ ಜಿಲ್ಲಾ ಉಪಾಧ್ಯಕ್ಷ ಡಾ.ಮಂಜುನಾಥ ಸೇರಿದಂತೆ ಬಿಜೆಪಿ ಕಾರ್ಯಕರ್ತರು ತಮ್ಮ ಅಭಿಪ್ರಆಯಗಳನ್ನು ಮಾತನಾಡಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯಾರ್ಥಿ ಗೋವಿಂದಕಾರಜೋಳ ತಾಲೂಕಿನ ವಿವಿಧ ಧಾರ್ಮಿಕ ಕ್ಷೇತ್ರ ಹಾಗೂ ಕೆಲ ಮುಖಂಡರ ಭೇಟಿಯಿಂದ ಬಿಜೆಪಿ ಪಕ್ಷದಲ್ಲಿ ಅಸಮದಾನಕ್ಕೆ ಕಾರಣವಾಗಿದೆ.
0 Comments