ಚಳ್ಳಕೆರೆ ನ.10 ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಅನಾವರಣ ಮಾಡುವ ಮೂಲಕ ಮಕ್ಕಳು ಸರ್ವಾಂಗೀಣ ಬೆಳವಣಿಗೆ ಸಾಧಿಸಲು ಅವಕಾಶ ಕಲ್ಪಿಸಬೇಕು. ಸೋಲು, ಗೆಲುವಿನ ಬಗ್ಗೆ ಯೋಚಿಸದೆ ಸ್ಪರ್ಧೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.
ನಗರದ ಸ್ವಾಮಿವಿವೇಕಾನಂದ ವಿದ್ಯಾ ಸಂಸ್ಥೆ ಆವರಣದಲ್ಲಿ ಶುಕ್ರವಾರ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಾಲೂಕಿನಲ್ಲಿ ಬರಗಾಲವಿದ್ದರೂ ಶಿಕ್ಷಣ ಕ್ಷೇತ್ರ, ಕಲೆ, ಸಾಹಿತ್ಯ, ರಂಗಭೂಮಿ ಕೃಷಿಗೆ ಬರವಿಲ್ಲ , ಬುಡಕಟ್ಟು ಸಂಸ್ಕೃತಿಗಳನ್ನು ಹೊಂದಿರುವ ಹಿನ್ನೆಲೆಯಲ್ಲಿ ಶಿಕ್ಷಣದ ಜತೆಗೆ ಮಕ್ಕಳಿಗೆ ಇಂಥ ಸಾಂಸ್ಕೃತಿಕ ವೇದಿಕೆಗಳನ್ನು ಕಲ್ಪಿಸುವ ಮೂಲಕ ಮಕ್ಕಳಿರುವ ಪ್ರತಿಭೆಯನ್ನು ಗುರುತಿಸುವ ಕೆಲಸವಾಗಬೇಕು.
ಮಕ್ಕಳಿಗೆ ಪಠ್ಯ ಚಟುವಟಿಕೆಗಳ ಜತೆಗೆ ಕ್ರೀಡೆ, ಕಲೆ, ನಾಟಕ ನೃತ್ಯದಂತಹ ಪಠ್ಯೇತರ ಚಟುವಟಿಕೆಗಳನ್ನು ಕಲಿಸುವ ಹಾಗೂ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರದರ್ಶನ ಮಾಡಲು ಇಂತಹ ವೇಧಿಕೆಗಳು ಸಹಕಾರಿಯಾಗಲಿವೆ ಎಂದು ತಿಳಿಸಿದರು.
ಬಿಇಒ ಕೆ.ಎಸ್.ಸುರೇಶ್ ಮಾತನಾಡಿ,ಶಾಲೆಗಳಲ್ಲಿ ಮಕ್ಕಳ ಪಾಠದ ಜತೆಗೆ ಅವರಲ್ಲಿನ ವಿಶೇಷ ಕೌಶಲ,ಅಭಿರುಚಿ ಗುರುತಿಸುವ ಮಹತ್ವದ ಕಾರ್ಯ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಿಂದ ಆನಾವರಣಗೊಳ್ಳುವುದು ಎಂದು ತಿಳಿಸಿದರು.
ಮಕ್ಕಳಲ್ಲಿ ನಾನಾ ರೀತಿಯ ಪ್ರತಿಭೆಗಳಿರುವ ಹಿನ್ನೆಲೆಯಲ್ಲಿ ವೈಯಕ್ತಿಕ ಮತ್ತು ಸಾಮೂಹಿಕ ಹೀಗೆ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ 28 ಸ್ವರ್ಧೆಗಳನ್ನು ನಡೆಸಲಾಗುತ್ತಿದ್ದು, ತೀರ್ಪುಗಾರರು ಯಾವುದೇ ಪಕ್ಷಪಾತ ಮಾಡದೆ ಕಲೆ ಮತ್ತು ಕೌಶಲ ಗುರುತಿಸಿ ತೀರ್ಪು ನೀಡುವ ಮೂಲಕ ಮಕ್ಕಳಿಗೆ ಪ್ರೋತ್ಸಾಹಿಒಸಬೇಕು. ಇಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾ ಹಂತಕ್ಕೆ ಹೋಗುವರು ಎಂದು ತಿಳಿಸಿದರು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ.ರಾಘವೇಂದ್ರ, ಸುಜಾತ,ಕವಿತಾ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಲಿಂಗೇಗೌಡ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ, ಪ್ರಭಾರ ಬಿಆರ್ಸಿ ತಿಪ್ಪೇಸ್ವಾಮಿ, ದೈಹಿಕ ಪರಿವೀಕ್ಷಕ ಸುನೀಲ್ಕುಮಾರ್, ಪ್ರೌಢಶಾಲೆ ಮುಖ್ಯ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀನಿವಾಸ್,ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ರಾಜಕುಮಾರ್, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಲಿಂಗಪ್ಪ, ಪದಾಧಿಕಾರಿಗಳಾದ ಈರಣ್ಣ, ವೀರಣ್ಣ, ಸದಾಶಿವಪ್ಪ, ನಾಗರಾಜ್, ಇಸಿಒಗಳಾದ ಮಾರುತಿ ಭಂಡಾರಿ,ಗಿರೀಶ್ ಇತರರಿದ್ದರು.
0 Comments