ಮಕರ ಸಂಕ್ರಾಂತಿಯ ಪ್ರಯುಕ್ತ ಪತಂಜಲಿ ಯೋಗ ಶಿಕ್ಷಣ ವತಿಯಿಂದ 108 ಸೂರ್ಯ ನಮಸ್ಕಾರ

by | 15/01/24 | ಸುದ್ದಿ

ಚಳ್ಳಕೆರೆ ಜ15
ಮಂತ್ರದಿಂದ ವಾಕ್ಯ ಶುದ್ಧಿ; ಯೋಗದಿಂದ ದೇಹ ಶುದ್ದಿ; ಎಂಬ ಗಾದೆಯಂತೆ ದಿನನಿತ್ಯ ಯೋಗ ಅಭ್ಯಾಸದಿಂದ ದೇಹ ಮನಸ್ಸು ಶಾಂತಿಯಿಂದ ಕೂಡಿ ದೇಹ ಸದೃಢವಾಗಲಿಕ್ಕೆ ಪೂರಕವಾಗಿರುತ್ತದೆ ಎಂದು ಪತಂಜಲಿ ಯೋಗ ಶಿಕ್ಷಣದ ಗುರು ಮನೋಹರ್ ಹೇಳಿದರು


ಇವರು ನಗರದ ನಗರಸಭೆ ಎದುರು ರಸ್ತೆಯಲ್ಲಿ ಬೆಳಗಿನ ಜಾವ ಐದು ಮೂವತ್ತರಿಂದ ಏಳು ಗಂಟೆಯವರೆಗೂ 108 ಸೂರ್ಯ ನಮಸ್ಕಾರಗಳೊಂದಿಗೆ ಸಾರ್ವಜನಿಕರಲ್ಲಿ ಯೋಗಾಭ್ಯಾಸದ ಜಾಗೃತಿ ಮೂಡಿಸಿ ಮಾತನಾಡಿದರು

ಇತ್ತೀಚಿನ ದಿನಗಳಲ್ಲಿ ಮನುಷ್ಯಕೆಲಸದ ಒತ್ತಡಕ್ಕೆ ಸಿಕ್ಕು ದೇಹ ಮನಸ್ಸನ್ನು ಕೆಡಿಸಿಕೊಂಡು, ಅನಾರೋಗ್ಯಕ್ಕೆ ತುತ್ತಾಗುತ್ತಿದ್ದೀರಿ ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಮನುಷ್ಯನು ದಿನನಿತ್ಯ ಯೋಗಾಭ್ಯಾಸದಿಂದ ದೇಹ ಮನಸ್ಸು ಸದೃಢಗೊಳ್ಳುತ್ತದೆ, ಅಲ್ಲದೆ ಆಧ್ಯಾತ್ಮದ ಚಿಂತನೆಯು ಕೂಡ ಮನುಷ್ಯನ ಮನದಲ್ಲಿ ಸದ್ಗುಣಗೊಳಿಸುತ್ತದೆ, ಇದರಿಂದಾಗಿ ಪ್ರತಿಯೊಬ್ಬ ನಾಗರಿಕರು ತಮ್ಮ ದಿನನಿತ್ಯದ ಕೆಲಸದ ಜೊತೆಗೆ ಬೆಳಗಿನ ಜಾವ ಒಂದು ಗಂಟೆಗಳ ಕಾಲ ಯೋಗಾಭ್ಯಾಸಕ್ಕೆ ಮೀಸಲಿಡಿ ನೀವು ಯೋಗಾಭ್ಯಾಸ ಕಲಿತು ಇನ್ನೊಬ್ಬರಿಗೂ ಕೂಡ ಯೋಗದ ಪರಿಚಯ ಮಾಡಿಕೊಡಿ ಅಂದಾಗಲೇ ಸಮಾಜದ ಉನ್ನತಿಗೆ ಕಾರಣವಾಗುತ್ತದೆ ಇದು ಅಲ್ಲವೇ ಯೋಗ ಅಭ್ಯಾಸ ಅನ್ನುವುದು ಮಕರ ಸಂಕ್ರಾಂತಿಗೆ ಸೀಮಿತವಾಗದೆ ದಿನನಿತ್ಯ ಅಭ್ಯಾಸದಲ್ಲಿ ತೊಡಗಿ ನಿಮ್ಮ ದೇಹ ಶುದ್ದಿ ಮಾಡಿಕೊಳ್ಳಿ ಎಂದು ತಿಳಿಸಿದರು,


ಇನ್ನು ಈ ಸಂದರ್ಭದಲ್ಲಿ ಯೋಗ ಶಿಕ್ಷಕಿ ಪ್ರಮೋದ ಆನಂದ್ ಮಾತನಾಡಿ ಮನುಷ್ಯ ದಿನನಿತ್ಯ ಹಲವಾರು ಒತ್ತಡಗಳಿಂದ ಮಾನಸಿಕ ನೆಮ್ಮದಿ ದೇಹದ ಅಶುದ್ಧತೆಯಿಂದ ಕೂಡಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ ,ಈ ನಿಟ್ಟಿನಲ್ಲಿ ನಮ್ಮ ಪತಂಜಲಿ ಯೋಗ ಶಿಕ್ಷಣವು ಉಚಿತವಾಗಿ ದಿನನಿತ್ಯ ಯೋಗ ಅಭ್ಯಾಸವನ್ನು ಹೇಳಿಕೊಡಲಾಗುತ್ತದೆ, ಇದರ ಸದುಪಯೋಗವನ್ನು ಜನಸಾಮಾನ್ಯರು ತಮ್ಮ ದೇಹದ ಸ್ಥಿತಿ ಮಾನಸಿಕ ಸ್ಥಿತಿಯನ್ನು ಸದೃಢಗೊಳಿಸಿಕೊಂಡು ಮಕ್ಕಳಲ್ಲಿ ಯೋಗದ ಬಗ್ಗೆ ಪರಿಚಯಿಸಿಕೊಡಿ ಎಂದು ತಿಳಿಸಿದರು

ಇನ್ನು ಈ ವೇಳೆ c t ಮಾಸ್ಟರ್. ಶಿವ ನಾಗಪ್ಪ. ಜಯರಾಮ್ ಬಾಬಣ್ಣ, ಗಂಗಾಧರ್, ತಿಪ್ಪೇಸ್ವಾಮಿ, ಚಿದಾನಂದ ಸ್ವಾಮಿ, ಶಿವಣ್ಣ, ಚೆನ್ನಕೇಶವಚಾರ್ ,ಬಾಬುರೆಡ್ಡಿ, ಡಾಕ್ಟರ್ ವೀರೇಶ್. ಮಣಿ ಅಕ್ಕ, ಗೀತಕ್ಕ ಸೇರಿದಂತೆ ಅನೇಕ ಯೋಗ ಪಟುಗಳು ಹಾಜರಿದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page