ಮಕ್ಕಳಿಗೆ ದೃಷ್ಠಿದೋಷವಿದೆ ನಮ್ಮಲ್ಲಿ ಹಣವಿಲ್ಲ ಹೇಗಪ್ಪ ಚಿಕಿತ್ಸೆ ಕೊಡಿಸುವುದು ಎಂಬ ಕೊರಗು ಬಿಡಿ ನಮ್ಮಲ್ಲಿ ಮಕ್ಕಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಕೊಡಿಸಲಾಗುವುದು ಶ್ರೀ ಜಪಾನಂದಸ್ವಾಮಿಜಿ .

by | 29/05/24 | ಆರೋಗ್ಯ

ಪಾವಗಡ ಜನಧ್ವನಿ ವಾರ್ತೆ ಮೇ 29 ಪೋಷಕರು ತಮ್ಮ ಮಕ್ಕಳಿಗೆ ಸಮಗ್ರ ಕಣ್ಣಿನ ಪರೀಕ್ಷೆಯನ್ನು ಮಾಡಿಸಬೇಕು ಎಂದು ಮಕ್ಕಳ ನೇತ್ರ ಚಿಕಿತ್ಸಾ ತಜ್ಞರಾದ ಡಾ.ವಸುಧಾ ನರೇಶ್ ಕಿವಿಮಾತು ಹೇಳಿದರು.
ಪಾವಗಡ ನಗರದ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಕ್ಕಳ ಕಣ್ಣಿತನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.
ಸಮರ್ಪಕವಾದ ದೃಷ್ಟಿಯು ಮಗುವಿನ ಶಿಕ್ಷಣದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಮಗುವು ಮಸುಕಾದ ದೃಷ್ಟಿಯನ್ನು ಹೊಂದಿದ್ದು, ವಿಲಕ್ಷಣತೆಯಿಂದ ಕೂಡಿದ್ದರೆ ಕಲಿಕೆ ಸಮಯವನ್ನು ಕಳೆದುಕೊಳ್ಳುತ್ತದೆ ಮತ್ತು ದೃಷ್ಟಿಯ ಗಂಭೀರ ಸ್ವರೂಪದ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಸಮಸ್ಯೆಗಳೇನಾದರೂ ಇದ್ದರೆ ಅವುಗಳನ್ನು ಬೇಗನೇ ಪತ್ತೆ ಮಾಡಿ ಚಿಕಿತ್ಸೆ ಕೊಡಿಸಬಹುದು ಮತ್ತು ಗಂಭೀರ ಸ್ವರೂಪಕ್ಕೆ ಹೋಗುವ ಮುನ್ನ ತಡೆಗಟ್ಟಬಹುದು. ಸಮಸ್ಯೆಗಳನ್ನು ಪತ್ತೆ ಮಾಡಲು ಕಣ್ಣಿನ ಪರೀಕ್ಷೆ ಮಾಡಿಸುವುದು ಉತ್ತಮ.
ಮಕ್ಕಳಲ್ಲಿ ಕಂಡು ಬರುವ ಕಣ್ಣಿನ ಸಮಸ್ಯೆಯನ್ನು ಪೋಷಕರು ನಿರ್ಲಕ್ಷಿಸಬಾರದು ಎಂದು ಹೇಳಿದರು.


ಶ್ರೀ ರಾಮಕೃಷ್ಣಾಶ್ರಮದ ಶ್ರೀ ಜಪಾನಂದಸ್ವಾಮಿಜಿ ಮಾತನಾಡಿ ಮಕ್ಕಳಿಗೆ ಕಣ್ಣಿನ ಸಮಸ್ಯೆಯಿದೆ ಹೇಗಪ್ಪ ಚಿಕಿತ್ಸೆ ಕೊಡಿಸುವುದು ನಮ್ಮಲ್ಲಿ ಹಣ ಇಲ್ಲ ಎಂಬ ಕೊರಗು ಬೇಡ ಪೋಷಕರ ನಿರ್ಲಕ್ಷತೆಯ ಜಾಗೃತಿ ಕೊರತೆ, ಬಡತನ ಮೊದಲಾದ ಕಾರಣದಿಂದ ಅನೇಕ ಮಕ್ಕಳಲ್ಲಿ ದೃಷ್ಟಿದೋಷ ಹಾಗೂ ಅಂಧತ್ವ ಕಾಣುತ್ತಿದೆ. ಪ್ರಸ್ತುತ ಮಕ್ಕಳಲ್ಲಿ ಮೊಬೈಲ್ ಗೇಮ್, ಕಂಪ್ಯೂಟರ್ ಗೇಮ್ಗಳನ್ನು ಆಡುವ ಹವ್ಯಾಸ ಹೆಚ್ಚಾಗಿದೆ. ಈ ಹವ್ಯಾಸದಿಂದ ಮಕ್ಕಳಲ್ಲಿ ಕಣ್ಣಿನ ಸಮಸ್ಯೆ ಉಂಟಾಗುತ್ತಿದೆ.


ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದವತಿಯಿಂದ ಹಸುಗೂಸು ಮಕ್ಕಳಿಂದ ಹಿಡಿದು 15 ವರ್ಷದ ಮಕ್ಕಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಕೊಡಿಸಲಾಗುವುದು.
ಈ ಉಚಿತಿ ಆರೋಗ್ಯ ಶಿಬಿರವನ್ನು ಸದುಪಯೋಗ ಪಡಿಸಿಕೊಂಡು ನಿಮ್ಮ ಮಕ್ಕಳ ಕಣ್ಣಿನ ರಕ್ಷಣೆ ಮಾಡಿಕೊಳ್ಳಿ ಬುಧವಾರ ದ ಶಿಬಿರದಲ್ಲಿ ಚಳ್ಳಕೆರೆ, ಪರಶುರಾಮಪುರ, ಕಲ್ಯಾಣದುರ್ಗ, ಮಧುಗಿರಿ, ರೊದ್ದಂ ಹಾಗೂ ಪಾವಗಡ ಸುತ್ತಮುತ್ತಲಿನ ಪ್ರದೇಶಗಳಿಂದ ಪೋಷಕರು ತಮ್ಮ 13 ದಿನಗಳ ಮಗು ಸೇರಿ 50 ಮಕ್ಕಳಿಗೆ ತಪಾಸಣೆ ಮಾಡಿ ದೃಷ್ಠಿ ದೋಷ ಇರುವ ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿ ವಿವೇಕ ಕಿರಣ ಯೋಜನೆಯಡಿಯಲ್ಲಿ ಉಚಿತ ಕನ್ನಡಕಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪೋಷಕರು ಹಾಗೂ ಮಕ್ಕಳಿಗೆ ಮಧ್ಯಾನ್ಹದ ಭೋಜನ ವ್ಯವಸ್ಥೆ ಹಾಗೂ ಮಕ್ಕಳಿಗೆ ತಿಂಡಿ, ಮಜ್ಜಿಗೆ ಇತ್ಯಾದಿಗಳನ್ನು ವ್ಯವಸ್ಥೆ ಮಾಡಲಾಗಿತ್ತು.
ಶಿಬಿರದಲ್ಲಿ ಹಿರಿಯ ನೇತ್ರ ತಪಾಸಣಾ ತಜ್ಞರಾದ ಡಾ.ಕಾವ್ಯ, ಡಾ. ಶರತ್, ಡಾ.ಅಭಿಷೇಕ್, ಡಾ.ಕೀರ್ತಿ ಹಾಗೂ ಡಾ.ಚಂದ್ರಕಲಾ ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page