ಬೇಸಿಗೆ ಹಂಗಾಮಿನಲ್ಲಿ ಮಾವು ನಿರ್ವಹಣೆ: ರೈತರಿಗೆ ಸಲಹೆ

by | 14/02/24 | ಕೃಷಿ


ಕೊಪ್ಪಳ ಫೆಬ್ರವರಿ 14 ಬೇಸಿಗೆ ಹಂಗಾಮಿನಲ್ಲಿ ಮಾವು ನಿರ್ವಹಣೆಗಾಗಿ ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರವತಿಯಿಂದ ರೈತರಿಗೆ ಕೆಲವು ಸಲಹೆಗಳನ್ನು ನೀಡಲಾಗಿದೆ.
ಜಿಲ್ಲೆಯಾದ್ಯಂತ ಹಣ್ಣಿನ ರಾಜ ಮಾವು ಸುಮಾರು 3000 ಹೆಕ್ಟರ್ ಹೆಚ್ಚಿನ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಜಿಲ್ಲೆಯಲ್ಲಿ 12ಕ್ಕೂ ಹೆಚ್ಚಿನ ಮಾವಿನ ತಳಿಗಳನ್ನು ಬೆಳೆಯಲಾಗುತ್ತಿದ್ದು, ಇದರಲ್ಲಿ ಬೆನೆಶಾನ್ ನಂತರ ಕೇಸರ ತಳಿ ತುಂಬಾ ಬೇಡಿಕೆ ಇರುವ ಪರಿಮಳವುಳ್ಳ ತಳಿಯಾಗಿದೆ. ಕೊಪ್ಪಳ ಕೇಸರ ಎಂದೇ ಖ್ಯಾತಿ ಹೊಂದಿದ ಈ ತಳಿಗೆ ರಾಜ್ಯದ ತುಂಬೆಲ್ಲಾ ಬೇಡಿಕೆ ಇದೆ.
ಈ ವರ್ಷ ಮಳೆ ಕಮ್ಮಿಯಿದ್ದರೂ, ಬೆಳಗಿನ ತೇವಾಂಶ ಹಾಗೂ ಆರ್ದ್ರತೆಯಿಂದಾಗಿ ಹೂವು ಮತ್ತು ಕಾಯಿ ಕಚ್ಚುವುದು ತುಂಬ ತಡವಾಗಿದೆ. ಈಗ ಶೇ. 70ಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಹೂವು ಮತ್ತು ಹೀಚುಗಳು ಕಾಣಸಿಕೊಂಡಿವೆ. ಈ ಹಂತದಲ್ಲಿ ಕೀಟ ಮತ್ತು ರೋಗಗಳ ಬಾಧೆ ಅಲ್ಲದೇ ಹೂವು ಉದುರುವಿಕೆ ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಜ್ಞಾನಿಗಳು ಇತ್ತೀಚೆಗೆ ಕೆಲ ಮಾವಿನ ತೋಟಗಳಿಗೆ ಭೇಟಿ ನೀಡಿ, ಬೇಸಿಗೆ ಹಂಗಾಮಿನಲ್ಲಿ ನಿರ್ವಹಣಾ ಕ್ರಮಗಳ ಕುರಿತಾಗಿ ಈ ಸಲಹೆಗಳನ್ನು ನೀಡಿದ್ದಾರೆ.
