ಹೊಸದುರ್ಗ, ಡಿ 28 : ಬೈಕ್ ನಿಯಂತ್ರಣ ತಪ್ಪಿ ಸವಾರ ಮೃತಪಟ್ಟ ಘಟನೆ ನಡೆದಿದೆ. ಹೊಸದುರ್ಗ ತಾಲ್ಲೂಕಿನ ಚಿಕ್ಕ ಬ್ಯಾಲದಕೆರೆ ಗ್ರಾಮದ ಹಲಗಾಚಾರ್( 53 ) ಗುರುವಾರ ಬೆಳಗ್ಗೆ 12.30 ಸಮಯದಲ್ಲಿ ಬೈಕ್ ನಲ್ಲಿ ಕಡೂರು ತಾಲ್ಲೂಕಿನ ಮಲ್ಲೇಶ್ವರ ಗ್ರಾಮಕ್ಕೆ ಹೋಗಿ
ಕೊಂಡಜ್ಜಿ ಲಂಬಾಣಿಹಟ್ಟಿ ಗ್ರಾಮದಿಂದ ನೀರಗುಂದ ಗೇಟ್ ಮಧ್ಯದಲ್ಲಿ ಬರುತ್ತಿರುವಾಗ ಬೈಕ್
ಅತೀ ವೇಗ ಮತ್ತು ಅಜಾಗೂರುಕತೆಯಿಂದ
ಚಾಲನೆ ಮಾಡಿಕೊಂಡು ಬಂದು ರಸ್ತೆಯಲ್ಲಿ ನಿರ್ಮಿಸಿದ್ದ ಹಂಪ್ಸ್ ನ್ನು ಹಾರಿಸಿದ್ದರಿಂದ ಬೈಕ್ ನಿಯಂತ್ರಣ ತಪ್ಪಿ
ಮೋಟಾರ್ ಸೈಕಲ್ ಸಮೇತ ರಸ್ತೆಯ ಮೇಲೆ ಕೆಳಗೆ ಬಿದ್ದ ಪರಿಣಾಮ ಮೋಟಾರ್ ಸೈಕಲ್ ಜಖಂಗೊಂಡು,
ಬೈಕ್ ಸವಾರ ಹಲಗಾಚಾರ್ ಸ್ಥಳದಲ್ಲಿಯೇ
ಮೃತಪಟ್ಟಿರುತ್ತಾನೆ . ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments