ಚಿತ್ರದುರ್ಗ :
ನಗರದ ಮಹಾರಾಣಿ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜಾನಪದ ನೃತ್ಯದಲ್ಲಿ ಹಿರಿಯೂರು ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದ ಶ್ರೀಪಾರ್ಥಲಿಂಗೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಅನುಪ್ರಿಯಾ, ಹರ್ಷನಾಯಕ, ಯಶವಂತ್ ಕುಮಾರ್, ತರುಣ್ ಗೌಡ, ಸೃಜನ್, ಕುಮಾರ, ಇವರುಗಳು ವೀರಗಾಸೆ ನೃತ್ಯ ಪ್ರದರ್ಶನ ನೀಡುವ ಮೂಲಕ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಚಿತ್ರಕಲಾ ಶಿಕ್ಷಕರಾದ ಮಲ್ಲೇಶಪ್ಪ ಸುಣ್ಣಗಾರ್ ರವರು ಮಾರ್ಗದರ್ಶನ ನೀಡಿದ್ದು, ವಿದ್ಯಾರ್ಥಿಗಳು ಸತತ ಪರಿಶ್ರಮ ವಹಿಸಿ, ಅಭ್ಯಾಸ ಮಾಡುವ ಮೂಲಕ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಜ್ಯಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿರುವುದಕ್ಕೆ ಶಾಲಾ ಆಡಳಿತ ಮಂಡಳಿಯವರು ಹಾಗೂ ಶಾಲಾ ಸಿಬ್ಬಂದಿವರ್ಗದವರು ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ, ಶಾರದಾ ಎಜುಕೇಶನ್ ಟ್ರಸ್ಟ್ ಆಡಳಿತ ಮಂಡಳಿ ಮುಖ್ಯಸ್ಥರಾದ ಶ್ರೀಯುತ ಹೆಚ್.ವಿ.ಗೋಪಾಲಪ್ಪ, ಶಾಲೆಯ ಮುಖ್ಯಶಿಕ್ಷಕರಾದ ಪ್ರಭಾಕರ್, ವಿದ್ಯಾಸಂಸ್ಥೆಯ ಶಿಕ್ಷಕರುಗಳಾದ ಶಂಷುದ್ದೀನ್, ಮೂಡ್ಲಪ್ಪ, ಭರತ, ಶಿವಮೂರ್ತಿ, ತ್ರಿವೇಣಿ, ತಿಪ್ಪೇಸ್ವಾಮಿ, ಗೋಸಿಕೆರೆರಂಗನಾಥ್, ತಿಮ್ಮರಾಜು, ತಾಲ್ಲೂಕು ರೈತಸಂಘದ ಅಧ್ಯಕ್ಷರಾದ ಬಿ.ಓ.ಶಿವಕುಮಾರ್, ಸೇರಿದಂತೆ ಬ್ಯಾಡರಹಳ್ಳಿ, ಆರ್.ಎಸ್.ಉಪ್ಪಾರಹಟ್ಟಿ, ಕೂಡ್ಲಹಳ್ಳಿ ಗ್ರಾಮಸ್ಥರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments