ಬೆಲೆ ಏರಿಕೆಯ ನಡುವೆಯೂ ದೀಪಾವಳಿಗೆ ಖರೀದಿಸಲು ಮುಗಿ ಬಿದ್ದ ಜನರು.

by | 12/11/23 | ಜನಧ್ವನಿ, ಸುದ್ದಿ

‌‌‌ ಚಳ್ಳಕೆರೆ. ಜನಧ್ವನಿ ವಾರ್ತೆ ನ.12 ದೀಪಾವಳಿಯ ಹಬ್ಬದಲ್ಲಿ ಖರೀದಿ ಭರಾಟೆ ಜೋರಾಗಿದ್ದು, ಮಾರುಕಟ್ಟೆ ಸೇರಿದಂತೆ ವಿವಿಧ ಅಂಗಡಿ ಮುಂಗಟ್ಟುಗಳಲ್ಲಿ ಮುಗಿ ಬಿದ್ದ ಜನರು.


ಹೌದು ಇದು ಚಳ್ಳಕೆರೆ ನಗರದ ನೆಹರು ವೃತ್ತ, ಖಾಸಗಿ ಬಸ್ ನಿಲ್ದಾಳ,ಬೆಂಗಳೂರು ರಸ್ತೆ, ಪಾವತಗಡೆ ರಸ್ತೆ ,ತರಕಾರಿ ಮಾರು ಕಟ್ಟೆ ಸೇರಿದಂತೆ ವಿವಿಧ ಪ್ರಮುಖ ರಸ್ತೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಗೆ ಎಲ್ಲೆಡೆ ಮನೆಯ ಮುಂಭಾಗದಲ್ಲಿ ಕಟ್ಟಲಾಗುವ ಆಕಾಶಬುಟ್ಟಿ, ಪ್ಲಾಸ್ಟಿಕ್ ಮಾವಿನ ತೋರಣ ಮತ್ತು ಹಣತೆ ಮತ್ತಿತರ ವಸ್ತುಗಳ ಖರೀದಿಗೆ ಗೃಹಿಣಿಯರು ಆಸಕ್ತಿ ತೋರಿದರೆ, ಹಸಿರು ಪಟಾಕಿಗಳ ಖರೀದಿಯ ಭರಾಟೆಯಲ್ಲಿ ಮಕ್ಕಳು, ಯುವಕ-ಯುವತಿಯರು ಖರೀದಿಸಲು ಮುಂದಾಗಿದ್ದರು.
ಈಗಾಗಲೇ ಮಾರುಕಟ್ಟೆಯಲ್ಲಿ ಆಕಾಶ ಬುಟ್ಟಿಗಳು ಝಗಮಗಿಸುತ್ತಿವೆ. ಪ್ರತಿವರ್ಷದಂತೆ ಈ ವರ್ಷವೂ ಮಣ್ಣಿನ ದೀಪಕ್ಕೆ ಭಾರಿ ಬೇಡಿಕೆ ಬಂದಿದೆ. ವಿಭಿನ್ನ ಮಾದರಿಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಮಣ್ಣಿನ ದೀಪ ,ಹಣ್ಣು ಹೂವು, ಬಾಳೆ ಕಂದು ಹಾಗೂ ಎಲೆ, ಮಾವಿನ ಸೊಪ್ಪು ಜನರು ಮುಗಿಬಿದ್ದು ಖರೀದಿಸುತ್ತಿದ್ದಾರೆ.

ಒಂದು ಡಜನ್ ಹಣತೆಗೆ ರೂ.35 ರಿಂದ 50 ರವರೆಗೆ ಮಾರಾಟ ಮಾಡಲಾಗುತ್ತಿದೆ. ಆಧುನಿಕ ಭರಾಟೆಯಲ್ಲಿ ಪಿಂಗಾಣಿ ಹಣತೆ ವ್ಯಾಪಾರಕ್ಕೆ ಇಂದಿಗೂ ಬೇಡಿಕೆ ಹೆಚ್ಚಿದೆ.

ನಗರದ ಸೂಪರ್ ಮಾರುಕಟ್ಟೆಯಲ್ಲಿನ ಬಟ್ಟೆ ಮತ್ತು ಫ್ಯಾನ್ಸಿ ಸ್ಟೋರ್‌ಗಳು ಫುಲ್ ರಶ್ ಆಗಿದ್ದವು. ತಮ್ಮ ಕುಟುಂಬಗಳಿಗೆ ಬಟ್ಟೆ ಸೇರಿ ಇತರ ವಸ್ತುಗಳನ್ನು ಸಾರ್ವಜನಿಕರು ಖರೀದಿಸಿದರು. ಅಷ್ಟೇ ಅಲ್ಲದೇ ಕಿರಾಣಿ ಅಂಗಡಿಗಳಲ್ಲಿ ಪೂಜಾ ಸಾಮಗ್ರಿ ಮಾರಾಟ ಜೋರಾಗಿತ್ತು.
ಗ್ರಾಹಕರ ಜೇಬಿಗೆ ಕತ್ತರಿ.


