ಚಳ್ಳಕೆರೆ: ಮತದಾನದಿಂದ ಯಾರು ದೂರ
ಉಳಿಯಬಾರದು. ಮತದಾನ ನಮ್ಮೆಲ್ಲರ ಹಕ್ಕು, ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಲೂಕಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ್ ಹೇಳಿದರು.
ಅವರು ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಚಿತ್ರದುರ್ಗ ತಾಲೂಕಾ ಆಡಳಿತ ತಾಲೂಕಾ ಪಂಚಾಯತ್ ತಾಲೂಕಾ ಸ್ವೀಪ್ ಸಮಿತಿ ಚಳ್ಳಕೆರೆ ಕಾರ್ಯಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 01 ರಂದು ಬೈಕ್ ರ್ಯಾಲಿ ನಡೆಸುವ ಮೂಲಕ ಸಾರ್ವತ್ರಿಕ ಲೋಕಸಭಾ ಚುನಾವಣೆ- 2024ರ ಪ್ರಯುಕ್ತ ಮತದಾನ ಜಾಗೃತಿ ಜಾಥಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.
ಈ ಬಾರಿ ಶೇಕಡಾವಾರು ಮತದಾನದ ಪ್ರಮಾಣ ಹೆಚ್ಚಿಸಲು ಮತದಾರರಲ್ಲಿ ಜಾಗೃತಿ ಮೂಡಿಸಲು ಬೈಕ್ ರ್ಯಾಲಿ ಜಾಥಾ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವವನ್ನು ಬಲಗೊಳಿಸುವ ಶಕ್ತಿ ಮತದಾರರಿಗಿದೆ. ಎಲ್ಲ ಮತದಾರರು ನಮ್ಮ ಸಂವಿಧಾನ ಕೊಟ್ಟಿರುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸುವ ಮೂಲಕ ಸುಭದ್ರವಾದ ದೇಶ ಕಟ್ಟಲು ಸಹಕರಿಸಿ ಎಂದು ಮನವಿ ಮಾಡಿದರು.
ನಗರದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಹಮ್ಮಿಕೊಂಡಿದ್ದ ಬೈಕ್ ಜಾಥಾವು ವಾಲ್ಮೀಕಿ ವೃತ್ತದಿಂದ ಪ್ರಾರಂಭವಾಗಿ ಪಟ್ಟಣದ ಅಂಬೇಡ್ಕರ್ ವೃತ್ತ, ನೆಹರು ವೃತ್ತ, ತಾಲೂಕು ಪಂಚಾಯಿತಿ ಜಮಾಯಿಸಿ ಜಾಥಾವನ್ನು ಯಶಸ್ವಿಯಾಗಿ ನಡೆಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು. ಸಿಬ್ಬಂದಿ ವರ್ಗದವರು. ಪೌರ ಕಾರ್ಮಿಕರೆಲ್ಲರೂ ಸೇರಿ ಕಡ್ಡಾಯ ಮತದಾನ ಭಿತ್ತಿ ಪತ್ರ ಪ್ರದರ್ಶಿಸಿದರು.
0 Comments