ಬೃಹತ್ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಣ್ಣುಗಳ ರಕ್ಷಣೆ ಅತ್ಯಮೂಲ್ಯವಾದುದು

by | 11/09/23 | ಆರೋಗ್ಯ


ಚಿತ್ರದುರ್ಗ ಸೆ.11:
ಕಣ್ಣುಗಳು ನಮ್ಮ ಆತ್ಮದ ಕಿಟಕಿಗಳಿದ್ದಂತೆ. ಅದರ ರಕ್ಷಣೆ ಅಮೂಲ್ಯವಾದದ್ದು. ಪ್ರತಿಯೊಬ್ಬರು ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಗೋನೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಅಂದತ್ವ ನಿವಾರಣಾ ವಿಭಾಗ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಶಂಕರ ಕಣ್ಣಿನ ಆಸ್ಪತ್ರೆ, ಬೆಂಗಳೂರು ದಿ ಟೈಟನ್ ಕಂಪನಿ ಲಿಮಿಟೆಡ್, ಗೋನೂರು ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಬೃಹತ್ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನೇತ್ರ ತಪಾಸಣೆ ಚಿಕಿತ್ಸಾ ಶಿಬಿರವು ಕೇವಲ ಈ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೇ, ಪ್ರತಿ ತಿಂಗಳು ಚಿತ್ರದುರ್ಗ ತಾಲ್ಲೂಕಿನ ಆಯ್ದ ಮೂರು ಗ್ರಾಮಗಳಲ್ಲಿ ಶಿಬಿರ ನಡೆಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಇದಲ್ಲದೆ ಗ್ರಾಮದ ಇತರೆ ಸಮಸ್ಯೆಗಳಿಗೂ ಸ್ಪಂದಿಸುತ್ತೇನೆ. ಅಲ್ಲದೆ ಸಂಚಾರಿ ಡಯಾಲಿಸಿಸ್ ಘಟಕ ಶೀಘ್ರದಲ್ಲೇ ಪ್ರಾರಂಭಿಸಲು ಯೋಜನೆ ರೂಪಿಸುತ್ತಿದ್ದೇನೆ ಎಂದರು.
ಚಿತ್ರನಟ, ಕಲಾವಿದ ದೊಡ್ಡಣ್ಣ ಮಾತನಾಡಿ, ಕಳೆದ 13 ವರ್ಷಗಳಿಂದ ಕಣ್ಣುಗಳ ಆರೈಕೆಗಾಗಿ ಸೇವೆ ಸಲ್ಲಿಸುತ್ತಾ, ಸಮಾಜ ಸೇವಕನಾಗಿ ಚಿತ್ರರಂಗದ ಒಬ್ಬ ನಟನಾಗಿ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿಯವರೆಗೂ ಒಟ್ಟು 1025 ಉಚಿತ ಶಸ್ತ್ರ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನ ಮಾಡಿಸಲಾಗಿದೆ. ಪಂಚ ಇಂದ್ರಿಯಗಳಲ್ಲಿ ಪ್ರಧಾನವಾದ ಇಂದ್ರಿಯ ಕಣ್ಣು ಆಗಿರುತ್ತದೆ. ಕಣ್ಣುಗಳನ್ನು ದಾನ ಮಾಡುವವರು ಮುಂದೆ ಬನ್ನಿ. ಅಂದತ್ವ ನಿವಾರಣೆಗಾಗಿ ಎಲ್ಲರೂ ಕೈ ಜೋಡಿಸಿ ಎಂದರು.
ಇದೇ ಸೆಪ್ಟೆಂಬರ್ 12ರಂದು ದೊಡ್ಡಸಿದ್ದವ್ವನಹಳ್ಳಿ, 13ರಂದು ಸಿದ್ದಾಪುರ ಗ್ರಾಮ ಪಂಚಾಯಿತಿ ಜಾಲಿಕಟ್ಟ ಗ್ರಾಮ, 14ರಂದು ಸೊಂಡೆಕೊಳ ಗ್ರಾಮ ಪಂಚಾಯಿತಿಯಲ್ಲಿ ಉಚಿತ ನೇತ್ರ ತಪಾಸಣೆ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ ನಡೆಯಲಿದೆ. ಆಯಾ ಗ್ರಾಮ ಪಂಚಾಯಿತಿಗಳ ಸಾರ್ವಜನಿಕರು ಶಿಬಿರದ ಉಪಯೋಗ ಪಡೆದುಕೊಳ್ಳಿ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆರ್ ರಂಗನಾಥ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಜಯಶ್ರೀ, ರಾಷ್ಟ್ರೀಯ ಅಂದತ್ವ ನಿವಾರಣ ಕಾರ್ಯಕ್ರಮದ ಅನುμÁ್ಠನಾಧಿಕಾರಿ ಡಾ. ಚಂದ್ರಶೇಖರ್, ಗೋನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಂಡಮ್ಮ, ತಾಪಂ ಇಒ ಹನುಮಂತಪ್ಪ, ಎಸ್‍ಆರ್‍ಎಸ್ ವಿದ್ಯಾಸಂಸ್ಥೆಯ ಲಿಂಗಾರೆಡ್ಡಿ, ಪಿಡಿಒ ಹೆಚ್.ಯರ್ರಿಸ್ವಾಮಿ, ಶಂಕರ ಕಣ್ಣಿನ ಆಸ್ಪತ್ರೆಯ ಮಂಜುನಾಥ್ ಸೇರಿದಂತೆ ಮತ್ತಿತರರು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page