ಹಿರಿಯೂರು:
ಪ್ರಧಾನಮಂತ್ರಿ ಸ್ವ-ನಿಧಿ ಯೋಜನೆಯಡಿಯಲ್ಲಿ ಬೀದಿವ್ಯಾಪಾರಿಗಳು ಮತ್ತು ಅವರ ಕುಟುಂಬದ ಅವಲಂಬಿತರಿಗೆ ಎಂಟು ರೀತಿಯ ಆರ್ಥಿಕ ಮತ್ತು ಸಾಮಾಜಿಕ ಭದ್ರತಾ ಯೋಜನೆ ಸೌಲಭ್ಯವಿದ್ದು, ಅದರ ಸದುಪಯೋಗ ಪಡೆದುಕೊಳ್ಳುವ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು ಎಂಬುದಾಗಿ ನಗರಸಭೆ ಪೌರಾಯುಕ್ತರಾದ ಎಚ್.ಮಹಾಂತೇಶ್ ಹೇಳಿದರು.
ನಗರದ ರೋಟರಿ ಸಭಾಂಗಣದಲ್ಲಿ ಡೇ ನಲ್ಮ್ ಯೋಜನೆಯಡಿ ನಗರ ವ್ಯಾಪ್ತಿಯಲ್ಲಿನ ಬೀದಿಬದಿ ವ್ಯಾಪಾರಿಗಳು ಹಾಗೂ ನಗರ ಮಾರಾಟ ಸಮಿತಿ ಸದಸ್ಯರಿಗೆ ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಆರ್ಥಿಕ ಸಾಕ್ಷರತಾ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಗಿರೀಶ್, ಎಸ್ ಬಿಐ ಬ್ಯಾಂಕಿನ ವ್ಯವಸ್ಥಾಪಕರಾದ ಮನೋಹರ್, ನಗರಸಭೆ ಸದಸ್ಯರಾದ ಅಂಬಿಕಾ ಆರಾಧ್ಯ, ಹಾಗೂ ನಗರ ಮಾರಾಟ ಸಮಿತಿ ಸದಸ್ಯರಾದ ಆಯೂಬ್ ಖಾನ್ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ವ್ಯವಸ್ಥಾಪಕರಾದ ಅತಿಕ್ ರಹಮಾನ್, ನಾಗರತ್ನಮ್ಮ, ಎಸ್.ರವಿಕುಮಾರ್, ರಾಜೇಂದ್ರನ್, ಮುನಿಯಮ್ಮ, ಪಾರ್ವತಮ್ಮ, ರವಿ, ಸುರೇಶ್ ಇತರರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments