ಹಿರಿಯೂರು :
ಮಕ್ಕಳಿಗೆ ಶಾಲಾ ಹಂತದಲ್ಲಿಯೇ ದೇಶಪ್ರೇಮ, ದೇಶಾಭಿಮಾನವನ್ನು ಬೆಳಸಬೇಕೆಂಬ ಉದ್ದೇಶದಿಂದ ಶಿಕ್ಷಕರ ಮೀಲಾಪ್ ಮತ್ತು ಪುನಶ್ಚೇತನ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಶಿಕ್ಷಕರು ಈ ಶಿಬಿರದಲ್ಲಿ ತಿಳಿದುಕೊಂಡು ಎಲ್ಲಾ ವಿಚಾರಗಳನ್ನು ಶಾಲೆಯಲ್ಲಿ ನಿಮ್ಮ ವಿದ್ಯಾರ್ಥಿಗಳಲ್ಲಿ ಅಳವಡಿಸುವ ಕೆಲಸ ಮಾಡಬೇಕು ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ತಿಪ್ಪೇಸ್ವಾಮಿ ಹೇಳಿದರು.
ನಗರದ ಗುರುಭವನದಲ್ಲಿ ತಾಲ್ಲೂಕು ಭಾರತ ಸೇವಾದಳ ಸಮಿತಿ ಹಿರಿಯೂರು, ಇವರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ಮೀಲಾಪ್ ಮತ್ತು ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶಾಲಾ ಅವಧಿಯಲ್ಲಿಯೇ ವಿದ್ಯಾರ್ಥಿಗಳಲ್ಲಿ ದೇಶದ ಬಗ್ಗೆ ಗೌರವ, ಅಭಿಮಾನ ಬೆಳೆಯುವ ಮೂಲಕ ಮಕ್ಕಳನ್ನು ಉತ್ತಮ ಪ್ರಜೆಗಳಾಗಿ ನಿರ್ಮಾಣ ಮಾಡುವ ಗುರುತರವಾದ ಜವಾಬ್ದಾರಿ ಶಿಕ್ಷಕರ ಮೇಲಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯೋನ್ಮುಖರಾಗುವ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕಿದೆ ಎಂಬುದಾಗಿ ಹೇಳಿದರು.
ಈ ಶಿಬಿರದಲ್ಲಿ ಭಾರತ ಸೇವಾದಳದ ಅಧ್ಯಕ್ಷರಾದ ತಿಪ್ಪೇಸ್ವಾಮಿ, ತಾಲ್ಲೂಕು ನೌಕರರ ಸಂಘದ ಅಧ್ಯಕ್ಷರಾದ ಶಿವಕುಮಾರ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಅಶೋಕ್, ದೈಹಿಕ ಶಿಕ್ಷಣ ವಿಷಯ ಪರಿವೀಕ್ಷಕರಾದ ಮನೋಹರ್, ಭಾರತ್ ಸೇವಾದಳದ ಗೌರವಅಧ್ಯಕ್ಷರಾದ ಹೆಚ್.ಬಿ.ಯೋಗಾನಂದ್, ತಿಮ್ಮಯ್ಯಯಾದವ್, ಕಾರ್ಯದರ್ಶಿ ಬಾಲಾಜಿ, ಜಿಲ್ಲಾವಿಭಾಗ ಸಂಘಟಕರಾದ ಅಣ್ಣಯ್ಯ, ತಾಲ್ಲೂಕು ಗ್ರೇಡ್ 2 ಜೈ ಶಿ ಶಿ ಸಂಘದ ಅಧ್ಯಕ್ಷರಾದ ನಾಗರಾಜ್, ತಾಲ್ಲೂಕು ಅಧಿನಾಯಕ ಶಶಿಧರ್, ಇವರುಗಳು ಭಾಗವಹಿದ್ದರು. ವಿವಿಧ ಶಾಲೆಗಳಿಂದ ಶಿಕ್ಷಕರು ಆಗಮಿಸಿ ಮೀಲಾಪ್ ಶಿಬಿರವನ್ನು ಯಶಸ್ವಿ ಗೊಳಿಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments