ಮಕ್ಕಳಿಗೆ ಸಕಾಲದಲ್ಲಿ ಮಾರಕ ರೋಗಗಳ ತಡೆಗಟ್ಟುವ ಲಸಿಕೆಗಳನ್ನು ಹಾಕಿಸುವ ಜೊತೆಗೆ ಪೂರಕ ಪೌಷ್ಠಿಕ ಆಹಾರವನ್ನು ತಪ್ಪದೆ ನೀಡಿ: ಡಾ.ವೈ.ರಮೇಶ್ ಬಾಬು

by | 02/11/23 | ಆರೋಗ್ಯ


ಬಳ್ಳಾರಿ,ನ.02
ಮಗುವಿನ ಬಾಲ್ಯದಲ್ಲಿ ಕಾಡುವ 12 ಮಾರಕ ರೋಗಗಳ ವಿರುದ್ಧ ನೀಡುವ ಲಸಿಕೆಗಳನ್ನು ಯಾವುದೇ ಕಾರಣಕ್ಕೂ ತಪ್ಪಿಸದೆ ಮಗುವಿಗೆ ಹಾಕಿಸುವ ಮೂಲಕ ಮಗುವಿನ ಸದೃಡ ಆರೋಗ್ಯಕ್ಕಾಗಿ ಪಾಲಕರು ಕೈಜೋಡಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ತಿಳಿಸಿದರು.
ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪರಿಶೀಲಿಸಿ ತಾಯಂದಿರಿಗೆ ಜಾಗೃತಿಗಾಗಿ ಹಮ್ಮಿಕೊಂಡ ಗ್ರಾಮ ಆರೋಗ್ಯ ಮತ್ತು ಪೌಷ್ಟಿಕ ಆಹಾರ ನೈರ್ಮಲ್ಯ ಸಮಿತಿಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಮಗು ಜನಿಸಿದ ಅರ್ಧ ಗಂಟೆ ಒಳಗೆ ತಾಯಿಯ ಎದೆ ಹಾಲು ಉಣಿಸಿ ಹಾಗೂ ಮುಂದಿನ ಆರು ತಿಂಗಳವರೆಗೆ ಕೇವಲ ತಾಯಿ ಎದೆಹಾಲನ್ನು ಮಾತ್ರ ನೀಡುವ ಮೂಲಕ ಮಗುವಿಗೆ ಯಾವುದೇ ಸೋಂಕು ಬರದಂತೆ ಹಾಗೂ ತಾಯಿಯ ಬಾಂಧವ್ಯ ಬೆಸಿಗೆಯಾಗಲಿರುವ ಅವಕಾಶವನ್ನು ಯಾರು ಕಳೆದುಕೊಳ್ಳಬಾರದು ಎಂದು ತಿಳಿಸಿದರು.
ಆರು ತಿಂಗಳ ನಂತರ ಮನೆ ಮಟ್ಟದಲ್ಲಿಯೇ ದೊರಕುವ ಪೌಷ್ಟಿಕ ಅಂಶವುಳ್ಳ ಕಾಳುಗಳನ್ನು ಸಮ ಪ್ರಮಾಣದಲ್ಲಿ ಬೆರೆಸಿ ಸಿದ್ದಪಡಿಸಿ ದ್ರವರೂಪದಲ್ಲಿ ಪೂರಕ ಪೌಷ್ಟಿಕ ಆಹಾರವನ್ನು ನೀಡುವ ಮೂಲಕ ಮಗುವಿಗೆ ಸದೃಢ ಆರೋಗ್ಯಕ್ಕೆ ಕುಟುಂಬದ ಸದಸ್ಯರು ಬೆಂಬಲವಾಗಿ ನಿಲ್ಲಬೇಕೆಂದು ಎಂದು ಹೇಳಿದರು.
ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಸ್ಥಳೀಯವಾಗಿ ದೊರಕುವ ಹಸಿರು ತಪ್ಪಲು ಪಲ್ಯಗಳನ್ನು, ಕಾಳುಗಳನ್ನು ಮೊಳಕೆ ಬರೆಸಿ ಕೊಡುವ ಮೂಲಕ ಮತ್ತು ಆಹಾರದಲ್ಲಿ ಬೆಲ್ಲದ ಅಂಶವುಳ್ಳ ಪದಾರ್ಥ ಹಾಗೂ ಸ್ಥಳೀಯವಾಗಿ ದೊರಕುವ ಪಾಲಕ್ ಮೆಂತ್ಯೆ, ನುಗ್ಗೆ ಪುಂಡಿ ಪಲ್ಯ ಇತರ ಹಸಿರು ತಪ್ಪಲು ಪದಾರ್ಥಗಳನ್ನು ಮತ್ತು ಸ್ಥಳೀಯವಾಗಿ ದೊರಕುವ ಹಣ್ಣುಗಳನ್ನು ಕೊಡುವ ಮೂಲಕ ರಕ್ತದಲ್ಲಿ ಕಬ್ಬಿಣಾಂಶ ಕಡಿಮೆಯಾಗದಂತೆ ನೋಡಿಕೊಳ್ಳುವದರಿಂದ ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಚಿಂತಿಸುವ ಪ್ರಮೇಯ ಬರುವುದಿಲ್ಲ, ಅಲ್ಲದೆ ಮೂಢನಂಬಿಕೆಗಳು ಮತ್ತು ನಮ್ಮ ರೂಡಿಗತವಾದ ಸಂಪ್ರದಾಯಗಳಿಗೂ ಮಗುವಿಗೆ ಹಾಕುವ ಲಸಿಕೆಗಳಿಗೆ ಅಡ್ಡಿಯಾಗದಂತೆ ದಯವಿಟ್ಟು ಲಸಿಕೆಗಳನ್ನು ಹಾಕಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಕ್ಕೆ ಸಹಕರಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಶರಣಬಸವ, ವೀರೇಶ್, ಸಮುದಾಯ ಆರೋಗ್ಯ ಅಧಿಕಾರಿ ಭರತ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಂಕ್ರಮ್ಮ ಆಶಾ ಸುಗಮಕಾರರು ಪರಿಮಳ ಸೇರಿದಂತೆ ಗ್ರಾಮದ ಆಶಾ, ಅಂಗನವಾಡಿ ಕಾರ್ಯಕರ್ತೆರು ಹಾಗೂ ತಾಯಂದಿರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page