ಬೆಳೆ ಕಾಟಾವ್ ಸಮೀಕ್ಷೆ ಸಿಬ್ಬಂದಿಗಳು ಮಾಡಿದ ಯಡವಟ್ಟು- ಅನ್ನತಾದ ಅರ್ಜಿಸಲ್ಲಿಸದಿದ್ದರೂ ಕೃಷಿ ಭೂಮಿ ಕೃಷಿಯೇತರ ಎಂದು ನಮೂದು, ಸರಕಾರಿ ಸೌಲಭ್ಯದಿಂದ ಅನ್ನದಾತರು ವಂಚಿತ.

by | 16/05/24 | ತನಿಖೆ ವರದಿ


ಚಳ್ಳಕೆರೆ ಜನಧ್ವನಿ ವಾರ್ತೆ ಮೇ 16 ಭೂಮಿ ವಿವರ ನೀಡುವ ಪಹಣಿಗೆ ಬೆಳೆ ವಿವರ ನಮೂದಿಸುವಲ್ಲಿ ಬೆಳೆ ಕಟಾವ್ ಸಮೀಕ್ಷೆ ಸಿಬ್ಬಂದಿಗಳು ಮಾಡಿದ ಎಡವಟ್ಟಿನಿಂದ ರೈತರು ಸರಕಾರದ ಸೌಲಭ್ಯದಿಂದ ವಂಚಿತರಾಗಿರುವುದು ಬೆಳೆದಿಕೆ ಬಂದಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ರೀಸಂ ನಂ 64/2,1/23 ಎಕರೆ, 73 ರಲ್ಲಿ10/33 ಎಕರೆ,17/3 ರಲ್ಲಿ 1/08 ಎಕರೆ, ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಕೃಷಿಯೇತರ ಎಂದುನಮೂದು ಮಾಡಿರುವುದರಿಂದ ಬೆಳೆ ವಿಮೆ, ಬೆಳೆ ಪರಿಹಾರ, ಪಿ.ಎಂ.ಕಿಸಾನ್ ಸೌಲಭ್ಯಗಳಿಂದ ವಂಚನೆಯಾಗಿರುವ ಜತೆಗೆ ಪಾಲುವಿಭಾಗ, ದುರಸ್ಥಿ, ಮಾಡಿಸಿಕೊಳ್ಳಲು ಬರದಾಂಗಿದ್ದು ಸುಮಾರು ಬೆಳೆ ಕಟಾವ್ ಸಮೀಕ್ಷೆ ಸಿಬ್ಬಂದಿಗಳು ಮಾಡಿರುವ ಯಡವಟ್ಟಿನಿಂದ ಸುಮಾರು ಎರಡು ವರ್ಷಗಳಿಂದ ಕಂದಾಯ , ಕೃಷಿ ಇಲಾಖೆ ಕಚೇರಿಗಳಿಗೆ ಅಲೆದಾರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತರು ಆರೋಪಿಸಿದ್ದಾರೆ.
ಭೂ ಪರಿವರ್ತನೆ ಮಾಡಲು ನಾವು ಅರ್ಜಿಸಲ್ಲಿಸಿಲ್ಲ ಭೂ ಪರಿವರ್ತನೆ ಮಾಡಿಕೊಳ್ಳಲು ಲಕ್ಷ ಗಟ್ಟಲೆ ಹಣ ಕರ್ಚಾಗುತ್ತದೆ ಆದರೆ ನಾವು ಅರ್ಜಿನೇ ಸಲ್ಲಿಸಿ ಆದರೂ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಕೃಷಿ ಭೂಮಿಯನ್ನು ಕೃಷಿಯೇತರ ಭೂಮಿ ಎಂದು ತಪ್ಪು ನಮೂದು ಮಾಡಿದ್ದಾರೆ.


