ಭಾಷೆಯ ಹೆಸರಲ್ಲಿರುವ ಜಗತ್ತಿನ ಏಕೈಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ ಉಪನ್ಯಾಸಕ.ವಿ.ರಾಜಣ್ಣ

by | 05/05/24 | ಸುದ್ದಿ


ನಾಯಕನಹಟ್ಟಿ ಮೇ5: ಕನ್ನಡಸಾಹಿತ್ಯ ಪರಿಷತ್ತು ವಿದ್ವಾಂಸರ ವಲಯ ಬಿಟ್ಟು ಇಂದು ಜನಸಾಮಾನ್ಯರತ್ತ ಹೆಜ್ಜೆ ಹಾಕುತ್ತಿರುವುದು ಕನ್ನಡ ಭಾಷಾ ಬೆಳವಣ ಗೆಗೆ ಸಹಕಾರಿಯಾಗಿದೆ ಎಂದು ಕನ್ನಡ ಸಹಾಯಕ ಪ್ರಾಧ್ಯಾಪಕ ಜಿ.ವಿ.ರಾಜಣ್ಣ ಹೇಳಿದರು.
ಪಟ್ಟಣದ ವಿದ್ಯಾವಿಕಾಸ ಶಾಲೆಯಲ್ಲಿ ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ನಡೆದ ೧೧೦ನೇ ಕನ್ನಡಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.
೧೯೧೫ರ ವೇಳೆಗೆ ದೇಶದಾದ್ಯಂತ ಇರುವ ಕನ್ನಡಿಗರೆಲ್ಲರೂ ಒಟ್ಟಾಗಿ ಸೇರಿ ಕನ್ನಡ ಭಾಷೆಯ ಅಸ್ಮಿತೆಯನ್ನು ಉಳಿಸಬೇಕು ಮತ್ತು ಬೆಳೆಸಬೇಕು ಎಂಬ ಮಹಾ ಉದ್ದೇಶದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಲಾಯಿತು. ಅಂದಿನ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್, ದಿವಾನರಾದ ಸರ್.ಎಂ.ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ ಅವರು ಈ ಸಂಸ್ಥೆಯನ್ನು ಸ್ಥಾಪಿಸಿ ಪ್ರವರ್ಧಮಾನಕ್ಕೆ ತಂದ ಮೂಲಪುರುಷರಾಗಿದ್ದಾರೆ. ಭಾಷೆಗಾಗಿ ಇರುವ ಜಗತ್ತಿನ ಏಕೈಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು. ಇದು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿಯೂ ಕನ್ನಡದ ಕವಿಗಳು, ಅವರ ಕೃತಿಗಳು, ಕನ್ನಡ ನಾಡು-ನುಡಿ ಚಿಂತನೆಯಲ್ಲಿ ತೊಡಗಿರುವ ಮಹನೀಯರಿಗೆ ಪ್ರೋತ್ಸಾಹಿಸುವ ಕಾರ್ಯವನ್ನು ಮಾಡಿದರು. ಇಂದು ಭಾಷೆಯ ಜತೆಗೆ ಕನ್ನಡ ಪರಿಸರವನ್ನು ರಕ್ಷಿಸುವ ಕಾರ್ಯವಾಗಬೇಕಿದೆ ಎಂದರು.
ಚಳ್ಳಕೆರೆ ಕಸಾಪ ಘಟಕದ ಅಧ್ಯಕ್ಷ ಜಿ.ಟಿ.ವೀರಭದ್ರನಾಯಕ, “ಕನ್ನಡ ನಾಡಿನಲ್ಲಿ ಕನ್ನಡ ಭಾಷೆಯನ್ನು ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಡುಗೆ ಅಪಾರವಾಗಿದೆ. ಪ್ರಸ್ತುತ ರಾಜ್ಯದಲ್ಲಿ ಅನ್ಯಭಾಷೆಗಳ ಹಾವಳಿಯಿದ್ದರೂ, ಕನ್ನಡ ಭಾಷೆ ಸದೃಢವಾಗಿ ಬೆಳೆಯುತ್ತಿದೆ. ಹಾಗೇ ಡಿಜಿಟಲ್ ಮಾದ್ಯಮದಲ್ಲಿ ಕನ್ನಡ ಸಾಹಿತ್ಯ ಯತೇಚ್ಛವಾಗಿ ದೊರೆಯಬೇಕು. ಸಾಹಿತ್ಯದ ಎಲ್ಲ ಪ್ರಕಾರಗಳನ್ನೂ ಪ್ರೋತ್ಸಾಸಿ ಸಮಾನ ಅವಕಾಶ ನೀಡಬೇಕು. ಹಾಗಾದಾಗ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಹೆಮ್ಮರವಾಗಿ ಬೆಳೆಯುತ್ತದೆ” ಎಂದರು.
ಇದೇವೇಳೆ ಕಸಾಪ ಹಿರಿಯ ಆಜೀವ ಸದಸ್ಯ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ, ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ಪ.ಪಂ ಸದಸ್ಯ ಸೈಯದ್‌ಅನ್ವರ್ ಮಾತನಾಡಿದರು.
ಇದೇವೇಳೆ ಕಸಾಪ ಹೋಬಳಿ ಘಟಕ ಅಧ್ಯಕ್ಷ ಬಿ.ಕಾಟಯ್ಯ, ಕಸಾಪ ಪದಾಧಿಕಾರಿಗಳಾದ ಬಿ.ಎಂ.ತಿಪ್ಪೇರುದ್ರಸ್ವಾಮಿ, ಪಣ ಯಪ್ಪ, ಜಿ.ವೈ.ತಿಪ್ಪೇಸ್ವಾಮಿ, ಶರವಿಮಹಾಂತೇಶ್, ಕೆ.ಚಿತ್ತಯ್ಯ, ಟಿ.ರೂಪ, ಎ.ಉಮಾ ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page