ಚಳ್ಳಕೆರೆ ಏ 12 ಕೆರೆಯಲ್ಲಿನ ಫಲವತ್ತಾದ ಮಣ್ಣನ್ನು ರೈತರ ಜಮೀನುಗಳಿಗೆ ಒಡೆದುಕೊಳ್ಳಲು ಪರವಾನಿಗೆ ನೀಡಿದ್ದರೆ ಲೋಕಸಭಾ ಚುನಾವಣೆಯಲ್ಲಿ ಮತ ಬಹಿಷ್ಕಾರ ಮಾಡಲಾಗುವುದು ಎಂದು ದೇವರೆಡ್ಡಿಹಳ್ಳಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಚಳ್ಳಕೆರೆ ತಾಲೂಕೀನ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೇವರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಕಚೇರಿ ಮುಂದೆ ರೈತರು ಪ್ರತಿಭಟನೆ ಮಾಡುವ ಅಧಿಕಾರಿಗಳ ವಿರುದ್ದ ಅಕ್ರೋಷ ವ್ಯಕ್ತಪಡಿಸಿದ್ದಾರೆ.
ದೇವರೆಡ್ಡಿಹಳ್ಳಿ ಗ್ರಾಪಂ ವ್ಯಾಪ್ತಿಯ ಬುಕ್ಕಂಬೂದಿ ಕೆರೆಯಲ್ಲಿನ ಫಲವತ್ತಾದ ಮಣ್ಣನ್ನು ರೈತ ಜಮೀನುಗಳಿಗೆ ಹಾಕಿಕೊಳ್ಳಲು ಅನುಮತಿ ನೀಡುವಂತೆ ಸಣ್ಣನೀರಾವರಿ ಇಲಾಖೆ , ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಮನವಿ ನೀಡಿದರೂ ಅಧಿಕಾರಿಗಳು ಮಾತ್ರ ರೈತರ ಮನವಿಗ ಸ್ಫಂದಿಸುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ದ ಕಿರಿ ಕಾರಿದ್ದಾರೆ.
ಕಕೆರೆಯಲ್ಲಿನ ಫಲವತ್ತಾದ ಮಣ್ಣನ್ನು ರೈತರ ಜಮೀನುಗಳಿಗೆ ಹಾಕಿಕೊಂಡರೆ ಉತ್ತಮ ಇಳುವರಿ ಬರುತ್ತದೆ ಜತೆಗೆ ಕೆರೆಯಲ್ಲಿನ ಹೂಳು ತೆಗೆದಂತಾಗುತ್ತಾದೆ . ರೈತರು ಅನುಮತಿ ಕೇಳಿದ ಕೊಡಲು ಹಿಂದೇಟು ಹಾಕುತ್ತಾರೆ ರಸ್ತೆ ಅಭಿವೃದ್ದಿ ಸೇರಿದಂತೆ ಅಕ್ರಮ ಮಣ್ಣು ಸಾಗಾಟ ಮಾಡಿದರೆ ಮೌನವಹಿಸುತ್ತಾರೆ ರೈತರಿಗೆ ಕೆರೆಯಲ್ಲಿನ ಫಲವತ್ತಾದ ಮಣ್ಣು ಸಾಗಾಟ ಮಾಡಲು ಅನುಮತಿ ನೀಡದಿದ್ದರೆ ಲೋಕಸಭಾ ಚುನಾವಣೆಯಲ್ಲಿ ರೈತರು ಮತಚಲಾಯಿಸದೆ ಚುನಾವಣೆ ಬಹಿಷ್ಕರಿಸುವುದಾಗಿ ಶಿವಾರೆಡ್ಡಿ ತಿಪ್ಪೇಸ್ವಾಮಿ,ನಾಗೇಶ್ ಕುಮಾರ್ಮ ಮಲ್ಲಾರೆಡ್ಡಿ, ಹನುಮಂತರೆಡ್ಡಿ ಹಾಗೂ ದೇವರೆಡ್ಡಿಹಳ್ಳಿ ಗ್ರಾಮದ ರೈತರು ಆಗ್ರಹಿಸಿದ್ದಾರೆ.
0 Comments