ಬೆಳೆ ಪರಿಹಾರ ಬೆಳೆವಿಮೆ ಮರುಪರಿಶೀಲಿಸುವಂತೆ ರೈತ ಸಂಘ‌ ಆಗ್ರಹ

by | 17/05/24 | ಪ್ರತಿಭಟನೆ

ಪರಶುರಾಮಪುರ ಹೋಬಳಿ ಮತ್ತು ಕಸಬಾ ಹೋಬಳಿ ಕೇಂದ್ರಸ್ಥಾನದಲ್ಲಿ ಕಂದಾಯ ಇಲಾಖೆಯ ಗ್ರಾಮಾಡಾಳಿತಾಧಿಕಾರಿಗಳು ಮತ್ತು ಸಹಾಯಕರನ್ನು ಕರೆಸಿ ಬರಪರಿಹಾರ ಮತ್ತು ಬೆಳೆವಿಮೆಯ ಮಂಜೂರಾತಿಯಲ್ಲಿ ಆಗಿರುವ ಕುರಿತು ಕಂದಾಯ ಅಧಿಕಾರಿಗಳು ಸಮಾಲೋಚನೆ ನಡೆಸಬೇಕು ಎಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ
ಗ್ರಾಮದ ನಾಡಕಚೇರಿಯ ಬಳಿ ತೆರಳಿದ ಗ್ರಾಮ ಮತ್ತು ತಾಲೂಕು ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಬುಧವಾರ ನಾಡಕಚೇರಿಯ ಉಪ ತಹಸೀಲ್ದಾರ್‌ಗೆ ಮನವಿ ಪತ್ರ ನೀಡಿ ಆಗ್ರಹಿಸಿದರು
ಚಳ್ಳಕೆರೆ ತಾಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಚೌಳೂರು ಪ್ರಕಾಶ ಮಾತನಾಡಿ ಬರಪರಿಹಾರ ಎಫ್‌ಐಡಿ ದಾಖಲೆ ಮಾಡಿರುವ ಕುರಿತು ಅಧಿಕಾರಿಗಳು ಪರಿಶೀಲಿಸಬೇಕು, ಬೆಳೆವಿಮೆಯ ವಿಚಾರವಾಗಿ ಕಂದಾಯ ಅಧಿಕಾರಿಗಳು ಪಹಣ ಯಲ್ಲಿ ಬೆಳೆ ಕಾಲಂನಲ್ಲಿ ತಪ್ಪು ವರದಿ ಮಂಡಿಸಿ ಅರ್ಹ ರೈತರನ್ನು ಬೆಳೆವಿಮೆಯಿಂದ ವಂಚಿತರಾಗಿಸಿದ್ದಾರೆ ತಾಲೂಕಿನ ಎಲ್ಲಾ ಗ್ರಾಮಾಡಳಿತ ಅಧಿಕಾರಿಗಳು ಕಚೇರಿಗೆ ಸಕಾಲಕ್ಕೆ ಹಾಜರಾಗಿ ರೈತರ ಮಾಹಿತಿಯನ್ನು ನಿಖರವಾಗಿ ದಾಖಲಿಸಲು ಕ್ರಮ ಕೈಗೊಳ್ಳಬೇಕು
ರೈತ ಸಂಘದ ಉಪಾಧ್ಯಕ್ಷ ಜಂಪಣ್ಣ ಮಾತನಾಡಿ ಬ್ಯಾಂಕ್ ಅಧಿಕಾರಿಗಳು ರೈತರ ಬೆಳೆವಿಮೆ ಮತ್ತು ಇತರೆ ಹಣವನ್ನು ತಡೆಹಿಡಿದಿರುವ ಕುರಿತು ಪರಿಶೀಲಿಸಬೇಕು ಪಿ ಓಬನಹಳ್ಳಿಯ ಗ್ರಾಮಸ್ಥರಿಗೆ ಪರಶುರಾಮಪುರ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ವ್ಯವಹರಿಸಲು ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು
ಸಂದರ್ಭದಲ್ಲಿ ಉಪ ತಹಸೀಲ್ದಾರ್ ಅನ್ನಪೂರ್ಣ ತಾಲೂಕು ಅಧ್ಯಕ್ಷ ಕೆ ಚಿಕ್ಕಣ್ಣ, ಉಪಾಧ್ಯಕ್ಷ ಜಂಪಣ್ಣ, ಹನುಮಂತರಾಯ, ಖಾದರ್ ಭಾಷಾ, ವೃಷಭೇಂದ್ರಪ್ಪ, ಕಾರ್ಯದರ್ಶಿ ಹನುಮಂತರಾಯ, ಪ್ರಕಾಶ, ತಿಮ್ಮಣ್ಣ, ರಾಮಣ್ಣ, ಪರಮೇಶಣ್ಣ, ರೈತ ಸಂಘದ ಪದಾಧಿಕಾರಿಗಳು ಗ್ರಾಮಸ್ಥರು ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page