ಮರುಬಳಕೆ ಮಾಡಬಹುದಾದ ಮಾನವರಹಿತ ಉಡಾವಣಾ ರಾಕೆಟ್ ಯಶಸ್ವಿ ಹಾರಾಟ ಮತ್ತು ಸ್ವಾಯುತ್ತವಾಗಿ ನೆಲೆ ಕಂಡುಕೊಳ್ಳುವ ಸಾಮರ್ಥ್ಯ ಹೊಂದಿರುವ ಬಾಹ್ಯಕಾಶ ವಾಹನದ ಪ್ರಯೋಗವನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು.

by | 03/04/23 | ವಿಜ್ಞಾನ ತಂತ್ರಜ್ಞಾನ


ಜನಧ್ವನಿ ವಾರ್ತೆ ಏ.2
ಮರುಬಳಕೆ ಮಾಡಬಹುದಾದ ಮಾನವರಹಿತ ಉಡಾವಣಾ ರಾಕೆಟ್ ಯಶಸ್ವಿ ಹಾರಾಟ ಮತ್ತು ಸ್ವಾಯುತ್ತವಾಗಿ ನೆಲೆ ಕಂಡುಕೊಳ್ಳುವ ಸಾಮರ್ಥ್ಯ ಹೊಂದಿರುವ ಬಾಹ್ಯಕಾಶ ವಾಹನದ ಪ್ರಯೋಗವನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು.
ತಾಲೂಕಿನ ನಾಯಕನಹಟ್ಟಿ ಸಮೀಪದ ಕುದಾಪುರ ಡಿಆರ್‌ಡಿಒ ವಾಯುನೆಲೆಯಲ್ಲಿ ಭಾನುವಾರ ಬೆಳಿಗ್ಗೆ ಇಸ್ರೋ, ಡಿಆರ್‌ಡಿಒ, ಭಾರತೀಯ ವಾಯುನೆಲೆ, ಸೆಮಿಲ್ಯಾಕ್, ಎಡಿಇ, ಎಡಿಆರ್‌ಡಿಇ ಸಹಯೋಗದಲ್ಲಿ ನಡೆಸಿದ ಮಾನವರಹಿತ ಸ್ವಾಯುತ್ತ ನೆಲೆಕಂಡುಕೊಳ್ಳುವ ರಾಕೆಟ್ ಹಾರಾಟವು ಯಶಸ್ವಿಯಾಯಿತು.
ಭಾರತ ದೇಶದಲ್ಲಿ ಇಸ್ರೋ ಸಂಸ್ಥೆಯು ಹಲವಾರು ಯಶಸ್ವಿ ರಾಕೆಟ್‌ಗಳ ಉಡಾವಣೆಯ ಮೂಲಕ ಬಾಹ್ಯಾಕಾಶ ಕ್ಷೇತ್ರಕ್ಕೆ ವಿಶೇಷವಾದ ಕೊಡುಗೆಯನ್ನು ನೀಡಿದೆ. ಹಾಗೇ ಬೇರೆ ದೇಶಗಳಿಗೆ ಹೋಲಿಕೆ ಮಾಡಿದರೆ ಅತ್ಯಂತ ಕಡಿಮೆ ವೆಚ್ಚದಲ್ಲಿ ದೊಡ್ಡದೊಡ್ಡ ಯೋಜನೆಗಳನ್ನು ಯಶಸ್ವಿಗೊಳಿಸಿದ ಹೆಗ್ಗಳಿಕೆ ಇಸ್ರೋ ಸಂಸ್ಥೆಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಕಡಿಮೆ ವೆಚ್ಚದಲ್ಲಿ ಬಾಹ್ಯಕಾಶದ ಯೋಜನೆಗಳನ್ನು ಕಾರ್ಯಗತಗೊಳಿಸಬೇಕು ಎಂಬ ಉದ್ದೇಶದಿಂದ 2016ರ ಮೇ ತಿಂಗಳಲ್ಲಿ ಸ್ವತಂತ್ರö್ಯವಾಗಿ ನೆಲೆ ಕಂಡುಕೊಳ್ಳುವ ಸಾಮರ್ಥ್ಯ ಹೊಂದಿರುವ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನದ (ಆರ್‌ಎಲ್‌ವಿ ಎಲ್‌ಇಎಕ್ಸ್) ಹಾರಾಟ ಮತ್ತು ಇಳಿಯುವಿಕೆಯ ಪರೀಕ್ಷೆಯನ್ನು ಬಂಗಾಳಕೊಲ್ಲಿಯ ಸಮುದ್ರದ ಮೇಲಿನ ಕಾಲ್ಪನಿಕ ರನ್‌ವೇಯಲ್ಲಿ ಪ್ರಯೋಗಿಸಲಾಗಿತ್ತು. ಅಲ್ಲಿ ನಿಖರವಾಗಿ ರನ್‌ವೇಯಲ್ಲಿ ಇಳಿಯದೇ ಇರುವುದರಿಂದ ಇನ್ನೂ ಹೆಚ್ಚಿನ ಅಧ್ಯಯನ, ಪ್ರಯೋಗ ಮತ್ತು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಹಲವಾರು ಬಾರಿ ಪರೀಕ್ಷಾರ್ಥ ಹಾರಾಟ ನಡೆಸಲಾಗಿತ್ತು.

