ಚಳ್ಳಕೆರೆ: ಮಡಿವಾಳ ಸಮುದಾಯವು ಕಾಯಕ ನಿಷ್ಠೆ ತೋರುವ ಸಮಾಜವಾಗಿದ್ದು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದಾಗ ಮಾತ್ರ ಮಡಿವಾಳ ಸಮಾಜವು ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ತಹಶೀಲ್ದಾರ್ ರೆಹಾನ್ ಪಾಷ ಅಭಿಪ್ರಾಯ ಪಟ್ಟರು
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡುತ್ತಾ 12ನೇ ಶತಮಾನದಲ್ಲಿ ಬಸವಣ್ಣನವರ ಜೊತೆ ಸೇರಿ ಅನುಭವ ಮಂಟಪದಲ್ಲಿ ಮಹಿಳೆಯರ ಏಳಿಗೆಗಾಗಿ ಹಾಗೂ ವಚನ ಸಾಹಿತ್ಯ ಸೇರಿದಂತೆ ಹಲವು ಮಹತ್ವದ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜಕ್ಕೆ ಉತ್ತಮ ಸಂದೇಶಗಳನ್ನು ಸಾರಿದಂತಹ ಮಹಾನ್ ಮಾನವತಾವಾದಿಯಾಗಿದ್ದರು ಮಡಿವಾಳ ಸಮುದಾಯವು ತಾನು ಮೈಲಿಗೆಯಾಗಿ ಬೇರೆಯವರ ಮನಸ್ಸು ಮತ್ತು ವಸ್ತ್ರವನ್ನು ಶುಭ್ರಗೊಳಿಸುವ ಕಾಯಕದಲ್ಲಿ ತೊಡಗಿದ್ದಾರೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮಡಿವಾಳ ಸಮಾಜವು ಪ್ರಗತಿ ಸಾಧಿಸಬೇಕಿದೆ ಎಂದು ತಿಳಿಸಿದರು.
ಮಡಿವಾಳ ಸಮಾಜದ ಗೌರವಧ್ಯಕ್ಷ ಎನ್ ಮಂಜುನಾಥ ಮಾತನಾಡಿ ನಮ್ಮ ಸಮುದಾಯಕ್ಕೆ ಎಸ್ ಸಿ ಮೀಸಲಾತಿ ನೀಡಬೇಕೆಂದು ಹಲವು ವರ್ಷಗಳಿಂದ ಬೇಡಿಕೆ ಇದ್ದು ಈಗಾಗಲೇ ಅನ್ನಪೂರ್ಣಮ್ಮ ವರದಿ ಸರ್ಕಾರದ ಕೈ ಸೇರಿದ್ದರು ನಮ್ಮ ಭಾವನೆಗಳಿಗೆ ಬೆಲೆ ಕೊಡದೆ ಆಳುವ ಸರ್ಕಾರಗಳು ಕೇವಲ ನಮ್ಮ ಮಡಿವಾಳ ಸಮುದಾಯವನ್ನು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬಳಸಿಕೊಂಡು ಮೂಲೆಗುಂಪು ಮಾಡುತ್ತಿದ್ದಾರೆ ಇದರಿಂದಾಗಿ ರಾಜಕೀಯವಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಸಮಾಜವು ಪ್ರಗತಿ ಹೊಂದಲು ಸಾಧ್ಯವಾಗುತ್ತಿಲ್ಲ ಇನ್ನಾದರೂ ನಮ್ಮ ಕೂಗನ್ನು ಕೇಳಿಸಿಕೊಂಡು ನಮಗೆ ಸಿಗಬೇಕಾದ ಮೀಸಲಾತಿಯನ್ನು ನೀಡಬೇಕು ನಮಗೆ ಮೀಸಲಾತಿ ದೊರೆಯಬೇಕಾದರೆ ನಮ್ಮ ಸಮುದಾಯವು ಒಗ್ಗಟ್ಟಿನಿಂದ ಹೋರಾಡಿದಾಗ ಮಾತ್ರ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಸಮಾಜದ ಅಧ್ಯಕ್ಷ ನಾಗರಾಜ್ ಮಾತನಾಡಿ ಮಡಿವಾಳ ಸಮಾಜದ ಮುಖಂಡರ ಬೇಜವಾಬ್ದಾರಿತನದಿಂದ ತಾಲೂಕಿನ ಮಡಿವಾಳ ಸಮಾಜಕ್ಕೆ ಯಾವುದೇ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ತಾಲೂಕಿನಲ್ಲಿ ಎಲ್ಲ ಸಮುದಾಯಗಳಿಗೂ ವಿದ್ಯಾರ್ಥಿ ನಿಲಯ ಸಮುದಾಯ ಭವನಗಳು ಇದ್ದರು ನಮ್ಮ ಸಮುದಾಯಕ್ಕೆ ಇಂತಹ ಯಾವುದೇ ಸೌಲಭ್ಯಗಳು ದೊರೆಯಲು ಸಾಧ್ಯವಾಗಿಲ್ಲ ತಾಲೂಕು ಆಡಳಿತದ ಅಧಿಕಾರಿಗಳ ಗಮನ ಸೆಳೆಯುವಲ್ಲಿ ನಾವು ವಿಫಲವಾಗಿದ್ದೇವೆ ಮುಂದಿನ ದಿನಗಳಲ್ಲಿ ಶಾಸಕರ ಮೂಲಕ ನಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಿದೆ ಮಾರ್ಚ್ 6ರಂದು ತಾಲೂಕಿನಲ್ಲಿ ಮಡಿವಾಳ ಸಮಾಜದ ಸಮ್ಮೇಳನವನ್ನು ಅದ್ದೂರಿಯಾಗಿ ಹಮ್ಮಿಕೊಂಡಿದ್ದು ಗ್ರಾಮೀಣ ಹಾಗೂ ನಗರ ಪ್ರದೇಶದ ಮಡಿವಾಳ ಬಾಂಧವರು ಭಾಗವಹಿಸಿ ಶಾಸಕರ ಮೂಲಕ ಸರ್ಕಾರಕ್ಕೆ ತಮ್ಮ ಹಕ್ಕೋತಾಯಗಳನ್ನು ಮಂಡಿಸುವ ಕೆಲಸ ಮಾಡೋಣ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಡಿವಾಳ ಮಾಚಿದೇವರ ಕುರಿತು ಸಂಜೀವಿನಿ ಲ್ಯಾಬ್ ಎಂಎನ್ ಮೃತ್ಯುಂಜಯ ಉಪನ್ಯಾಸ ನೀಡಿದರು
ಈ ಸಂದರ್ಭದಲ್ಲಿ ಮಾಜಿ ನಗರಸಭೆ ಸದಸ್ಯ ರವಿಕುಮಾರ್ ಕುಶಾಲಪ್ಪ ವಿಜಯ್ ಕುಮಾರ್ ಆರ್ಟ್ಸ ನ್ ಪ್ರಕಾಶ್ ಎನ್ ರಾಜಣ್ಣ ಮೂರ್ತಿ ನಾಗರಾಜ್ ಬಾಲಾಜಿ ಚಂದ್ರಣ್ಣ ಶೈಲಜಾ ಮಂಜುನಾಥ್ ಹೆಚ್ ರಂಗಸ್ವಾಮಿ ಎಂ ರವಿ ಎಂ ವೀರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
0 Comments