ಮೊಳಕಾಲ್ಮೂರು ಜನಧ್ಳವನಿ ವಾರ್ಕಾತೆ ಫೆ.8. ಮೊಳಕಾಲ್ಮೂರು ಪಟ್ಟಣದ ಪರಿಶಿಷ್ಟ ಪಂಗಡ ಬಾಲಕರ ಹಾಸ್ಟೆಲ್ ವಾರ್ಡನ್ ಕೇಶವಮೂರ್ತಿ ರವರನ್ನು ಕೂಡಲೇ ಅಮಾನತು ಗೊಳಿಸಿ ಸಿಇಒ ಆದೇಶ ಮಾಡಿದ್ದಾರೆ.
ಮೂರು ಲಕ್ಷಕ್ಕಿಂತ ಹೆಚ್ಚಿನ ಹಣವನ್ನು ದುರುಪಯೋಗಪಡಿಸಿಕೊಂಡ ಆಧಾರದ ಮೇಲೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿವಾಕರ್ ಅವರು ಮೊಳಕಾಲ್ಮೂರು ತಾಲೂಕಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯ ನರೇಗಾ ದಿವಸ್ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಮೊಳಕಾಲ್ಮೂರು ಪಟ್ಟಣದ ಪರಿಶಿಷ್ಟ ಪಂಗಡದ ಹಾಸ್ಟೆಲಿಗೆ ಭೇಟಿ ನೀಡಿದಾಗ
ದಾಸ್ತಾನು ಮತ್ತು ವಿತರಣೆ ದಾಖಲಾತಿಗಳನ್ನ ಪರಿಶೀಲಿಸಿದಾಗ, ಹಾಸ್ಟೆಲಿನ ವಾರ್ಡನ್ ಕೇಶವಮೂರ್ತಿ ರವರು ದಾಸ್ತಾನಿನಲ್ಲಿ 21 ಕ್ವಿಂಟಲ್ ಅಕ್ಕಿಯಿದೆ ಎಂದು ನಮೂದಿಸಿದ್ದು, ಸದರಿ ದಾಸ್ತಾನು ಕೊಠಡಿಯಲ್ಲಿ ಪರಿಶೀಲಿಸಿದಾಗ ಒಂದು ಕ್ವಿಂಟಲ್ ಮಾತ್ರ ಅಕ್ಕಿ ಕಂಡುಬರುತ್ತದೆ.
ವಿಚಾರಿಸಿದಾಗ ಹಾಜರಿದ್ದ ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮೊಳಕಾಲ್ಮೂರು ರವರು ನೆನ್ನೆ ದಾಸ್ತಾನಿನಲ್ಲಿ ಅಕ್ಕಿ ಇತ್ತು ಹಾಗಾಗಿ ಸಹಿ ಮಾಡಿರುತ್ತೇನೆ ಆದರೆ ಇಂದು ಅಕ್ಕಿ ಇಲ್ಲ ಎಂದು ತಿಳಿಸಿದರು.
ಈ ಹಿಂದೆ ST ಹಾಸ್ಟೆಲ್ ವಾರ್ಡನ್ ಆಗಿದ್ದ ಇದೇ ಕೇಶವಮೂರ್ತಿ ಪಟ್ಟಣದ ಕನಕ ಪತ್ತಿನ ಸಹಕಾರ ಸಂಘಕ್ಕೆ 3 ಲಕ್ಷ ಕಿಂತ ಮೇಲ್ಪಟ್ಟು ಹಣವನ್ನು ಜಮಾ ಮಾಡಿ, ಸಂಬಂಧಿಸಿದ ಸರಬರಾಜುದಾರರಿಗೆ ದಾಸ್ತಾನು ಹಣ ಜಮಾ ಮಾಡದೆ, ತಾನೇ ಸ್ವತಃ ಬಿಡಿಸಿಕೊಂಡಿರುವ ಬಗ್ಗೆ ದಾಖಲಾತಿಗಳು ಲಭ್ಯವಾಗಿರುತ್ತವೆ.
ಒಟ್ಟಾರೆ ಪರಿಶೀಲಿಸಿದಾಗ 20 ಕ್ವಿಂಟಲ್ ಅಕ್ಕಿ ಮತ್ತು ಹಣ ದುರುಪಯೋಗವಾಗಿರುವ ಬಗ್ಗೆ ಮೇಲ್ನೋಟಕ್ಕೆ ಕಂಡು ಬಂದಿದ್ದು.
ಕೇಶವಮೂರ್ತಿ,ವಾರ್ಡನ್, ಪರಿಶಿಷ್ಟ ಪಂಗಡ ಬಾಲಕರ ವಸತಿ ನಿಲಯ ಮೊಳಕಾಲ್ಮೂರು ಪಟ್ಟಣ, ರವರು ಸರ್ಕಾರದ ಅನುದಾನ ದುರ್ಬಳಕೆ ಹಾಗೂ ಕರ್ತವ್ಯ ಲೋಪ ಎಸಗಿರುವುದು ಕಂಡುಬಂದಿದ್ದು, ಇವರನ್ನು ತಕ್ಷಣದಿಂದಲೇ ಅಮಾನತು ಮಾಡಿ ಸಿಇಒ ರವರು ಆದೇಶಿಸಿದ್ದಾರೆ.
0 Comments