ಚಿತ್ರದುರ್ಗ :
ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು ಶೇಕಡ 30ರಷ್ಟು ಬೆಳೆವಿಮೆ ರೈತರ ಖಾತೆಗೆ ಜಮಾ ಆಗಿರುವುದಿಲ್ಲ, ಈ ಕೂಡಲೇ ಬೆಳೆವಿಮೆಯನ್ನು ಬಿಡುಗಡೆ ಮಾಡಿ ರೈತ ಖಾತೆಗೆ ಹಣ ವರ್ಗಾವಣೆ ಮಾಡಬೇಕು ಎಂಬುದಾಗಿ ತಾಲ್ಲೂಕು ಅಧ್ಯಕ್ಷರಾದ ಧನಂಜಯ ಒತ್ತಾಯಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ರಾಜ್ಯರೈತಸಂಘದ ವತಿಯಿಂದ ಬೆಳೆ ವಿಮೆ ಮತ್ತು ಬೆಳೆ ನಷ್ಟ ಪರಿಹಾರದಲ್ಲಿ ಆಗಿರುವ ತಾರತಮ್ಯವನ್ನು ಸರಿಪಡಿಸುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ನಂತರ ಅವರು ಮಾತನಾಡಿದರು.
ಬೆಳೆ ನಷ್ಟ ಪರಿಹಾರವು ಮಳೆಯಾಶ್ರಿತ ಬೆಳೆಗಳಾದ ಶೇಂಗಾ, ಮತ್ತು ಮೆಕ್ಕೆಜೋಳಕ್ಕೆ ಮಾತ್ರ ನೀಡಿರುತ್ತಾರೆ, ಇನ್ನುಳಿದ ಇತರೆ ಬೆಳೆಗಳಿಗೆ ಬೆಳೆನಷ್ಟ ಪರಿಹಾರ ನೀಡಿರುವುದಿಲ್ಲ, 2023-24ರಲ್ಲಿ ರೈತರು ತೀವ್ರ ಬರಗಾಲ ಅನುಭವಿಸಿದ್ದು 2024 ರ ಮುಂಗಾರು ಮಳೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಬಿತ್ತನೆ ಮಾಡಲು ಉಚಿತವಾಗಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳನ್ನು ವಿತರಿಸಬೇಕು ಎಂದರಲ್ಲದೆ,
ಸರ್ಕಾರದ ಆದೇಶದ ಪ್ರಕಾರ ರೈತರ ಖಾತೆಗೆ ಬೆಲೆ ನಷ್ಟ ಪರಿಹಾರ ಹಣ ಹಾಗೂ ಇತರೆ ವೃದ್ಧಾಪ್ಯ ವೇತನ, ವಿಧವಾ ವೇತನಗಳನ್ನು ರೈತರ ಸಾಲಕ್ಕೆ ಜಮಾ ಮಾಡಬಾರದೆಂದು ಆದೇಶವಿದ್ದರೂ ಕೂಡ ಬ್ಯಾಂಕ್ ಮ್ಯಾನೇಜರ್ ಗಳು ಸರ್ಕಾರದಿಂದ ಬಂದಂತಹ ಎಲ್ಲಾ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಂಡಿರುತ್ತಾರೆ,
ಈ ಕೂಡಲೇ ಜಿಲ್ಲಾಧಿಕಾರಿಗಳು ಬ್ಯಾಂಕ್ ಮ್ಯಾನೇಜರ್ ಗೆ ಮಾಹಿತಿ ನೀಡಿ ಸರ್ಕಾರದ ಸಹಾಯಧನವನ್ನು ರೈತರ ಸಾಲಕ್ಕೆ ಜಮಾ ಮಾಡಿಕೊಳ್ಳಬಾರದೆಂದು ಸೂಕ್ತ ನಿರ್ದೇಶನ ನೀಡಬೇಕು ಎಂಬುದಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ರೈತಸಂಘದ ಜಿಲ್ಲಾಧ್ಯಕ್ಷರಾದ ಬಸ್ತಿಹಳ್ಳಿ ಸುರೇಶ್ ಬಾಬು, ರಾಜ್ಯ ಹಿರಿಯ ಉಪಾಧ್ಯಕ್ಷರಾದ ಕೆ.ಪಿ.ಭೂತಯ್ಯ, ತಾಲ್ಲೂಕು ಅಧ್ಯಕ್ಷ ಧನಂಜಯ, ಬಾಬು ರು, ಆರ್. ಚೇತನ್ ಯಳನಾಡು, ಎಂ.ಬಿ. ತಿಪ್ಪೇಸ್ವಾಮಿ ಮಲ್ಲಾಪುರ, ರಂಗಸ್ವಾಮಿ ಇಸಮುದ್ರ, ಕೆ.ಎಂ.ಕಾಂತರಾಜು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments