ಮಕರ ಸಂಕ್ರಾಂತಿಯ ಪ್ರಯುಕ್ತ ಪತಂಜಲಿ ಯೋಗ ಶಿಕ್ಷಣ ವತಿಯಿಂದ 108 ಸೂರ್ಯ ನಮಸ್ಕಾರ

by | 15/01/24 | ಸುದ್ದಿ

ಚಳ್ಳಕೆರೆ ಜ15
ಮಂತ್ರದಿಂದ ವಾಕ್ಯ ಶುದ್ಧಿ; ಯೋಗದಿಂದ ದೇಹ ಶುದ್ದಿ; ಎಂಬ ಗಾದೆಯಂತೆ ದಿನನಿತ್ಯ ಯೋಗ ಅಭ್ಯಾಸದಿಂದ ದೇಹ ಮನಸ್ಸು ಶಾಂತಿಯಿಂದ ಕೂಡಿ ದೇಹ ಸದೃಢವಾಗಲಿಕ್ಕೆ ಪೂರಕವಾಗಿರುತ್ತದೆ ಎಂದು ಪತಂಜಲಿ ಯೋಗ ಶಿಕ್ಷಣದ ಗುರು ಮನೋಹರ್ ಹೇಳಿದರು


ಇವರು ನಗರದ ನಗರಸಭೆ ಎದುರು ರಸ್ತೆಯಲ್ಲಿ ಬೆಳಗಿನ ಜಾವ ಐದು ಮೂವತ್ತರಿಂದ ಏಳು ಗಂಟೆಯವರೆಗೂ 108 ಸೂರ್ಯ ನಮಸ್ಕಾರಗಳೊಂದಿಗೆ ಸಾರ್ವಜನಿಕರಲ್ಲಿ ಯೋಗಾಭ್ಯಾಸದ ಜಾಗೃತಿ ಮೂಡಿಸಿ ಮಾತನಾಡಿದರು

ಇತ್ತೀಚಿನ ದಿನಗಳಲ್ಲಿ ಮನುಷ್ಯಕೆಲಸದ ಒತ್ತಡಕ್ಕೆ ಸಿಕ್ಕು ದೇಹ ಮನಸ್ಸನ್ನು ಕೆಡಿಸಿಕೊಂಡು, ಅನಾರೋಗ್ಯಕ್ಕೆ ತುತ್ತಾಗುತ್ತಿದ್ದೀರಿ ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಮನುಷ್ಯನು ದಿನನಿತ್ಯ ಯೋಗಾಭ್ಯಾಸದಿಂದ ದೇಹ ಮನಸ್ಸು ಸದೃಢಗೊಳ್ಳುತ್ತದೆ, ಅಲ್ಲದೆ ಆಧ್ಯಾತ್ಮದ ಚಿಂತನೆಯು ಕೂಡ ಮನುಷ್ಯನ ಮನದಲ್ಲಿ ಸದ್ಗುಣಗೊಳಿಸುತ್ತದೆ, ಇದರಿಂದಾಗಿ ಪ್ರತಿಯೊಬ್ಬ ನಾಗರಿಕರು ತಮ್ಮ ದಿನನಿತ್ಯದ ಕೆಲಸದ ಜೊತೆಗೆ ಬೆಳಗಿನ ಜಾವ ಒಂದು ಗಂಟೆಗಳ ಕಾಲ ಯೋಗಾಭ್ಯಾಸಕ್ಕೆ ಮೀಸಲಿಡಿ ನೀವು ಯೋಗಾಭ್ಯಾಸ ಕಲಿತು ಇನ್ನೊಬ್ಬರಿಗೂ ಕೂಡ ಯೋಗದ ಪರಿಚಯ ಮಾಡಿಕೊಡಿ ಅಂದಾಗಲೇ ಸಮಾಜದ ಉನ್ನತಿಗೆ ಕಾರಣವಾಗುತ್ತದೆ ಇದು ಅಲ್ಲವೇ ಯೋಗ ಅಭ್ಯಾಸ ಅನ್ನುವುದು ಮಕರ ಸಂಕ್ರಾಂತಿಗೆ ಸೀಮಿತವಾಗದೆ ದಿನನಿತ್ಯ ಅಭ್ಯಾಸದಲ್ಲಿ ತೊಡಗಿ ನಿಮ್ಮ ದೇಹ ಶುದ್ದಿ ಮಾಡಿಕೊಳ್ಳಿ ಎಂದು ತಿಳಿಸಿದರು,


ಇನ್ನು ಈ ಸಂದರ್ಭದಲ್ಲಿ ಯೋಗ ಶಿಕ್ಷಕಿ ಪ್ರಮೋದ ಆನಂದ್ ಮಾತನಾಡಿ ಮನುಷ್ಯ ದಿನನಿತ್ಯ ಹಲವಾರು ಒತ್ತಡಗಳಿಂದ ಮಾನಸಿಕ ನೆಮ್ಮದಿ ದೇಹದ ಅಶುದ್ಧತೆಯಿಂದ ಕೂಡಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ ,ಈ ನಿಟ್ಟಿನಲ್ಲಿ ನಮ್ಮ ಪತಂಜಲಿ ಯೋಗ ಶಿಕ್ಷಣವು ಉಚಿತವಾಗಿ ದಿನನಿತ್ಯ ಯೋಗ ಅಭ್ಯಾಸವನ್ನು ಹೇಳಿಕೊಡಲಾಗುತ್ತದೆ, ಇದರ ಸದುಪಯೋಗವನ್ನು ಜನಸಾಮಾನ್ಯರು ತಮ್ಮ ದೇಹದ ಸ್ಥಿತಿ ಮಾನಸಿಕ ಸ್ಥಿತಿಯನ್ನು ಸದೃಢಗೊಳಿಸಿಕೊಂಡು ಮಕ್ಕಳಲ್ಲಿ ಯೋಗದ ಬಗ್ಗೆ ಪರಿಚಯಿಸಿಕೊಡಿ ಎಂದು ತಿಳಿಸಿದರು

ಇನ್ನು ಈ ವೇಳೆ c t ಮಾಸ್ಟರ್. ಶಿವ ನಾಗಪ್ಪ. ಜಯರಾಮ್ ಬಾಬಣ್ಣ, ಗಂಗಾಧರ್, ತಿಪ್ಪೇಸ್ವಾಮಿ, ಚಿದಾನಂದ ಸ್ವಾಮಿ, ಶಿವಣ್ಣ, ಚೆನ್ನಕೇಶವಚಾರ್ ,ಬಾಬುರೆಡ್ಡಿ, ಡಾಕ್ಟರ್ ವೀರೇಶ್. ಮಣಿ ಅಕ್ಕ, ಗೀತಕ್ಕ ಸೇರಿದಂತೆ ಅನೇಕ ಯೋಗ ಪಟುಗಳು ಹಾಜರಿದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page