ಬುದ್ಧನ ವಿಚಾರಧಾರೆಗಳನ್ನು ಇಂದಿನ ಯುವ ಪೀಳಿಗೆ ಅಳವಡಿಸಿಕೊಂಡರೆ ಸಮಾಜದಲ್ಲಿ ಸಹಬಾಳ್ವೆಯ ಜೀವನ ನಡೆಸಲು ಸಾಧ್ಯ ಡಾ. ಬಿ ರಾಜಶೇಖರಪ್ಪ 

by | 19/05/24 | ಪುಸ್ತಕ

ಚಳ್ಳಕೆರೆ: ಬುದ್ಧನು ದೊಡ್ಡದಾಗಿ ಉಪದೇಶವನ್ನು ಮಾಡದೆ ಸಣ್ಣ ಸಣ್ಣ ವಿಚಾರಗಳನ್ನು ಜನರಿಗೆ ಮನಮುಟ್ಟುವಂತೆ ತಿಳಿಸಿ ಸಮಾಜದಲ್ಲಿ ಶಾಂತಿ ಸಹ ಬಾಳ್ವೆಯ ಜೀವನ ನಡೆಸಲು ತನ್ನ ಬೋಧನೆಗಳ ಮೂಲಕ ಕರೆ ನೀಡಿದ ಮಾನವತವಾದಿ ಎಂದು ಹಿರಿಯ ಸಂಶೋಧಕ ಡಾ ಬಿ ರಾಜಶೇಖರಪ್ಪ ಅಭಿಪ್ರಾಯ ಪಟ್ಟರು. 

ತಾಲೂಕಿನ ತ್ಯಾಗರಾಜ ನಗರದಲ್ಲಿ ಹುಣ್ಣಿಮೆ ಪ್ರಕಾಶನ ಮತ್ತು ಪ್ರೀತಿ ಪುಸ್ತಕ ಪ್ರಕಾಶನ ಸಹಯೋಗದಲ್ಲಿ ಜಿ ವಿ ಆನಂದಮೂರ್ತಿರವರ ಬುದ್ಧನ ಕಥೆಗಳು ಎಂಬ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು ಗೌತಮ ಬುದ್ಧನು ತನ್ನ ವಿಚಾರಧಾರೆಗಳಿಂದ ಸರ್ವಧರ್ಮದ ಪ್ರತಿನಿಧಿಯಾಗಿ ಹೊರಹೊಮ್ಮಿದ ವ್ಯಕ್ತಿಯಾಗಿದ್ದಾರೆ ಯಾವುದೇ ಜಾತಿ ಮತ ಧರ್ಮದ ಭೇದ ಭಾವ ಇರಬಾರದು ದ್ವೇಷ ಭಾವನೆಯಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ ಎಂಬುದನ್ನು ಸಾರಿದ್ದಾರೆ ಆನಂದ ಮೂರ್ತಿಯವರು ತಮ್ಮ ಕೃತಿಯಾದ ಬುದ್ಧನ ಕಥೆಗಳು ಪುಸ್ತಕದಲ್ಲಿ ಬುದ್ಧನು ಬೋಧಿಸಿದ ತತ್ವಗಳನ್ನು ನಾವೆಲ್ಲರೂ ತಿಳಿದುಕೊಂಡಿದ್ದರು ಸಹ ಓದುಗರಿಗೆ ಸರಳವಾಗಿ ಬುದ್ಧನ ವ್ಯಕ್ತಿತ್ವವನ್ನು ಪರಿಚಯಿಸಿದ್ದಾರೆ ಎಂದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿನಿಮಾ ಇತಿಹಾಸಕಾರ ಹಾಗೂ ಪತ್ರಕರ್ತ ದೊಡ್ಡ ಹುಲ್ಲೂರು ರುಕ್ಕೋಜಿ ಮಾತನಾಡಿ ಗಾಂಧಿ ಬುದ್ಧ ಅಂಬೇಡ್ಕರ್ ರವರು ತಮ್ಮ ಸರಳ ವ್ಯಕ್ತಿತ್ವದ ಮೂಲಕ ಸಮಾಜಕ್ಕೆ ಉತ್ತಮವಾದ ಸಂದೇಶವನ್ನು ಸಾರಿದ್ದಾರೆ ನಮ್ಮ ನಡವಳಿಕೆಗಳಿಂದ ಬೇರೆಯವರಿಗೆ ತೊಂದರೆ ಆಗದಂತೆ ನಡೆದುಕೊಂಡಾಗ ಮಾತ್ರ ವ್ಯಕ್ತಿಗೆ ಉತ್ತಮವಾದ ಗೌರವ ದೊರೆಯುತ್ತದೆ ಎಂದು ತಿಳಿಸಿದರು. 

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ವಿಚಾರವಾದಿ ಮತ್ತು ಪರಿಸರ ಕಾರ್ಯಕರ್ತರಾದ ಡಾ. ಎಚ್ ಆರ್ ಸ್ವಾಮಿ ಮಾತನಾಡಿ ಗೌತಮ ಬುದ್ಧರು ಯಾವುದೇ ವಿಚಾರವನ್ನು ತಿಳಿಸುವ ಮುನ್ನ ಪರಿಶೀಲಿಸಿ, ಪರಾಮರ್ಶಿಸಿ ಅವಲೋಕಿಸಿ ಜನರಿಗೆ ಸರಳ ರೀತಿಯಲ್ಲಿ ತಿಳಿಸುತ್ತಿದ್ದರು ಇತ್ತೀಚಿನ ದಿನಗಳಲ್ಲಿ ಕೊಳ್ಳುಬಾಕ ಸಂಸ್ಕೃತಿ ಹೆಚ್ಚಾಗುತ್ತಿದ್ದು ಇದರಿಂದ ಸಮಾಜದ ಸ್ವಾಸ್ಥ್ಯ ಕದಡುತ್ತಿದೆ ಗೌತಮ ಬುದ್ಧರು ತಮ್ಮ ಶಾಂತಚಿತ್ತದಿಂದ ಸಮಸ್ಯೆಗಳನ್ನು ಬಗೆಹರಿಸಿದ ಕಥೆಗಳನ್ನು ನಾವು ಓದಿದ್ದೇವೆ ಒಬ್ಬ ವ್ಯಕ್ತಿ ತನಗೆ ಎದುರಾದ ಯಾವುದೇ ಕಷ್ಟಗಳನ್ನು ಹೇಗೆ ಪರಿಹರಿಸಿಕೊಳ್ಳಬೇಕು ಎಂಬುದನ್ನು ತಿಳಿಯಲು ಬುದ್ಧನ ವಿಚಾರಧಾರೆಗಳನ್ನು ತಿಳಿದಾಗ ಮಾತ್ರ ಆ ವ್ಯಕ್ತಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. 

ಇತ್ತೀಚಿನ ದಿನಗಳಲ್ಲಿ ಜೈಲಿಗೆ ಹೋಗಿ ಬಂದವರನ್ನು ಸಹ ಸನ್ಮಾನ ಮಾಡುತ್ತಿರುವುದನ್ನು ನೋಡಿದರೆ ಮುಂದಿನ ಪೀಳಿಗೆಗೆ ಯಾವ ರೀತಿಯ ಸಂದೇಶ ನೀಡುತ್ತಿದ್ದೇವೆ ಎಂಬುದು ಕಳವಳಕಾರಿಯಾದ ವಿಷಯವಾಗಿದೆ ಇಂದಿನ ಸಮಾಜದಲ್ಲಿ ಆದರ್ಶಗಳು ಮೌಲ್ಯಗಳು ಕುಸಿಯುತ್ತಿರುವುದರಿಂದ ನಮ್ಮಲ್ಲಿ ಮೊದಲು ಬುದ್ಧನ ಸಣ್ಣ ಸಣ್ಣ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಆದರ್ಶಪ್ರಾಯವಾದ ಬದುಕನ್ನು ಕಟ್ಟಿಕೊಳ್ಳಲು ಪ್ರಯತ್ನಿಸಬೇಕಿದೆ ಎಂದು ಕರೆ ನೀಡಿದರು. 

ಈ ಸಂದರ್ಭದಲ್ಲಿ ಲೇಖಕರಾದ ಜಿವಿ ಆನಂದಮೂರ್ತಿ ಕಾರ್ಯಕ್ರಮದ ಸಂಯೋಜಕರಾದ ಎನ್ಆರ್ ತಿಪ್ಪೇಸ್ವಾಮಿ ನಿಸರ್ಗ ಗೋವಿಂದರಾಜು ಸೇರಿದಂತೆ ಹಲವು ಸಾಹಿತ್ಯಾಸಕ್ತರು ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page