*ನಿರ್ವಹಣಾ ಕ್ರಮಗಳು:* ಪ್ರಸ್ತುತ ತಾಪಮಾನ ಹೆಚ್ಚಾಗುತ್ತಿರುವುದರಿಂದ ಬೆಳಿಗ್ಗೆ ಅಥವಾ ಸಾಯಂಕಾಲ ಹನಿ ನೀರಾವರಿ ಇದ್ದಲ್ಲಿ 3 ರಿಂದ 4 ಗಂಟೆ ನೀರು ಹರಿಸಬೇಕು. ಹರಿ ನೀರಾವರಿ ಇದ್ದಲ್ಲಿ 8 ರಿಂದ 10 ದಿನಗಳಿಗೊಮ್ಮೆ ಮಣ್ಣಿನ ವಿಧವನ್ನು ಆದರಿಸಿ ನೀರು ಹರಿಸಬೇಕು. ಗಿಡದ ಸುತ್ತಲೂ ಪಾತಿ ಮಾಡಿ ಸಸ್ಯಜನ್ಯ ಸಾವಯವ ಉಳಿಕೆಗಳನ್ನು ಹೊದಿಕೆ ಹಾಕಬೇಕು. ಹೂವಾಡುವ ಹಂತದಲ್ಲಿ ಜಾನುವಾರುಗಳು ಮತ್ತು ಯಂತ್ರಗಳ ಓಡಾಟ ಕಡಿಮೆ ಮಾಡಬೇಕು. ಇದರಿಂದಾಗಿ ಹೂವು ಕಾಯಿ ಉದುರುವುದನ್ನು ತಡೆಗಟ್ಟಬಹುದು. ಇರುವೆಗಳು ಹಾಗೂ ಗೆದ್ದಲುಗಳ ನಿಯಂತ್ರಣ ಮಾಡಬೇಕು. ಗಿಡದ ಬಡ್ಡೆಗೆ ನೆಲದಿಂದ ಮೇಲಕ್ಕೆ ಮೂರು ಅಡಿಯಷ್ಟು ಸುತ್ತಲೂ ಸಿ.ಓ.ಸಿ. ಪುಡಿ ಅಥವಾ ಬೋರ್ಡೋ ಪುಡಿ ಅಥವಾ ಸುಣ್ಣವನ್ನು ಲೇಪನ ಮಾಡಬೇಕು. ಹೂವು, ಕಾಯಿ 40:60 ಅನುಪಾತದಲ್ಲಿದ್ದರೇ ರೋಗ, ಕೀಟಗಳ ಹತೋಟಿ ಮತ್ತು ಪೋಷಕಾಂಶಗಳ ನಿರ್ವಹಣೆಗಾಗಿ ರೈತರು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಸಿಂಪರಣೆ ಮಾಡುವಾಗ ನೀರಿನ ಪ್ರಮಾಣ ಹೆಚ್ಚಾಗಿರಬೇಕು. ದೊಡ್ಡ ಗಿಡಗಳಿಗೆ 8 ರಿಂದ 10 ಲೀಟರ್ ದ್ರಾವಣ ಸಿಂಪಡಿಸಬೇಕು.
ಮಾವಿನ ಬೆಳೆಯಲ್ಲಿ ಕಂಡುಬರುವ ಪ್ರಮುಖ ಕೀಟಗಳು ಮತ್ತು ಕೀಟಗಳ ನಿಯಂತ್ರಣಕ್ಕೆ ರೈತರು ಅನುಸರಿಸಬೇಕಾದ ಕ್ರಮಗಳ ವಿವರ ಇಂತಿವೆ.
*ಜಿಗಿಹುಳು:* ತಂಪುವಾತಾವರಣ ಹಾಗೂ ಆಗಾಗ ಮೋಡ ಕವಿದ ವಾತಾವರಣದಿಂದಾಗಿ ಜಿಗಿಹುಳುವಿನ ಬಾಧೆ ಕಂಡು ಬಂದಿರುತ್ತದೆ. ಇದರ ನಿಯಂತ್ರಣಕ್ಕೆ ಉತ್ತಮ ಗಾಳಿ ಮತ್ತು ಬೆಳೆಕು ಆಡುವಂತೆ ಗಿಡಗಳ ನಿರ್ವಹಣೆ ಮಾಡಬೇಕು ಮತ್ತು ತಿಳಿಸಿದಂತೆ ಸಿಂಪರಣೆ ಕೈಗೊಳ್ಳಬೇಕು. ಬೇವಿನ ಎಣ್ಣೆ 10000 ಪಿ.ಪಿ.ಎಂ. 2 ಮಿಲಿ ಅಥವಾ ಇಮಿಡಾಕ್ಲೋಪ್ರಿಡ್ 17.8 ಇ.ಸಿ. 0.5 ಮಿಲಿ ಅಥವಾ ಲ್ಯಾಂಬ್ಡಾ ಸಿಯಾಲೋಥ್ರಿನ್ 5 ಇ.ಸಿ. ಅಥವಾ ಬಿಪ್ರೋಫೆಜಿನ್ 25 ಎಸ್.ಸಿ. 1 ಮಿಲಿ ಜೊತೆಗೆ ಅಸಿಫೇಟ್ 75 ಎಸ..ಪಿ. ಪುಡಿಯನ್ನು ಒಂದು ಗ್ರಾಂ. ಒಂದು ಲೀಟರಗೆ ಬೆರೆಸಿ ಸಿಂಪರಿಸಬೇಕು. ಹಳದಿ ಅಂಟುಕಾರ್ಡುಗಳನ್ನು ಅಳವಡಿಸಬೇಕು.