ಕಂದಾಯ ಇಲಾಖೆ ಕೃಷಿ ಇಲಾಖೆಯತ್ತ ಬೊಟ್ಟು ತೋರಿಸಿದರೆ , ಕೃಷಿ ಇಲಾಖೆ ಕಂದಾಯ ಇಲಾಖೆಯತ್ತ ಬೊಟ್ಟು ತೋರಿಸುತ್ತದೆ ಸುಮಾರು ಎರಡು ವರ್ಷಗಳಿಂದ ಅಲೆದಾಡಿದರೂ ಸಹ ಅನ್ನದಾತರ ಕಷ್ಟಕ್ಕೆ ಸ್ಪಂದಿಸಬೇಕಿದ್ದ ಕಂದಾಯ, ಕೃಷಿ ಇಲಾಖೆ ಅಧಿಕಾರಿಗಳಿ ದೂರು ನೀಡಿದರೂ ಸಹ ಸರಿಪಡಿಸಲು ಮುಂದಾಗುತ್ತಿಲ್ಲ ಎಂದು ರೈತರು ಆಳಲು ತೋಡಿಕೊಂಡಿದ್ದಾರೆ.
ಇ-ಆಡಳಿತಕ್ಕೆ ಒತ್ತು ಕೊಡುವ ಸಲುವಾಗಿ ಬೆಳೆ ವಿವರ, ಸಮೀಕ್ಷೆ ನಡೆಸುವವರ ವಿವರಗಳು ರೈತರಿಗೆ ಅಂಗೈನಲ್ಲೇ ಸಿಗುವಂತೆ ಮಾಡುವ ಉದ್ದೇಶದಿಂದ ಸರಕಾರ ‘ಬೆಳೆ ದರ್ಶಕ್’ ಮೊಬೈಲ್ ಆ್ಯಪ್ ಪರಿಚಯಿಸಿದೆ. ಗ್ರಾಮಲೆಕ್ಕಿಗರು, ತರಬೇತಿ ಪಡೆದ ಖಾಸಗಿ ವ್ಯಕ್ತಿಗಳು ಗ್ರಾಮಗಳಿಗೆ ತೆರಳಿ ಆಯಾ ಸರ್ವೆ ನಂಬರ್ ಜಮೀನಿಗೆ ಮಾಲೀಕನ ಹೆಸರು, ಬೆಳೆ ವಿವರ ಜತೆಗೆ ಫೋಟೊವನ್ನು ಆ್ಯಪ್ಗೆ ಅಪ್ಲೋಡ್ ಮಾಡಬೇಕು. ಈ ಮಾಹಿತಿ ಕಂದಾಯ, ಕೃಷಿ ಇಲಾಖೆಯಲ್ಲಿಲಭ್ಯ ಇರಲಿದೆ. ‘ಬೆಳೆ ದರ್ಶಕ್’ನಲ್ಲಿನಮೂದಿಸಿರುವ ಮಾಹಿತಿಯೇ ಬೆಂಬಲ ಬೆಲೆಗೆ ಮಾರಾಟ ಮಾಡುವುದಕ್ಕೆ, ಬೆಳೆ ಪರಿಹಾರ, ಬೆಳೆ ವಿಮೆ ಸೇರಿದಂತೆ ಸರಕಾರಿ ಸೌಲಭ್ಯ ಪಡೆಯಲು ಸಹಕಾರಿಯಾಗಲಿದೆ ಆದರೆ ಇಲಾಖೆಯವರು ತಪ್ಪು ಮಾಹಿತಿ ಎಂಟ್ರಿ ಮಾಡಿರುವುದರಿಂದ ಎಲ್ಲಾ ಸೌಲಭ್ಯಗಳಿಂದ ವಂಚನೆಯಾಗುವಂತೆ ಮಾಡಿದೆ.
ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಕೃಷಿ ಭೂಮಿಯನ್ನು ಕೃಷಿಯೇತರ ಎಂದು ತಪ್ಪು ಮಾಹಿತಿ ನೀಡಿ ರೈತರನ್ನು ಅಲೆದಾಡಿಸುವಂತೆ ಹಾಗೂ ಸಾರದ ಸೌಲಭ್ಯಗಳಿಂದ ವಂಚಿಸುವಂತೆ ಮಾಡಿದವರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳ ಬೇಕು ಕೃಷಿಯೇತರ ಎಂಬ ತಪ್ಪು ಮಾಹಿತಿಯನ್ನು ತೆಗೆದು ಕೃಷಿ ಭೂಮಿ ಎಂದು ಸರಿಪಡಿಸುವಂತೆ ರೈತರು ಆಗ್ರಹಿಸಿದ್ದಾರೆ.
ಅರ್ಜಿ ಸಲ್ಲಿಸದಿದ್ದರೂ ಭೂ ಪರಿವರ್ತನೆ.
ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ 95(2)ರಡಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಭೋಗದಾರನು ಅಂತಹ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಕೃಷಿಯೇತರ ಉದ್ದೇಶಕ್ಕಾಗಿ ಪರಿವರ್ತಿಸಲು ಇಚ್ಛಿಸಿದರೆ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸ ಬೇಕೆಂಬ ನಿಯಮವಿದೆ. ಆದರೆ ಹೆಗ್ಗೆರೆ ಗ್ರಾಮದ ರೈತರು ಕೃಷಿ ಭೂಮಿಯನ್ನು ಭೂಪರಿವರ್ತನೆ ಅರ್ಜಿ ಸಲ್ಲಿಸದೆ ಇದ್ದರೂ ಸಹ ಕೃಷಿಯೇತರ ಭೂಮಿ ಎಂದು ಹೇಗೆ ಪರಿವರ್ತನೆಯಾಗಿದೆ. ಭೂ ಪರಿವರ್ತನೆ ಅಲ್ಲಿ ಸಲ್ಲಿಸಿದ ಕಚೇರಿಗೆ ಅಲೆದಾಡಿದರೂ ವಿಳಂಭವಾಗುತ್ತದೆ ಲಕ್ಷ ಲಕ್ಷ ರೂ ಹಣ ಖರ್ಚಾಗುತ್ತದೆ ಆದರೆ ರೈತರು ಅರ್ಜಿಯೂ ನೀಡದೆ, ನಿಗಧಿತ ಶುಲಕ್ಷವೂ ನೀಡದೆ ಭೂ ಪರಿವರ್ತನೆ ನಮೂದು ಮಾಡಿರುವುದು ರೈತರಿಗೆ ತಲೆಬಿಸಿ ಮಾಡಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page