ಮತಗಟ್ಟೆ ಸಿದ್ದತೆ ಪರಿಶೀಲಿಸಿದ ಜಿಲ್ಲಾಧಿಕಾರಿ

by | 29/04/23 | ಚುನಾವಣೆ-2023

ಚಿತ್ರದುರ್ಗ (ಜನಧ್ವನಿ ವಾರ್ತೆ)ಏ.28:
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಗುರುವಾರ ಚಿತ್ರದುರ್ಗ ನಗರದಲ್ಲಿ ಸ್ಥಾಪಿಸಲಾಗುತ್ತಿರುವ ವಿಶೇಷ ಮತಗಟ್ಟೆಗಳಿಗೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.
ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಪ್ರತಿಯೊಂದು ಮತಗಟ್ಟೆಗಳಲ್ಲಿ ನಿರ್ಮಿಸಲಾಗುತ್ತಿದೆ. ಇದರ ಜೊತೆಗೆ ಮಹಿಳಾ ಮತದಾರರು, ವಿಕಲಚೇತನರು, ಯುವ ಮತದಾರರನ್ನು ಮತದಾನ ಮಾಡುವಂತೆ ಪ್ರೋತ್ಸಾಹಿಸಲು ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಎರಡು ಸಖಿ, ತಲಾ ಒಂದು ವಿಕಲಚೇತನ ಹಾಗೂ ಯುವ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಇದರೊಂದಿಗೆ ಕೆಳಗೋಟೆಯ ಸರಸ್ವತಿ ಕಾನೂನು ಮಹಾವಿದ್ಯಾಲಯದ ಮತಗಟ್ಟೆ ಸಂಖ್ಯೆ 222ರಲ್ಲಿ ಐತಿಹಾಸಿಕ ಪರಂಪರೆ ಬಿಂಬಿಸುವ ಮತಗಟ್ಟೆಯನ್ನೂ ಸಹ ಸ್ಥಾಪಿಸಲಾಗುತ್ತಿದೆ. ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಒಟ್ಟು 125 ಮತಗಟ್ಟೆಗಳಿವೆ.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಸೆಂಟ್ ಜೋಸೆಫ್ ಕಾನ್ವೆಂಟ್ ಮತಗಟ್ಟೆ ಸಂಖ್ಯೆ 215 ಹಾಗೂ ಜೆ.ಜೆ.ಹಟ್ಟಿ ಹೊರಪೇಟೆ ಉರ್ದು ಸ್ಕೂಲ್ ಮತಗಟ್ಟೆ ಸಂಖ್ಯೆ 168 ರಲ್ಲಿ ಸ್ಥಾಪಿಸಲಾಗಿರುವ ಸಖಿ (ಪಿಂಕ್) ಮತಗಟ್ಟೆ, ಹಳೆಯ ಮಾಧ್ಯಮಿಕ ಶಾಲೆ ಮತಗಟ್ಟೆ ಸಂಖ್ಯೆ 117ರ ಯುವ ಮತಗಟ್ಟೆ, ವಿ.ಪಿ.ಬಡಾವಣೆ ಮಾಡಲ್ ಸೈನಿಕ್ ಶಾಲೆ ಮತಗಟ್ಟೆ ಸಂಖ್ಯೆ 197 ವಿಕಲಚೇತನರ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಕಲಚೇತನರಿಗೆ ಅನುಕೂಲವಾಗುವಂತೆ ಹೆಚ್ಚಿನ ಸೌಕರ್ಯಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ಶ್ರೀನಿವಾಸ ಸೇರಿದಂತೆ ಮತ್ತಿತರರು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page