*ಹಿಟ್ಟು ತಿಗಣೆ:* ಈ ಕೀಟದ ಹತೋಟಿಗಾಗಿ ಇರುವೆಗಳನ್ನು ಇರದಂತೆ ನೋಡಿಕೊಳ್ಳಬೇಕು. ಎರಡನೇಯದಾಗಿ ಬೇವಿನ ಎಣ್ಣೆ ಜೊತೆಗೆ ಮೀನಿನೆಣ್ಣೆ 2 ಮಿಲಿ ಅಥವಾ ರಾಸಾಯನಿಕಗಳಾದ ಕ್ಲೋರೋಪೈರಿಫಾಸ್ 20 ಇ.ಸಿ. 2 ಮಿಲಿ ಒಂದು ಲೀಟರ ನೀರಿಗೆ ಬೆರೆಸಿ ಜೊತೆಗೆ ಶ್ಯಾಂಪೂ ಮಿಶ್ರ ಮಾಡಿ ಸಿಂಪರಿಸಬೇಕು.
*ಗೂಡು ಕಟ್ಟುವ ಕೀಡೆ ಅಥವಾ ಬಾರುಹುಳು:* ಕಂಡುಬಂದಲ್ಲಿ ಇಮ್ಯಾಮೆಕ್ಟಿನ್ ಬೆಂಜೋಯೇಟ್ 5 ಎಸ್.ಜಿ. 0.4 ಮಿಲಿ ಅಥವಾ ಕ್ವಿನಾಲಫಾಸ್ 25 ಇ.ಸಿ. 2 ಮಿಲಿ 1 ಲೀಟರ ನೀರಿಗೆ ಬೆರೆಸಿ ಸಿಂಪರಿಸಬೇಕು.
ಮುಂದೆ ಬರಬಹುದಾದ ಹಣ್ಣಿನ ನೊಣ ಕೀಟದ ಹತೋಟಿಗಾಗಿ ಈಗಲೇ ಎಕರೆಗೆ 6-10 ರಂತೆ ಮೋಹಕ ಬಲೆಗಳನ್ನು ಅಳವಡಿಸಬೇಕು. ತೋಟದಲ್ಲಿ ಅಲ್ಲಲ್ಲಿ ಎಕರೆಗೆ 1 ರಂತೆ ದೀಪಾಕರ್ಷಕ ಬಲೆಗಳನ್ನು ಅಳವಡಿಸಬೇಕು.
*ಪ್ರಮುಖ ರೋಗಗಳು:* ಮಾವಿನ ಬೆಳೆಯಲ್ಲಿ ಕಂಡುಬರುವ ಪ್ರಮುಖ ರೋಗವಾದ `ಬೂದಿ ರೋಗ’ದ ನಿಯಂತ್ರಣಕ್ಕಾಗಿ ಹುಳಿಮಜ್ಜಿಗೆ ಅಥವಾ ಅಡುಗೆ ಸೋಡಾ 2-3 ಗ್ರಾಂ. ಅಥವಾ ಹೆಕ್ಸಾಕೋನಾಜೋಲ್ 5% ಎಸ್.ಸಿ. 1 ಮಿಲಿ ಅಥವಾ ಸಿಸ್ಥೇನ್ 20% ಇ.ಡಬ್ಲ್ಯೂ ಪುಡಿ 2 ಗ್ರಾಂ. 1 ಲೀಟರ ನೀರಿಗೆ ಬೆರೆಸಿ ಸಿಂಪರಿಸಬೇಕು.
