ಚಿತ್ರದುರ್ಗ ಜನಧ್ವನಿ ವಾರ್ತೆ ಏ 24
ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಗ್ರಾಮದಲ್ಲಿನ ಮದ್ಯದಂಗಡಿಯನ್ನು ತೆರವುಗೊಳಿಸುವಂತೆ ಆಗ್ರಹಿಸಿ ಮಹಿಳೆಯರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಮಹಿಳೆಯರು ಮನವಿ ನೀಡಿರುವುದರಿಂದ ಅಕ್ರಮ ಮದ್ಯಕ್ಕೆ ಕಡಿವಾಣ ಹಾಕಿದ್ದಾರೆ, ಆಸ್ಪತ್ರೆ, ದೇವಸ್ಥಾನಗಳ ಸಮೀಪ ಪರವಾನಿಗೆ ಪಡೆದ ಬಾರ್ ಅಂಗಡಿಯಿAದ ಈಗಾಲೇ ಸಾಕಷ್ಟು ಜನರು ಕುಡಿತಕ್ಕೆ ದಾಸರಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಪ್ರಾಥಮಿಕ ಆರೋಗ್ಯ,ಗ್ರಾಪಂ ಕಚೇರಿ,ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಆವರಣದಲ್ಲಿ ಮದ್ಯದ ಕುಡಿದು ಬಾಟಲಿಗಳನ್ನು ಒಡೆದು ಚೂರು ಚೂರು ಮಾಡಿದ್ದಾರೆ ಇದರಿಂದ ಅಪಾಯವಿದೆ.
![](https://janadhwani.in/wp-content/uploads/2023/04/IMG-20230424-WA0571-1024x576.jpg)
ಅಪ್ರಪ್ತರು ಮದ್ಯವ್ಯಸನಿಗಳಾಗಿದ್ದಾರೆ. ಮಹಿಳೆಯರು ಕೂಲಿ ಮಾಡಿದ ಹಣವೂ ಸಹ ಬಿಡದೆ ಕಿತ್ತುಕೊಂಡು ಹೋಗಿ ಜಗಳ ಮಾಡುತ್ತಾರೆ ಗ್ರಾಮದಲ್ಲಿ ಬಾರ್ ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮದ ವಿವಿಧ ಮಹಿಳಾ ಸ್ವಸಹಾಯಗಳ ಸಂಘದ ಸದಸ್ಯರು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
0 Comments