ಚಳ್ಳಕೆರೆ ಜನಧ್ಚನಿ ವಾರ್ತೆ ಮಾ.13. , ಬ್ಯಾರೇಜ್ ನಿರ್ಮಾಣಕ್ಕೆ ಮಂಜುರಾತಿಯಾಗಿ ಎರಡು ವರ್ಷಗಳು ಕಳೆದರೂ ಕಾಮಗಾರಿ ಪ್ರಾರಂಭಿಸದೇ ಇರುವುದನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದರು.
ತಾಲೂಕಿನ ಗಡಿಭಾಗ ಮೋದೂರು ಗ್ರಾಮದ ಬಳಿ ವೇದಾವತಿ ನದಿಗೆ ಅಂರ್ತಲ ವೃದ್ಧಿಗಾಗಿ ಸುಮಾರು 7.33 ಕೋಟಿ ರೂ ವೆಚ್ಚದಲ್ಲಿ ಬ್ಯಾರೇಜ್ ಕಾಮಗಾರಿ ನಿರ್ಮಾಣಕ್ಕೆ ದಾವಣಗೆರೆ ಮೂಲದ ಗುತ್ತಿಗೆದಾರರಿಗೆ ಟೆಂಡರ್ ಅಗಿ ಎರಡು ವರ್ಷಗಳು ಕಳೆದರೂ ಕಾಮಗಾರಿ ಪ್ರಾರಂಭಿಸದಿರುವ ಬಗ್ಗೆ ಅಧಿಕಾರಿಗಳ ವಿರುದ್ದ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಭೂತಯ್ಯ ನೇತೃತ್ವದಲ್ಲಿ ಸುತ್ತಮುತ್ತಲ ಗ್ರಾಮಸ್ಥರು ಹಾಗೂ ರೈತರು ಮೋದೂರು ಗ್ರಾಮದ ನದಿಪಾತ್ರದ ಬ್ಯಾರೇಜ್ ನಿರ್ಮಾಣದ ಸ್ಥಳದಲ್ಲಿ ಕಾಮಗಾರಿ ಪ್ರಾರಂಭಿಸುವ ತನಕ ಪ್ರತಿಭಟನೆ ಮಾಡಲಾಗುವುದು ಎಂದು ಸರಕಾತ ಹಾಗೂ ಅಧಿಕಾರಿಗಳ ವಿರುದ್ದ ಅಕ್ರೋಶ ವ್ಯಕ್ತ ಪಡಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಶಾಸಕ ಟಿ.ರಘುಮೂರ್ತಿ ಭೇಟಿ ನೀಡಿ ರೈತರೊಂದಿಗೆ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಅಧಿಕಾರಿಗಳ ದೌಡ್ . ಶಾಸಕ ಟಿ.ರಘುಮೂರ್ತಿ ಹಾಗೂ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಅಧಿಕಾರಿಗಳು ಜೆಸಿಬಿ ಯಂತ್ರಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿ ನಿಗಧಿತ ಅವದಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವ ಭರವಸೆ ನೀಡಿದಾಗ ಪ್ರತಿಭಟನೆ ಹಿಂಪಡೆದರು.
ಸ್ಥಳದಲ್ಲಿ ನೀರಾವರಿ ಇಲಾಖೆ ಇಂಜಿನಿಯರ್ ಆದ ಅಣ್ಣಪ್ಪ. ತಹಶೀಲ್ದಾರ್ ರೇಹಾನ್ ಪಾಷಾ. ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ಗ್ರಾಪಂ ಸದಸ್ಯರಾದ ರಂಜನ್ ಹಂಪಣ್ಣ. ಮುಖಂಡರಾದ ನಾಗರಾಜ್. ರುದ್ರಮುನಿ . ಶಿವಕುಮಾರ ಸ್ವಾಮಿ ಹಾಗೂ ರೈತರು ಉಪಸ್ಥಿತರಿದ್ದರು.
0 Comments