ಚಳ್ಳಕೆರೆ ಜನಧ್ವನಿ ವಾರ್ತೆ ಫೆ.14ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ 2022-23ನೇ ಸಾಲಿನ
ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ಬೆಳೆವಿಮೆಗೆ ನೊಂದಣಿಯಾದ ಪ್ರಸಾವನೆಗಳೊಂದಿಗೆ ಹೋಲಿಕೆ ಮಾಡಿದಾಗ ತಾಳೆಯಾಗದೇ
ಇರುವ ಪ್ರಸ್ತಾವನೆಗಳನ್ನು ಬೆಳೆಸಮೀಕ್ಷೆಯಲ್ಲಿ ರೈತರ ಜಮೀನಿನಲ್ಲಿ ದಾಖಲಾದಛಾಯಚಿತ್ರದೊಂದಿಗೆ ಪರಿಶೀಲಿಸಿ ಅಂತಿಮವಾಗಿ ತಾಳೆಯಾಗದೇ ಇರುವ ಮುಂಗಾರು ಹಂಗಾಮಿನಲ್ಲಿ 1085 ಮತ್ತು ಹಿಂಗಾರಿನಲ್ಲಿ 94 ಪ್ರಸ್ತಾವನೆಗಳು ಒಟ್ಟು ಚಳ್ಳಕೆರೆ ತಾಲ್ಲೂಕಿನ 1179 ಪ್ರಸ್ತಾವನೆಗಳು ತಿರಸ್ಕೃತಗೊಂಡಿದ್ದು, ಸದರಿ ರೈತರ
ಪಟ್ಟಿಯನ್ನು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿರುತ್ತದೆ.ಹಾಗೂ ಸದರಿ ವಿಷಯದ ಬಗ್ಗೆ ಯಾವುದಾದರೂ ಆಕ್ಷೇಪಣೆಯಿದ್ದಲ್ಲಿ ಆಯಾ
ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಸಲ್ಲಿಸಲು ರೈತರಿಗೆ ಫೆಬ್ರವರಿ 15 ರಿಂದ ಮಾರ್ಚ್ 02 ರವರೆಗೆ ಅವಕಾಶ ನೀಡಲಾಗಿದೆ. ರೈತರು ಮಾರ್ಚ್ 02 ರೊಳಗೆ ಅರ್ಜಿ ಸಲ್ಲಿಸದೇ ಇದ್ದಲ್ಲಿ ಎಲ್ಲಾ ಪ್ರಸ್ತಾವನೆಗಳು ತಿರಸ್ಕೃತಗೊಳ್ಳುತ್ತವೆ. ಆಕ್ಷೇಪಣೆ ಸಲ್ಲಿಸುವಂತಿದ್ದಲ್ಲಿ 2022-23 ನೇ ಸಾಲಿನಲ್ಲಿನ ಪಹಣಿ ಪತ್ರಿಕೆಯಲ್ಲಿ ವಿಮೆಗೆ ನೊಂದಾಯಿಸಿದ ಬೆಳೆ ಇರಬೇಕು,
ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ ರಶೀದಿ, ವಿಮೆಗೆ ನೊಂದಾಯಿಸಿದ ಬೆಳೆಯ ಉತ್ಪನ್ನವನ್ನು ಎ.ಪಿ.ಎಂ.ಸಿ ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ಸದರಿ ದಾಖಲೆ
ನೀಡಿ ಅರ್ಜಿ ಸಲ್ಲಿಸುವಂತೆ ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್ ತಿಳಿಸಿದ್ದಾರೆ
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments