ನಾಯಕನಹಟ್ಟಿ ಮೇ5: ಕನ್ನಡಸಾಹಿತ್ಯ ಪರಿಷತ್ತು ವಿದ್ವಾಂಸರ ವಲಯ ಬಿಟ್ಟು ಇಂದು ಜನಸಾಮಾನ್ಯರತ್ತ ಹೆಜ್ಜೆ ಹಾಕುತ್ತಿರುವುದು ಕನ್ನಡ ಭಾಷಾ ಬೆಳವಣ ಗೆಗೆ ಸಹಕಾರಿಯಾಗಿದೆ ಎಂದು ಕನ್ನಡ ಸಹಾಯಕ ಪ್ರಾಧ್ಯಾಪಕ ಜಿ.ವಿ.ರಾಜಣ್ಣ ಹೇಳಿದರು.
ಪಟ್ಟಣದ ವಿದ್ಯಾವಿಕಾಸ ಶಾಲೆಯಲ್ಲಿ ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ನಡೆದ ೧೧೦ನೇ ಕನ್ನಡಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.
೧೯೧೫ರ ವೇಳೆಗೆ ದೇಶದಾದ್ಯಂತ ಇರುವ ಕನ್ನಡಿಗರೆಲ್ಲರೂ ಒಟ್ಟಾಗಿ ಸೇರಿ ಕನ್ನಡ ಭಾಷೆಯ ಅಸ್ಮಿತೆಯನ್ನು ಉಳಿಸಬೇಕು ಮತ್ತು ಬೆಳೆಸಬೇಕು ಎಂಬ ಮಹಾ ಉದ್ದೇಶದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಲಾಯಿತು. ಅಂದಿನ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್, ದಿವಾನರಾದ ಸರ್.ಎಂ.ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ ಅವರು ಈ ಸಂಸ್ಥೆಯನ್ನು ಸ್ಥಾಪಿಸಿ ಪ್ರವರ್ಧಮಾನಕ್ಕೆ ತಂದ ಮೂಲಪುರುಷರಾಗಿದ್ದಾರೆ. ಭಾಷೆಗಾಗಿ ಇರುವ ಜಗತ್ತಿನ ಏಕೈಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು. ಇದು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿಯೂ ಕನ್ನಡದ ಕವಿಗಳು, ಅವರ ಕೃತಿಗಳು, ಕನ್ನಡ ನಾಡು-ನುಡಿ ಚಿಂತನೆಯಲ್ಲಿ ತೊಡಗಿರುವ ಮಹನೀಯರಿಗೆ ಪ್ರೋತ್ಸಾಹಿಸುವ ಕಾರ್ಯವನ್ನು ಮಾಡಿದರು. ಇಂದು ಭಾಷೆಯ ಜತೆಗೆ ಕನ್ನಡ ಪರಿಸರವನ್ನು ರಕ್ಷಿಸುವ ಕಾರ್ಯವಾಗಬೇಕಿದೆ ಎಂದರು.
ಚಳ್ಳಕೆರೆ ಕಸಾಪ ಘಟಕದ ಅಧ್ಯಕ್ಷ ಜಿ.ಟಿ.ವೀರಭದ್ರನಾಯಕ, “ಕನ್ನಡ ನಾಡಿನಲ್ಲಿ ಕನ್ನಡ ಭಾಷೆಯನ್ನು ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಡುಗೆ ಅಪಾರವಾಗಿದೆ. ಪ್ರಸ್ತುತ ರಾಜ್ಯದಲ್ಲಿ ಅನ್ಯಭಾಷೆಗಳ ಹಾವಳಿಯಿದ್ದರೂ, ಕನ್ನಡ ಭಾಷೆ ಸದೃಢವಾಗಿ ಬೆಳೆಯುತ್ತಿದೆ. ಹಾಗೇ ಡಿಜಿಟಲ್ ಮಾದ್ಯಮದಲ್ಲಿ ಕನ್ನಡ ಸಾಹಿತ್ಯ ಯತೇಚ್ಛವಾಗಿ ದೊರೆಯಬೇಕು. ಸಾಹಿತ್ಯದ ಎಲ್ಲ ಪ್ರಕಾರಗಳನ್ನೂ ಪ್ರೋತ್ಸಾಸಿ ಸಮಾನ ಅವಕಾಶ ನೀಡಬೇಕು. ಹಾಗಾದಾಗ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಹೆಮ್ಮರವಾಗಿ ಬೆಳೆಯುತ್ತದೆ” ಎಂದರು.
ಇದೇವೇಳೆ ಕಸಾಪ ಹಿರಿಯ ಆಜೀವ ಸದಸ್ಯ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ, ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ಪ.ಪಂ ಸದಸ್ಯ ಸೈಯದ್ಅನ್ವರ್ ಮಾತನಾಡಿದರು.
ಇದೇವೇಳೆ ಕಸಾಪ ಹೋಬಳಿ ಘಟಕ ಅಧ್ಯಕ್ಷ ಬಿ.ಕಾಟಯ್ಯ, ಕಸಾಪ ಪದಾಧಿಕಾರಿಗಳಾದ ಬಿ.ಎಂ.ತಿಪ್ಪೇರುದ್ರಸ್ವಾಮಿ, ಪಣ ಯಪ್ಪ, ಜಿ.ವೈ.ತಿಪ್ಪೇಸ್ವಾಮಿ, ಶರವಿಮಹಾಂತೇಶ್, ಕೆ.ಚಿತ್ತಯ್ಯ, ಟಿ.ರೂಪ, ಎ.ಉಮಾ ಇತರರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments