ಚಳ್ಳಕೆರೆ: ತಾಲೂಕಿನ ದ್ಯಾವರನಹಳ್ಳಿ ಗ್ರಾಮದ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬದ ಸುತ್ತಮುತ್ತ ಜಾಲಿ ಗಿಡಗಳು ಬೆಳೆದು ಕೊಂಬೆಗಳಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸುತ್ತಿದ್ದು ಸ್ವಚ್ಛತೆ ಗೊಳಿಸದೆ ಇರುವುದರಿಂದ ಗ್ರಾಮದ ಮನೆಗಳಲ್ಲಿರುವ ಎಲೆಕ್ಟ್ರಾನಿಕ್ ವಸ್ತುಗಳು ಹಾನಿಗೆ ಒಳಗಾಗುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಮೊನ್ನೆಯಷ್ಟೇ ವಿದ್ಯುತ್ ಕಂಬದ ಟ್ರಾನ್ಸ್ಫಾರ್ಮರ್ ಗೆ ಬೆಂಕಿ ತಗುಲಿ ಪೆಟ್ಟಿಗೆ ಹೊತ್ತಿ ಉರಿದಿದೆ ಕೂಡಲೇ ಗ್ರಾಮಸ್ಥರು ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದು ಈ ಘಟನೆಯಿಂದಾಗಿ ಗ್ರಾಮದ ಮನೆಯೊಂದರಲ್ಲಿ ಟಿವಿ, ಬಲ್ಬ್ ಸೇರಿದಂತೆ ಅನೇಕ ವಸ್ತುಗಳು ಹಾಳಾಗಿದ್ದು ಇದರಿಂದಾಗಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಇದರಿಂದಾಗಿ ಗ್ರಾಮಸ್ಥರು ವಿದ್ಯುತ್ ಇಲಾಖೆ ಸಿಬ್ಬಂದಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಹಲವು ಬಾರಿ ಬೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆಯ ಬಗ್ಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಕೂಡಲೇ ಬೆಸ್ಕಾಂ ಇಲಾಖೆ ಉನ್ನತ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಗ್ರಾಮದ ಹರೀಶ ಮಧು ನಿಜಲಿಂಗಪ್ಪ ಯಜಮಾನ ನಾರಾಯಣ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಲಕ್ಷ್ಮಿ ಹಾಗೂ ಇತರರು ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments