ಬೆಳಗಾವಿ ಸುವರ್ಣವಿಧಾನಸೌಧ ಡಿ.13: ಬೆಳೆ ವಿಮೆ ಹಾಗೂ ಬೆಳೆ ಪರಿಹಾರದಲ್ಲಿ ಆಗಿರುವ ಅವ್ಯವಹಾರವನ್ನು ಸಿಒಡಿ ತನಿಖೆಗೆ ವಹಿಸಬೇಕು ಎಂದು ವಿಧಾನಸಭಾ ಅಧಿವೇಶನದಲ್ಲಿ ಆಗ್ರಹಿಸಿದೆ.
ಇಂದು ಅಧಿವೇಶನದಲ್ಲಿ ಮಾತನಾಡಿ, ಚಳ್ಳಕೆರೆ ತಾಲೂಕಿನ ಪಿ.ಮಹಾದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಯೋಜನೆಯಡಿ ನೋಂದಾಯಿತ ಖಾತೆದಾರರಿಗೆ ಬೆಳೆ ವಿಮೆ ಪರಿಹಾರ ನೀಡುವಲ್ಲಿ ಅವ್ಯವಹಾರವಾಗಿರುವುದನ್ನು ಕೃಷಿ ಸಚಿವ ಎನ್.ಚಲುವನಾರಾಯಣಸ್ವಸಮಿ ಯವರ ಗಮನಕ್ಕೆ ತಂದಿದ್ದಾರೆ
ತಾಲೂಕಿನ ಬೀಳು ಭೂಮಿ ಹಾಗೂ ನೋಂದಾಯಿತ ಬೆಳೆಯಲ್ಲದ ಬೇರೆ ಬೆಳೆಗಳಿಗೆ 80 ಪ್ರಕರಣಗಳಲ್ಲಿ 83 ಲಕ್ಷ ರೂ. ಗೂ ಹೆಚ್ಚು ಬೆಳೆ ವಿಮೆ ದುರುಪಯೋಗವಾಗಿದೆ. ಮೂಲ ಖಾತೆದಾರರ ಬದಲಿಗೆ ಬೇರೆಯೊಬ್ಬರನ್ನು ನೋಂದಣಿ ಮಾಡಿಸಿದ 2 ಪ್ರಕರಣಗಳಲ್ಲಿ 1.90 ಲಕ್ಷ ರೂ. ಬೆಳೆ ವಿಮೆ ಹಣ ಪಡೆದು ವಂಚಿಸಲಾಗಿದೆ. ಈ ಬಗ್ಗೆ ಕ್ರಮವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಚಳ್ಳಕೆರೆ ತಾಲೂಕಿನ 20 ಪಂಚಾಯಿತಿ ವ್ಯಾಪ್ತಿಯನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆನು.
ಚಳ್ಳಕೆರೆ ತಾಲ್ಲೂಕಿನಲ್ಲಿ ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ಉಂಟಾದ ಅವ್ಯವಹಾರದ ಬಗ್ಗೆ ಶಾಸಕ ಟಿ.ರಘುಮೂರ್ತಿ ಅವರು ಬೆಳಗಾವಿಯ ಚಳಿಗಾಲದ ವಿಧಾನಸಭಾ ಅಧಿವೇಶನದಲ್ಲಿ ಕೃಷಿ ಸಚಿವರನ್ನು ಒತ್ತಾಯಿಸಿದ್ದಾರೆ.
ಶಾಸಕ ಟಿ.ರಘುಮೂರ್ತಿ ಈಗಾಗಲೆ ಜಸಂಪರ್ಕಸಭೆ. ವಿಧಾನಸಭೆ ಅಧಿವೇಶನದಲ್ಲಿ ಬೆಳೆ ಪರಿಹಾರದ ಭ್ರಷ್ಟಾಚಾರದ ಬಗ್ಗೆ ಪದೇ ಪದೆ ಧ್ವನಿ ಎತ್ತುತ್ತಿರುವುದರಿಂದ ಬೆಳೆ ಪರಿಹಾರ ವಂಚನೆ ಮಾಡಿದವರ ಎದೆಯಲ್ಲಿ ನಡುಕವನ್ನುಂಟು ಮಾಡಿದೆ.
0 Comments