ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ದುರಾಡಳಿತಕ್ಕೆ ದೇಶದ ಜನತೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ: ಎನ್ ಪ್ರಕಾಶ್

by | 07/03/24 | ರಾಜಕೀಯ

ಚಳ್ಳಕೆರೆ: ದೇಶವನ್ನು ಆಳಿದ ಕಾಂಗ್ರೆಸ್ ಬಿಜೆಪಿ ಮತ್ತು ಇತರೆ ಪಕ್ಷಗಳು ಸಂವಿಧಾನವನ್ನು ಹೇಗೆ ದುರ್ಬಲ ಗೊಳಿಸುತ್ತಿದ್ದಾರೆ ಎಂಬುದನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಲು ಬಹುಜನ ಸಮಾಜವಾದಿ ಪಕ್ಷದ ರಾಜ್ಯ ಘಟಕದ ವತಿಯಿಂದ ಸಂವಿಧಾನ ಸಂರಕ್ಷಣೆ ಮತ್ತು ಸಂಪೂರ್ಣ ಜಾರಿಗಾಗಿ ಬಹು ಜನರ ನಡಿಗೆ ಪಾರ್ಲಿಮೆಂಟಿನ ಕಡೆಗೆ ಎಂಬ ಘೋಷಣೆಯೊಂದಿಗೆ ರಾಜ್ಯದ ನಾಲ್ಕು ವಿಭಾಗ ಮಟ್ಟದ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಹುಜನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಎನ್ ಪ್ರಕಾಶ್ ತಿಳಿಸಿದರು

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರುದೇಶದಲ್ಲಿ ಬಡತನ ಬಹುಜನ ಸಮಾಜವಾದಿ ಪಕ್ಷವನ್ನು ರಾಜ್ಯದಲ್ಲಿ ಸಂಘಟಿಸುವ ದೃಷ್ಟಿಯಿಂದ ಮಾರ್ಚ್ 9ರಂದು ದೇವನಹಳ್ಳಿಯಲ್ಲಿ 10ರಂದು ಸಕಲೇಶಪುರದಲ್ಲಿ 11ರಂದು ವಿಜಯಪುರದಲ್ಲಿ 12ರಂದು ಕಲಬುರ್ಗಿಯಲ್ಲಿ  ನಾಲ್ಕು ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ. ಎಂದು ಮಾಹಿತಿ ನೀಡಿದರು ಮಾಯಾವತಿಯವರ ಆಶಯದಂತೆ ಬಹುಜನರ ಪಕ್ಷವನ್ನು ಕಟ್ಟುವ ದೃಷ್ಟಿಯಿಂದ ಹಾಗೂ ಈ ದೇಶದ ಬಡತನ ನಿರುದ್ಯೋಗ ನಿವಾರಣೆಗಾಗಿ ಪಕ್ಷವು ಹೋರಾಟ ನಡೆಸುತ್ತಾ ಬಂದಿದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜವಾದಿ ಪಕ್ಷದಿಂದ ಜಿಲ್ಲೆಯಲ್ಲಿ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲ್ಲಿಸುವ ಮಹತ್ವಕಾಂಕ್ಷಿಯನ್ನು ಹೊಂದಿದ್ದೇವೆ ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಬೂಟಾಟಿಕೆಯ ಆಡಳಿತವನ್ನು ನಡೆಸುತ್ತಾ ಬಂದಿದೆ ಕಪ್ಪು ಹಣ ಹೊರ ತರುತ್ತೇವೆ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇವೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ವಂಚಿಸಿದ್ದಾರೆ ಅಲ್ಲದೆ 2018ರಲ್ಲಿ ಎಸ್ ಸಿ ಜನಾಂಗ ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ 2.30 ಲಕ್ಷ ಉದ್ಯೋಗಿಗಳಿದ್ದರೂ ಇಂದಿನ ಸರ್ವೆ ಪ್ರಕಾರ 1.44 ಲಕ್ಷ ಕ್ಕೆ ಇಳಿದಿದೆ ಎಸ್ ಟಿ ಜನಾಂಗದ ನೌಕರರು 1.15 ಲಕ್ಷ ಇದ್ದರು 85,400 ಉದ್ಯೋಗಿಗಳಿದ್ದಾರೆ ಮತ್ತು 2.6 ಲಕ್ಷ ಓಬಿಸಿ ಉದ್ಯೋಗಿಗಳಿದ್ದರೂ 1.84 ಲಕ್ಷಕ್ಕೆ ಇಳಿದಿದೆ ಎಲ್ಲವನ್ನು ಖಾಸಗಿಕರಣ ಮಾಡಿ ದೇಶದ ಜನರನ್ನು ನಿರುದ್ಯೋಗಿಗಳನ್ನಾಗಿ ಮಾಡುತ್ತಿದ್ದಾರೆ ಕೋವಿಡ್ ಸಂದರ್ಭದಲ್ಲಿ ನಿರ್ಗತಿಕರಾದ ಕುಟುಂಬಗಳಿಗೆ ಯಾವುದೇ ಸೌಲಭ್ಯಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ ರೈತರ ಕೃಷಿ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಹೋರಾಟ ನಡೆಸುತ್ತಿದ್ದರು ಮಂಡುತನ ಪ್ರದರ್ಶಿಸಿ ಹೋರಾಟವನ್ನು ಹತ್ತಿಕ್ಕಿ ದಮನಕಾರಿ ನೀತಿಯನ್ನು ಅನುಸರಿಸಲು ಹೊರಟಿದೆ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದ್ದೆ ಆದಲ್ಲಿ ಹಿಂದುಳಿದ ವರ್ಗಗಳಿಗೆ ಬಹುವಾಗಿ ಅನ್ಯಾಯವಾಗುತ್ತದೆ ಎಂಬುದರಲ್ಲಿ ಸಂಶಯವಿಲ್ಲ ಎಂದರು ಈ ಬಾರಿಯ ಲೋಕಸಭಾ ಚುನಾವಣೆಗೆ ಇವಿಎಂ ಮಷೀನ್ ನನ್ನು ಪಕ್ಷ ಬಲವಾಗಿ ವಿರೋಧಿಸುತ್ತದೆ ಅದರ ಬದಲಾಗಿ ಬ್ಯಾಲೆಟ್ ಪೇಪರ್ ಪದ್ದತಿಯನ್ನು ಜಾರಿಗೆ ತರಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.