ಬೆಂಗಳೂರು ಸೇರಿದಂತೆ ವಿವಿಧೆಡೆ ಪಟಾಕಿ ಗೋದಾಮಿನಲ್ಲಿ ಬೆಂಕಿಹೊತ್ತಿಕೊಂಡ ಪರಿಣಾಮ ಸಾವು ನೋವು ಕಂಡ ಹಿನ್ನೆಲೆಯಲ್ಲಿ ಪರಿಸರ ಹಾನಿಕಾರಕ ಪಟಾಕಿ ನಿಶೇಷದ ಮಾಡಲಾಗಿದೆ.
ನಗರದ ಬಿಸಿನೀರು ಮುದ್ದಪ್ಪ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಪ್ರತಿ ವರ್ಷ ಪಟಾಕಿ ಅಂಗಡಿಗಳನ್ನು ಸಾಲಾಗಿ ಒಂದಕ್ಕೊಂದು ತಾಕಿ ಕೊಂಡಿರತ್ತಿದ್ದವು ಈ ಬಾರಿ ಒಂದಕ್ಕೊಂದು ಅಂತರ ಕಾಯ್ದುಕೊಂಡು ನಿರ್ಮಿಸಲಾಗಿದೆ.
ಹಾನಿಕಾರಕ ಪಟಾಕಿ ನಿಶೇಷದಿಂದಾಗಿ ಈ ಬಾರಿ ಪರಿಸರ ಮಾಲಿನ್ಯಗಳ ಪಟಾಕಿ ನೀಷೇದದ ನಡುವೆ ಈ ಬಾರಿ ಹಸಿರು ಪಟಾಕಿ ಮಾತ್ರ ಮಾರಟ ಮಾಡಲು ಅವಕಾಶ ನೀಡಿರುವುದರಿಂದ ವಿವಿಧ ಪಟಾಕಿಗಳ ಬೆಲೆ ಗಗನಕ್ಕೇರಿದ್ದರೂ ಸಹ ದೀಪಾವಳಿ ಹಬ್ಬ ಆಚರಣೆಗೆ ಪಟಾಕಿ ಖರೀದಿಯಲು ಮುಗಿದ್ದ ಬಿದ್ದ ದೃಶ್ಯ ಕಂಡು ಬಂತು.
ಟ್ರಾಫಿಕ್ ಜಾಮ್.


ನಗರದ ಪಾವಗಡ ರಸ್ತೆಯಲ್ಲಿ ಒಂದು ಭಾಗದ ರಸ್ತೆಯಲ್ಲಿ ಹೂವು ,ಹಣ್ಣು, ಬಾಳೆ ಕಂದು, ಬಾಳೆ ಎಲೆ ಸೇರಿದಂತೆ ವಿವಿಧ ವಸ್ತುಗಳ ಮಾರಾಟಗಾರರು ಒಂದು ಭಾಗದ ರಸ್ತೆಯನ್ನು ಸಂಪೂರ್ಣವಾಗಿ ಅಕ್ರಮಿಸಿಕೊಂಡಿದ್ದರಿಂದ ಹಾಗೂ ಖರೀದಿ ಮಾಡಲು ಬಂದವರು ಸಹ ತಮ್ಮ ದ್ವಿಚಕ್ರವಾಹನಗಳನ್ನು ರಸ್ತೆಯಲ್ಲೇ ಅಡ್ಡದಿಡ್ಡಿ ನಿಲ್ಲಿಸಿದ್ದರಿಂದ ಟ್ರಾಫಿಕ್ ಕಿರಿಕಿರಿಯಿಂದ ವಾಹನ ಸವಾರರ ಪ್ರಯಾಸದಿಂದ ಸಂಚಿರುವಂತಾಗಿತ್ತು ಪಾವಗಡ ಕಡೆಯಿಂದ ತುರ್ತು ವಾಹನ ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ವಾಹನಗಳ ದಟ್ಟಣೆ ಹಾಗೂ ಅಡ್ಡ ದಿಡ್ಡಿ ನಿಲುಗಡೆಯಿಂದ ರೋಗಿಯನಯ್ಯುವ ಅಂಬ್ಯುಲೆನ್ಸ್ ವಾಹನಕ್ಕೂ ಸಹ ಟ್ರಾಫಿಕ್ ಬಿಸಿ ತಟ್ಟಿದ ಘನನೆ ನಡೆಯಿತು ಒಟ್ಟಾರೆ ಬೆಲೆಗಳ ಏರಿಕೆ ಹಾಗೂ ಬರಗಾಲದ ಬಿಸಿಯ ನಡುವೆಯೂ ದೀಪಾವಳಿ ಹಬ್ಬದ ಖರೀದಿ ಜೋರಾಗಿತ್ತು.
ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಕೋರುವ

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page