ಮಕ್ಕಳನ್ನು ದೇವರ ಸಮಾನ ಕಾಣಿ…. ಕಸವನಹಳ್ಳಿ ರಮೇಶ್ ಸಾಮಾಜಿಕ ಕಾರ್ಯಕರ್ತ.

by | 09/12/23 | ಶಿಕ್ಷಣ


ಹಿರಿಯೂರು 9. ಹಿರಿಯೂರು ತಾಲೂಕು ಕಸವನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿವರ್ತನ್ ಇಂಡಿಯಾ ಸಂಸ್ಥೆಯ ಶ್ರೀಮತಿ ರಶ್ಮಿ ಅವರು ಮಕ್ಕಳಿಗೆ ಶಾಲಾ ಬ್ಯಾಗ್, ಜಾಮಿಟ್ರಿ, ಕಂಪಾಸ್, ಪೆನ್ನು ಇತರೆ ಶೈಕ್ಷಣಿಕ ಪರಿಕರಗಳನ್ನು ವಿತರಣೆ ಮಾಡಿ ಮಾತನಾಡುತ್ತಾ “”ಭವಿಷ್ಯದಲ್ಲಿ ಸದೃಢ ಸಮಾಜವನ್ನು ನಿರ್ಮಾಣ ಮಾಡಬೇಕೆಂದರೆ ಪ್ರಜೆಗಳು, ಕುಟುಂಬ, ಹಳ್ಳಿಗಳು, ರಾಜ್ಯ, ದೇಶವನ್ನು ಉದ್ದೇಶವಾಗಿಟ್ಟುಕೊಂಡು ಮಕ್ಕಳನ್ನು ಬೆಳೆಸಬೇಕು ಖಾಸಗಿ ಶಾಲೆಗಳು ಕೊಡಮಾಡುವ ಮಾಹಿತಿ ಗಿಂತ ಸರ್ಕಾರಿ ಶಾಲೆಗಳಲ್ಲಿಅದರಲ್ಲಿಯೂ ಹಳ್ಳಿಗಳಲ್ಲಿ ಸಿಗುವ ಸಾಮಾನ್ಯ ಜ್ಞಾನವನ್ನು ಮಕ್ಕಳಿಗೆ ಹೆಚ್ಚು ಹೆಚ್ಚು ಕಲಿಸುವ ಮೂಲಕ ಸದೃಢ ಸುಸಂಸ್ಕೃತ ಸಮಾಜವನ್ನು, ದೇಶವನ್ನು ನಿರ್ಮಾಣ ಮಾಡಬೇಕು. ಮಕ್ಕಳಿಗಾಗಿ ಆಸ್ತಿ ವಗೈರೆಗಳನ್ನು ಕೂಡಿಡುವ ಬದಲು ಶಿಕ್ಷಣ ,ಸಂಸ್ಕಾರ ಸಾಮಾನ್ಯ ಜ್ಞಾನ, ದಾನ, ಧರ್ಮ ಮಾಡುವಂಥ ಮನಸ್ಥಿತಿಯನ್ನು ಮಕ್ಕಳಲ್ಲಿ ಗಟ್ಟಿಗೊಳಿಸಬೇಕು. ಇಲ್ಲವಾದಲ್ಲಿ ರೋಗಗ್ರಸ್ತ ,,ವ್ಯಸನ ಪೀಡಿತ ಮನಸ್ಥಿತಿಯ ಮಕ್ಕಳು ಬೆಳೆಯುತ್ತಾರೆ. ಕಳೆದ ನಾಲ್ಕು ವರ್ಷಗಳಿಂದ ನಮ್ಮ ಶಾಲೆಯ ಮಕ್ಕಳಿಗೆ ಪರಿವರ್ತನಾ ಇಂಡಿಯಾ ಫೌಂಡೇಶನ್ ನ ಶ್ರೀಮತಿ ರಶ್ಮಿ ಅವರು ಶೈಕ್ಷಣಿಕ ಪರಿಕರಗಳನ್ನು ಕೊಡ ಮಾಡುತ್ತಿರುವುದು ಅತ್ಯಂತ ಸಂತೋಷದ ಹಾಗೂ ಶ್ಲಾಘನೀಯ ಕೆಲಸ ಇಂಥವರ ಸಂಖ್ಯೆ ಹೆಚ್ಚಾಗಲಿ ಹಾಗೂ ಗ್ರಾಮದ ಶಾಲೆಗೆ ಜಮೀನು ದಾನ ಮಾಡಿದ ಹಾಗೂ ಬೆಂಚು, ಕುರ್ಚಿ, ಮೈಕ್ ಸೆಟ್,ಊಟದ ತಟ್ಟೆ, ಪುಸ್ತಕಗಳು ಎಂದು ನೂರಾರು ವಸ್ತುಗಳನ್ನು ದಾನ ಮಾಡಿದ ಶ್ರೀಯುತ ಕೆಆರ್ ಪ್ರೇಮನಾಥ್, ಕೆ ಆರ್ ಶ್ರೀನಾಥ್, ಎಂ ಓಂಕಾರಪ್ಪ ಇವರು ಪ್ರಾಥಸ್ಮರಣೆಯರು.ಎಂದು ಹೇಳಿದರು. ಶಾಲೆಗೆ ಆಗಮಿಸಿದ್ದ ಶಿಕ್ಷಣ ಸಂಯೋಜಕರಾದ ಶಶಿಧರ್ ಹಾಗೂ ಬಿ ಆರ್ ಪಿ ಪ್ರಸನ್ನ ಮಾತನಾಡಿದರು. ಪರಿವರ್ತನ್ ಇಂಡಿಯಾ ಫೌಂಡೇಶನ್ ನ ಶ್ರೀಮತಿ ರಶ್ಮಿ ಅವರು ಮಾತನಾಡಿ ನಮ್ಮ ಸಂಸ್ಥೆಯಿಂದ ಸೌಲಭ್ಯ ವಂಚಿತ ಸರ್ಕಾರಿ ಶಾಲೆಯ ಮಕ್ಕಳಿಗೆ ಪ್ರತಿವರ್ಷ ಶೈಕ್ಷಣಿಕ ಪರಿಕರಗಳನ್ನು ಕೂಡ ಮಾಡುತ್ತಿರುವುದರ ಉದ್ದೇಶ ನಾವುಗಳು ಓದುವಾಗ ಇಂತಹ ಎಲ್ಲಾ ಸೌಲಭ್ಯಗಳು ನಮಗೆ ಸಿಗಲಿಲ್ಲ. ಆದ್ದರಿಂದ ಇವತ್ತಿನ ಮಕ್ಕಳಿಗಾದರೂ ಈ ಎಲ್ಲಾ ಸೌಲಭ್ಯಗಳನ್ನು ಒದಗಿಸೋಣ. ಶಿಕ್ಷಣದ ಮಹತ್ವವನ್ನು ಪೋಷಕರು ಅರಿತು ,ಬೆರೆತು, ಮಕ್ಕಳನ್ನು ಬೆಳೆಸಬೇಕು ಎಂದು ಹೇಳಿದರು. ಮುಖ್ಯ ಶಿಕ್ಷಕ ರಂಗನಾಥ್ ಕಾರ್ಯಕ್ರಮ ನಡೆಸಿಕೊಟ್ಟರು. ಸಹ ಶಿಕ್ಷಕ ಬಸವರಾಜ್ ಅವರು ಸ್ವಾಗತಿಸಿದರು. ಶಾಲೆಯ ವತಿಯಿಂದ ಶ್ರೀಮತಿ ರಶ್ಮಿ ಅವರ ತಾಯಿ ಶ್ರೀಮತಿ ಕಲ್ಪನಾ ಅವರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್. ಡಿ. ಎಂ. ಸಿ. ಅಧ್ಯಕ್ಷ ಮಂಜುನಾಥ್ ಗ್ರಾಮದ ಮುಖಂಡರಾದ ಆರ್ ಪ್ರಕಾಶ್. ರಾಮಚಂದ್ರ ಕಸವನಹಳ್ಳಿ, ಆರ್.ರಾಘವೇಂದ್ರ… ಎ.ಶ್ರೀನಿವಾಸ್. ಆರ್ ತಿಮ್ಮಣ್ಣ. ಅಂಗನವಾಡಿ ಶಿಕ್ಷಕಿ ಮಹಾಲಕ್ಷ್ಮಿ ನಂದಿನಿ ಗ್ರಾಮಸ್ಥರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page