ಪಕ್ಷದ ಉಪಾಧ್ಯಕ್ಷ ಲಕ್ಷ್ಮಮ್ಮ ಮಾತನಾಡಿ ಕಾಂಗ್ರೆಸ್ ಪಕ್ಷ ಸಂವಿಧಾನವನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದೆ ಬಹುಜನ ಸಮಾಜವಾದಿ ಪಕ್ಷವು ಸಂವಿಧಾನ ಜಾತವನ್ನು ಕಳೆದ ಒಂದು ವರ್ಷಗಳಿಂದ ಮಾಡುತ್ತಾ ಬರುತ್ತಿದೆ ಪ್ರತಿ ಹಳ್ಳಿಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ ರವರ ಆಶಯಗಳನ್ನು ಜನರಿಗೆ ಮನಮುಟ್ಟುವಂತೆ ತಿಳಿಸಿದ್ದೇವೆ ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಸಭೆಗೆ ಹೋಗಲು ತಡೆಯುವ ಪ್ರಯತ್ನ ಮಾಡಿದ್ದು ಕಾಂಗ್ರೆಸ್ ಪಕ್ಷ ಓಬಿಸಿ ವರ್ಗಕ್ಕೆ ಮೀಸಲಾತಿ ನೀಡುವುದನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿತ್ತು ಕಾಂಗ್ರೆಸ್ ಪಕ್ಷಕ್ಕೆ ಬಡಜನರು ಬಡವರಾಗಿ ಉಳಿಯಬೇಕು ಎಂಬ ಉದ್ದೇಶದಿಂದ ಭಾಗ್ಯಗಳನ್ನು ಘೋಷಣೆ ಮಾಡಿದೆ ಕಾಂಗ್ರೆಸ್ ಪಕ್ಷ 55 ವರ್ಷಗಳ ಆಳ್ವಿಕೆ ನಡೆಸಿದರು ಸಹ ಜನರನ್ನು ಬಡತನದಿಂದ ಮುಕ್ತ ಮಾಡುವಲ್ಲಿ ವಿಫಲವಾಯಿತು ಜನತೆಗೆ ಉಚಿತ ಅಕ್ಕಿ ನೀಡುವ ಬದಲು ರೈತರಿಗೆ ಭೂಮಿ ನೀಡಿದ್ದರೆ ರೈತನೇ ಬೆಳೆದು ಸಾಕುವ ಮಟ್ಟಿಗೆ ಬೆಳೆಯುತ್ತಿದ್ದರು. ಇಂತಹ ದುರಾಡಳಿತ ನಡೆಸುತ್ತಿರುವ ಬಿಜೆಪಿ ಕಾಂಗ್ರೆಸ್ ಪಕ್ಷಗಳನ್ನು ತಿರಸ್ಕರಿಸಲು ಜನತೆ ನಿರ್ಧರಿಸಿದ್ದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜವಾದಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಹುಜನ ಸಮಾಜವಾದಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್ ಆರ್ ಶ್ರೀನಿವಾಸ್ ಬಾಲರಾಜ್ ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page