ಹಿರಿಯೂರು:
ಭವ್ಯಪರಂಪರೆ, ಶ್ರಮ ಸಂಸ್ಕೃತಿಯ ಪ್ರತೀಕವಾದ ಕುಂಚಿಟಿಗರ ಹಿತ ಕಾಯಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.
ತಾಲ್ಲೂಕಿನ ಚಿಲ್ಲಳ್ಳಿ ಗ್ರಾಮದ ಕಾಟಮಹಲಿಂಗೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕುಂಚಿಟಿಗರು ಶ್ರಮಿಕರು, ಕೃಷಿಕರು, ಸ್ವಾಭಿಮಾನಿಗಳು, ಕಾಯಕ ನಂಬಿ ಬದುಕುವ ಜತೆಗೆ ಎಲ್ಲ ಜಾತಿ ಧರ್ಮದವರ ಜತೆ ಪ್ರೀತಿ ವಿಶ್ವಾಸದಿಂದ ಇರುವುದು ಮಾದರಿ . ನಂಬಿಕೆ, ವಿಶ್ವಾಸ, ಪ್ರೀತಿಗೆ ಮತ್ತೊಂದು ಹೆಸರೇ ಕುಂಚಿಟಿಗರು ಎಂದರಲ್ಲದೆ,
ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸೌಲಭ್ಯ ಪಡೆಯಲು ಕೇಂದ್ರದ ಒಬಿಸಿ ಮೀಸಲಾತಿ ಅನಿವಾರ್ಯ. ರಾಜ್ಯ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನ ವರದಿ ಪ್ರಕಾರ ಒಬಿಸಿ ಪಟ್ಟಿಗೆ ಸೇರಿಸಲು ಈಗಾಗಲೇ ಕೇಂದ್ರಕ್ಕೆ ಶಿಫಾಸ್ಸು ಮಾಡಲಾಗಿದೆ ಎಂಬುದಾಗಿ ಅವರು ತಿಳಿಸಿದರು.
ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ, ಎಲ್ಲಾ ಜಾತಿ, ಧರ್ಮದವರನ್ನು ಮುಖ್ಯವಾಹಿನಿಗೆ ತರಲು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ಇದರ ಅನುಕೂಲ ಕುರಿತು ಹೆಚ್ಚು ಜನರಿಗೆ ಮನವರಿಕೆ ಮಾಡುವಅಗತ್ಯ ಇದೆ ಎಂದರು.
ಮಾಜಿ ಸಚಿವ ಶಿರಾ ಶಾಸಕ ಟಿ.ಬಿ. ಜಯಚಂದ್ರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸರ್ವ ಸ್ಪರ್ಶಿ ಆಡಳಿತದ ಮೂಲಕ, ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿದೆ ಎಂದರಲ್ಲದೆ,
ರಾಜ್ಯ ಸರ್ಕಾರ ಕುಂಚಿಟಿಗರ ಬಹುದಿನಗಳ ಬೇಡಿಕೆಗೆ ಮನ್ನಣೆ ನೀಡಿ, ಓಬಿಸಿ ಮೀಸಲಾತಿಗೆ ಶಿಫಾರಸ್ಸು ಮಾಡಿದೆ. ರಾಜ್ಯದಲ್ಲಿ 18 ಜಿಲ್ಲೆಗಳು, 46 ತಾಲ್ಲೂಕುಗಳಲ್ಲಿ 25 ಲಕ್ಷಕ್ಕೂ ಅಧಿಕ ಸಂಖ್ಯೆಯ ಕುಂಚಿಟಗರಿದ್ದು, ಕೇಂದ್ರ ಸರ್ಕಾರ ಒಬಿಸಿಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು ಈ ಸಂಬಂಧ ದೆಹಲಿ ಮಟ್ಟದಲ್ಲಿ ಹೋರಾಟ ಮಾಡಲಾಗುವುದು ಎಂಬುದಾಗಿ ಅವರು ತಿಳಿಸಿದರು.
ಮುಖಂಡ ಕಸವನಹಳ್ಳಿ ರಮೇಶ್ ಮಾತನಾಡಿ ಕುಂಚಿಟಿಗರಿಗೆ ಒಬಿಸಿ ಮೀಸಲು ನೀಡಲು ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದ ಕಾರಣ ಸಮುದಾಯಕ್ಕೆ ಬಹಳಷ್ಟು ನಷ್ಟವಾಗುತ್ತಿದೆ. ಕುಂಚಿಟಿಗರು ಕೃಷಿ, ಪಶುಪಾಲನೆ ಮೂಲಕ ಜೀವನ ಸಾಗಿಸುತ್ತಿದ್ದು , ಕೇಂದ್ರದ ಒಬಿಸಿ ಮೀಸಲು ಸೌಲಭ್ಯ ಸಿಗದೆ ಸಾವಿರಾರು ವಿದ್ಯಾರ್ಥಿಗಳು ಉದ್ಯೋಗ, ಉನ್ನತ ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂಬುದಾಗಿ ತಿಳಿಸಿದರು.
ಜೆಡಿಎಸ್ ಮುಖಂಡ ಎಂ.ರವೀಂದ್ರಪ್ಪ ಮಾತನಾಡಿದರು. ಎಸ್.ಎಸ್. ಎಲ್. ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಅರ್ಚಕ ದೊಡ್ಡರಾಜಪ್ಪ, ರಂಗನಾಥ್, ದೇವರಾಜ್, ಕುಬೇರಪ್ಪ, ತಿಪ್ಪೇಸ್ವಾಮಿ, ಕೃಷ್ಣೇಗೌಡ, ಶಿವಣ್ಣ, ಜೋಗೇಶ್, ಹನುಮಂತರಾಯ, ರಾಜೇಶ್, ಪ್ರಕಾಶ್, ಜಯಪ್ರಕಾಶ್, ನಿಜಲಿಂಗಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments