ಹಾಸನ, 04 ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕಸ್ಕೆ ಬಯಲು ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಪರಿಣಾಮ ಸ್ಥಳದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರೆ, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಕೆ.ಆರ್.ಪುರಂನ ಸುರೇಖಾ (45) ಮೃತ ಮಹಿಳೆ. ಇನ್ನು ಗಾಯಗೊಂಡವರಲ್ಲಿ ಏಳು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ರಾಜನಗುಂಟೆಯಿಂದ 25 ಮಂದಿ ಹಾಗೂ ಕೆ.ಆರ್.ಪುರಂನಿಂದ 25 ಮಂದಿ ಸೇರಿಕೊಂಡು ಖಾಸಗಿ ಬಸ್ನಲ್ಲಿ ಪ್ರವಾಸಕ್ಕೆ ಹೋಗಿದ್ದರು. ಧರ್ಮಸ್ಥಳ, ಸುಬ್ರಹ್ಮಣ್ಯ, ಶೃಂಗೇರಿಗೆ ಪ್ರವಾಸಕ್ಕೆ ಹೊರಟ್ಟಿದ್ದಾಗ ಬೇಲೂರು ತಾಲ್ಲೂಕಿನ ಕಸ್ಕೆ ಬಯಲು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಸದ್ಯ ಗಾಯಾಳುಗಳನ್ನು ಬೇಲೂರು ತಾಲ್ಲೂಕು ಆಸ್ಪತ್ರೆ ಹಾಗೂ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಬೇಲೂರು ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
0 Comments