ಮಕ್ಕಳಿಗೆ ಶಾಲಾಹಂತದಲ್ಲಿಯೇ ದೇಶಾಭಿಮಾನ ಬೆಳೆಸಬೇಕು :ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ.

by | 15/12/23 | ಶಿಕ್ಷಣ


ಹಿರಿಯೂರು :
ಮಕ್ಕಳಿಗೆ ಶಾಲಾ ಹಂತದಲ್ಲಿಯೇ ದೇಶಪ್ರೇಮ, ದೇಶಾಭಿಮಾನವನ್ನು ಬೆಳಸಬೇಕೆಂಬ ಉದ್ದೇಶದಿಂದ ಶಿಕ್ಷಕರ ಮೀಲಾಪ್ ಮತ್ತು ಪುನಶ್ಚೇತನ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಶಿಕ್ಷಕರು ಈ ಶಿಬಿರದಲ್ಲಿ ತಿಳಿದುಕೊಂಡು ಎಲ್ಲಾ ವಿಚಾರಗಳನ್ನು ಶಾಲೆಯಲ್ಲಿ ನಿಮ್ಮ ವಿದ್ಯಾರ್ಥಿಗಳಲ್ಲಿ ಅಳವಡಿಸುವ ಕೆಲಸ ಮಾಡಬೇಕು ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ತಿಪ್ಪೇಸ್ವಾಮಿ ಹೇಳಿದರು.
ನಗರದ ಗುರುಭವನದಲ್ಲಿ ತಾಲ್ಲೂಕು ಭಾರತ ಸೇವಾದಳ ಸಮಿತಿ ಹಿರಿಯೂರು, ಇವರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ಮೀಲಾಪ್ ಮತ್ತು ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶಾಲಾ ಅವಧಿಯಲ್ಲಿಯೇ ವಿದ್ಯಾರ್ಥಿಗಳಲ್ಲಿ ದೇಶದ ಬಗ್ಗೆ ಗೌರವ, ಅಭಿಮಾನ ಬೆಳೆಯುವ ಮೂಲಕ ಮಕ್ಕಳನ್ನು ಉತ್ತಮ ಪ್ರಜೆಗಳಾಗಿ ನಿರ್ಮಾಣ ಮಾಡುವ ಗುರುತರವಾದ ಜವಾಬ್ದಾರಿ ಶಿಕ್ಷಕರ ಮೇಲಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯೋನ್ಮುಖರಾಗುವ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕಿದೆ ಎಂಬುದಾಗಿ ಹೇಳಿದರು.
ಈ ಶಿಬಿರದಲ್ಲಿ ಭಾರತ ಸೇವಾದಳದ ಅಧ್ಯಕ್ಷರಾದ ತಿಪ್ಪೇಸ್ವಾಮಿ, ತಾಲ್ಲೂಕು ನೌಕರರ ಸಂಘದ ಅಧ್ಯಕ್ಷರಾದ ಶಿವಕುಮಾರ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಅಶೋಕ್, ದೈಹಿಕ ಶಿಕ್ಷಣ ವಿಷಯ ಪರಿವೀಕ್ಷಕರಾದ ಮನೋಹರ್, ಭಾರತ್ ಸೇವಾದಳದ ಗೌರವಅಧ್ಯಕ್ಷರಾದ ಹೆಚ್.ಬಿ.ಯೋಗಾನಂದ್, ತಿಮ್ಮಯ್ಯಯಾದವ್, ಕಾರ್ಯದರ್ಶಿ ಬಾಲಾಜಿ, ಜಿಲ್ಲಾವಿಭಾಗ ಸಂಘಟಕರಾದ ಅಣ್ಣಯ್ಯ, ತಾಲ್ಲೂಕು ಗ್ರೇಡ್ 2 ಜೈ ಶಿ ಶಿ ಸಂಘದ ಅಧ್ಯಕ್ಷರಾದ ನಾಗರಾಜ್, ತಾಲ್ಲೂಕು ಅಧಿನಾಯಕ ಶಶಿಧರ್, ಇವರುಗಳು ಭಾಗವಹಿದ್ದರು. ವಿವಿಧ ಶಾಲೆಗಳಿಂದ ಶಿಕ್ಷಕರು ಆಗಮಿಸಿ ಮೀಲಾಪ್ ಶಿಬಿರವನ್ನು ಯಶಸ್ವಿ ಗೊಳಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page