ಇನ್ನೊಂದು ಪ್ರಮುಖ ರೋಗವಾದ `ಚಿಬ್ಬುರೋಗ’ದ ಹತೋಟಿಗೆ ಕಾರ್ಬನ್‌ಡೇಜಿಮ್ 50 ಡಬ್ಲ್ಯೂ.ಪಿ 1 ಗ್ರಾಂ. ಅಥವಾ ಥಯೋಫಿನೈಟ್ ಮಿಥೈಲ್ 70 ಡಬ್ಲೂ.ಪಿ 1 ಗ್ರಾಂ. ಅಥವಾ ಫಾಲಿಕ್ಯೂರ್ 250 ಇ.ಸಿ. 1 ಮಿಲಿ 1 ಲೀಟರ ನೀರಿಗೆ ಸಿಂಪರಿಸಬೇಕು.
*ಸೂಚನೆ:* ಹೂವು ಜಾಸ್ತಿ ಇದ್ದಾಗ ಸಿಂಪರಣೆ ಮಾಡಬಾರದು ಮತ್ತು ಅತೀ ಮುಖ್ಯವಾಗಿ ಗಂಧಕ ಮತ್ತು ಗಂಧಕಯುಕ್ತ ಪದಾರ್ಥಗಳನ್ನು ಸಿಂಪಡಿಸಬಾರದು. ಮಾವು ಅತ್ಯಂತ ಉಪಕಾರಿ ಬಹುವಾರ್ಷಿಕ ಹಣ್ಣಿನ ಬೆಳೆಯಾಗಿದ್ದು, ಅನೇಕ ಪರಭಕ್ಷಕ ಕೀಟಗಳು ಹಾಗೂ ಜೇನು ನೊಣದಂತಹ ಉಪಕಾರಿ ಕೀಟಗಳಿಗೆ ಆಶ್ರಯ ನೀಡುತ್ತದಾದ್ದರಿಂದ ಅನಾವಶ್ಯಕವಾಗಿ ಮತ್ತು ಹಾನಿಕಾರಕ ರಾಸಾಯನಿಕಗಳ ಸಿಂಪರಣೆ ಮಾಡಬಾರದು.
ಉತ್ತಮ ಪೋಷಣೆಗಾಗಿ ಮಾವು ಸ್ಪೇಷಲ್, ಜೀವಾಮೃತ, ಗೋಕೃಪಾಮೃತ ಅಲ್ಲದೇ ದ್ರವರೂಪದ ಗೊಬ್ಬರಗಳನ್ನು 15 ದಿನಗಳಿಗೊಮ್ಮೆ ಅಗತ್ಯವಿದ್ದಲ್ಲಿ ಸೂಕ್ತ ಪೀಡೆನಾಶಕಗಳೊಂದಿಗೆ ಬೆರೆಸಿ ಸಿಂಪರಿಸಬೇಕು ಅಥವಾ ಹನಿ ನೀರಾವರಿ ಮೂಲಕ ವಾರಕ್ಕೊಮ್ಮೆ ನೀಡಬೇಕು. ಮಾವು ಸ್ಪೆಷಲ್ ಕೇವಲ ಸಿಂಪರಣೆಗಾಗಿ ಉಪಯೋಗಿಸಬಹುದು.
ಹೆಚ್ಚಿನ ಮಾಹಿತಿಗಾಗಿ ವಿಸ್ತರಣಾ ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಂದಾಳುಗಳಾದ ಡಾ ಎಂ.ವಿ.ರವಿ., (ಮೊ.ಸಂಖ್ಯೆ 9480247745) ಹಾಗೂ ಸಹಾಯಕ ಪ್ರಾಧ್ಯಾಪಕರಾದ ವಾಮನಮೂರ್ತಿ (ಮೊ.ಸಂಖ್ಯೆ 9482672039) ಇವರನ್ನು ಸಂಪರ್ಕಿಸಬಹುದು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page