ಬ್ಯಾಂಕ್ ಖಾತೆ ಹ್ಯಾಕ್ ಮಾಡಿ ಲಕ್ಷ ಲಕ್ಷ ರೂ ಕನ್ನ – ಬ್ಯಾಂಕ್ ಖಾತೆದಾರರಲ್ಲಿ ಆತಂಕ ಹಣ ಕಳೆದುಕೊಂಡರು ಠಾಣೆಗೆ ದೂರು.

by | 14/05/24 | ಕ್ರೈಂ

ಚಳ್ಳಕೆರೆ ಮೇ 14 ಬ್ಯಾಂಕ್ ಖಾತೆ, ಪಹಣಿ, ಪಾನ್ ಕಾರ್ಡ್ .ಸಿಮ್ ಕಾರ್ಡ್ . ಬೆಳೆವಿಮೆ,ಬೆಳೆ ಪರಿಹಾರ . ಆಧಾರ್ ಕಾರ್ಡ್ ಜೋಡಣೆ . ಇ-ಕೆವೈಸಿ ಸರಕಾರದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸುವಾಗಲೂ ನೀಡುವ ಬಯೋಮೆಟ್ರಿಕ್ ಕಡ್ಡಾಯಗೊಳಿಸಿಲಾಗಿದ್ದು ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಖಾತೆಯಲ್ಲಿನ ಹಣಕ್ಕೆ ಸೈಬರ್ ಕಳ್ಳರು ಕನ್ನ ಹಾಕುತ್ತಿರುವ ಪ್ರಕರಣ ಹೆಚ್ಚಾಗುತ್ತಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಹೌದು ಇದು ಚಳ್ಳಕೆರೆ ನಗರದ ದೊಡ್ಡೇರಿ ವಕೀಲ ಮಲ್ಲಿಕಾರ್ಜುನ ಎಂಬುವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ 1.30 ಲಕ್ಷ ರೂ, ನೀತೀನ್ 1.80 ಲಕ್ಷ ರೂ ಸೇರಿದಂತೆ ಹಲವರ ಬ್ಯಾಂಕ್ ಖಾತೆಗಳ ಮೇಲೆ ಸೈಬರ್ ಕಳ್ಳರು ಕನ್ನ ಹಾಕುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಕೇವಲ ಚಳ್ಳಕೆರೆಗೆ ಮಾತ್ರ ಸೀಮಿತವಾಗದೆ ರಾಜ್ಯಾದ್ಯಂತ ಸೈಬರ್ ವಂಚಕರ ಹಾವಳಿ ಹೆಚ್ಚಿಗಿದ್ದು ಇದರಿಂದ ಸಾರ್ವಜನಿಕರಲ್ಲಿ ಆತಂಕದ ಮನೆ ಮಾಡಿದೆ.
ಸಾಮಾಜಿಕ ಜಾಲತಾಣದಲ್ಲಿ ಕೆಲವು ಖಾಸಗಿ ಯ್ಯಾಪ್ ಮೂಲಕ ಜನರನ್ನು ಮರಳು ಮಾಡಿ ಕಡಿಮೆ ಹಣ ಹೂಡಿಕೆ ಮಾಡಿದರೆ ಹೆಚ್ಚು ಹಣ ನೀಡುತ್ತೇವೆ ಎಂಬ ಮರಳು ಮಾತಿಗೆ ನಂಬಿ ಬೇಗಾ ಶ್ರೀಮಂತರಾಗ ಬೇಕು . ಹೆಚ್ಚು ಹಣ ಮಾಡಬೇಕು ಎಂಬ ಆಸೆಗೆ ಬಿದ್ದು ಹಣ ಹೂಡಿಕೆ ಮಾಡಿ ಕಳೆದು ಕೊಂಡರೆ ಇನ್ನು ಕೆಲವರು ಆನ್ ಲೈನ್ ಗೇಮ್ ನಲ್ಲಿ ಹಣ ಹಾಕಿ ಕಳೆದು ಕೊಂಡು ಸಾಲದ ದವಡೆಗೆ ಸಿಲುಕಿ ನರಳುವಂತಾಗಿದೆ.
ರಾಜ್ಯಾದ್ಯಂತ ನಾನಾ ರೂಪಗಳಲ್ಲಿ ಆನ್ಲೈನ್ ವಂಚನೆ ಹೆಚ್ಚುತ್ತಿದೆ. ಈಗ ಆಧಾರ್ ಕಾರ್ಡ್ನ ಬೆರಳಚ್ಚು (ಬಯೋಮೆಟ್ರಿಕ್) ಹ್ಯಾಕ್ ಮಾಡಿ ಬ್ಯಾಂಕ್ ಖಾತೆಗಳಿಂದ ಹಣ ದೋಚುತ್ತಿದ್ದಾರೆ ಎಂಬ ಬೀತಿ ಜನರಲ್ಲಿ ಕಾಡತೊಡಗಿದೆ. ಸೈಬರ್ ಖದೀಮರು ಸಣ್ಣ ಮೊತ್ತವನ್ನೇ ಸೇಫ್ ಟಾರ್ಗೆಟ್ ಮಾಡಿಕೊಂಡಿದ್ದರು . ಸಣ್ಣ ಮೊತ್ತ ಕಳೆದುಕೊಂಡವರು ಹೆಚ್ಚಾಗಿ ಪೊಲೀಸ್ ಠಾಣೆಗಳಲ್ಲಿ ದೂರು ನೀಡದೆ ಸುಮ್ಮನಾಗುತ್ತಿದ್ದರು ಇದನ್ನೇ ವರದಾನ ಮಾಡಿಕೊಂಡ ಸೈಬರ್ ವಂಚಕರು ದೊಡ್ಡ ಮೊತ್ತಕ್ಕೆ ಕನ್ನ ಹಾಕಲು ಮುಂದಾಗಿದ್ದಾರೆ.

ಈಗಾಲಾದರೂ ಸಂಬಂಧಪಟ್ಟ ಅಧಿಕಾರಿಗಳು ಸೈಬರ್ ಕಳ್ಳರ ಹಾವಳಿಗೆ ಕಡಿವಾಣ ಹಾಕಲು ಮುಂದಾಗ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page