ಡಿಆರ್‌ಡಿಒ ಪರೀಕ್ಷಾರ್ಥ ವಾಯುನೆಲೆಯಲ್ಲಿ ಭಾನುವಾರ ಬೆಳಿಗ್ಗೆ 7.11ಕ್ಕೆ ಭಾರತೀಯ ವಾಯುಪಡೆಯ ಚಿನೂಕ್ ಹೆಲಿಕಾಪ್ಟರ್ ಮೊದಲು ಮೇಲೆ ಹಾರಿ ನಂತರ ಅದರ ಕೆಳಗಡೆ ಮರುಬಳಕೆ ಮಾಡಬಹುದಾದ ಉಡಾವಣಾ ವಿಮಾನಕ್ಕೆ (ಆರ್‌ಎಲ್‌ವಿ ಎಲ್‌ಇಎಕ್ಸ್) ಹಗ್ಗ ಕಟ್ಟಿಕೊಂಡು ಸುಮಾರು ೪.೫ಕಿ.ಮೀ ಎತ್ತರಕ್ಕೆ ಹಾರಿತು. ಇದೇವೇಳೆ ಮರುಬಳಕೆ ಮಾಡಬಹುದಾದ ಉಡಾವಣಾ ವಿಮಾನವು(ಆರ್‌ಎಲ್‌ವಿ-ಎಲ್‌ಇಎಕ್ಸ್) ಮಿಷನ್ ಮ್ಯಾನೇಜ್‌ಮೆಂಟ್ ಕಂಪ್ಯೂಟರ್ ಆದೇಶದ ಮೇರೆಗೆ ಪೂರ್ವನಿರ್ಧರಿತ ಪಿಲ್‌ಬಾಕ್ಸ್ ಸೂಚನೆಗಳನ್ನು ಸ್ವಯಂಚಾಲಿತವಾಗಿ ಸಾಧಿಸಿದ ನಂತರ, ವಿಮಾನವನ್ನು ಗಾಳಿಯಲ್ಲಿ ಭೂಮಿಯಿಂದ4.6 ಕಿ.ಮೀ.ಎತ್ತರದಲ್ಲಿ ಹೆಲಿಕಾಪ್ಟರ್ ಬಿಡುಗಡೆ ಮಾಡಿತು. ನಂತರ ವಿಮಾನವು ಸ್ಥಾನ, ವೇಗ, ಎತ್ತರ ಇತ್ಯಾದಿ ಷರತ್ತುಗಳನ್ನು ಒಳಗೊಂಡ 10 ಸೂಚನೆಗಳನ್ನು ಸ್ವತಂತ್ರö್ಯವಾಗಿ ಪಾಲಿಸಿಕೊಂಡು ನಂತರ ಇಂಟಿಗ್ರೇಟೆಡ್ ನ್ಯಾವಿಗೇಷನ್, ಗೈಡೆನ್ಸ್ & ಕಂಟ್ರೋಲ್ ಸಿಸ್ಟಮ್ ಅನ್ನು ಬಳಸಿಕೊಂಡು ವ್ಯವಸ್ಥಿತವಾಗಿ ಲ್ಯಾಂಡಿAಗ್ ತಂತ್ರಗಳನ್ನು ನಿರ್ವಹಿಸಿ ಡಿಆರ್‌ಡಿಒ ಪರೀಕ್ಷಾರ್ಥ ವಾಯುನೆಲೆಯಲ್ಲಿ ಬೆಳಿಗ್ಗೆ 7.40ಕ್ಕೆ ಸುರಕ್ಷಿತವಾಗಿ ಮತ್ತು ಸ್ವತಂತ್ರವಾಗಿ ನೆಲೆಯೂರಿತು. ಅದರಲ್ಲೂ ವಿಶ್ವದಲ್ಲಿಯೇ ಮೊದಲ ಬಾರಿಗೆ, ರೆಕ್ಕೆಯ ದೇಹವನ್ನು ಹೆಲಿಕಾಪ್ಟರ್ ಮೂಲಕ 4.5ಕಿಮೀ ಎತ್ತರಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಂದ ರನ್‌ವೇಯಲ್ಲಿ ಸ್ವತಂತ್ರವಾಗಿ ನೆಲೆಕಂಡುಕೊಳ್ಳಲು ಬಿಡುಗಡೆ ಮಾಡಲಾಯಿತು. ಆಗ ವಿಮಾನವು ಗಂಟೆಗೆ ೩೫೦ಕಿ.ಮೀ ಹೆಚ್ಚಿನ ವೇಗದಲ್ಲಿ ಸುರಕ್ಷಿತವಾಗಿ ಇಳಿಯಿತು. ಇದರೊಂದಿಗೆ ಮಾನವರಹಿತ ಬಾಹ್ಯಾಕಾಶ ವಾಹನದ ಸ್ವಾಯುತ್ತ ಲ್ಯಾಂಡಿAಗ್ ಅನ್ನು ಇಸ್ರೋ ಯಶಸ್ವಿಯಾಗಿ ಸಾಧಿಸಿತು.
ಆ ಮೂಲಕ ಬಾಹ್ಯಕಾಶಕ್ಕೆ ತೆರಳಿದ ಮಾನವರಹಿತ ವಿಮಾನವು ಹೆಚ್ಚಿನ ವೇಗದೊಂದಿಗೆ ಅದೇ ಮಾರ್ಗದಲ್ಲಿ ನಿಖರವಾಗಿ ಹಿಂತಿರುಗಿ ನೆಲೆಕಂಡುಕೊಳ್ಳುವುದು ಮತ್ತು ನೆಲೆಕಂಡುಕೊಳ್ಳುವಾಗ ಭೂಮಿಗೆ ಸಂಬAಧಿತ ವೇಗ ಸೇರಿದಂತೆ ಬಾಹ್ಯಾಕಾಶ ವಾಹನವು ಅದರ ಹಿಂತಿರುಗುವ ಹಾದಿಯಲ್ಲಿ ಅನುಭವಿಸಬಹುದಾದ ಸಮಸ್ಯೆಗಳಿಗೆ ಪರಿಹಾರವನ್ನು ಸಾಧಿಸಲಾಗಿದೆ. ಈ ಮಾನವರಹಿತ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನವು ನಿಖರವಾದ ಸ್ಥಳಸೂಚಿಯ ಜತೆಗೆ ಹಾರ್ಡ್ವೇರ್ ಮತ್ತು ಸಾಫ್ಟ್ವೇರ್, ಸ್ಯೂಡೋಲೈಟ್ ವ್ಯವಸ್ಥೆ, ಕಾ-ಬ್ಯಾಂಡ್ ರಾಡಾರ್ ಅಲ್ಟಿಮೀಟರ್, ಸ್ಥಳೀಯ ಲ್ಯಾಂಡಿAಗ್ ಗೇರ್, ಏರೋಫಾಯಿಲ್ ಜೇನು-ಬಾಚಣಿಗೆ ರೆಕ್ಕೆಗಳು ಮತ್ತು ಬ್ರೇಕ್ ಪ್ಯಾರಾಚೂಟ್ ಸಿಸ್ಟಮ್ ಸೇರಿದಂತೆ ಹಲವಾರು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಯಶಸ್ಸು ಸಾಧಿಸಿತು.
ವಿಎಸ್‌ಎಸ್‌ಸಿ ನಿರ್ದೇಶಕ ಡಾ.ಎಸ್.ಉನ್ನಿಕೃಷ್ಣನ್ ನಾಯರ್ ಮತ್ತು ಎಟಿಎಸ್‌ಪಿ ಕಾರ್ಯಕ್ರಮ ನಿರ್ದೇಶಕ ಎನ್.ಶ್ಯಾಮ್‌ಮೋಹನ್ ವಿಜ್ಞಾನಿಗಳ ತಂಡಗಳಿಗೆ ಮಾರ್ಗದರ್ಶನ ನೀಡಿದರು. ಮಿಷನ್ ನಿರ್ದೇಶಕರಾಗಿ ಆರ್‌ಎಲ್‌ವಿ ಯೋಜನಾ ನಿರ್ದೇಶಕ ಡಾ.ಎಂ.ಜಯಕುಮಾರ್, ಮತ್ತು ಯೋಜನೆಗೆ ವಾಹನ ನಿರ್ದೇಶಕರಾಗಿ ಆರ್‌ಎಲ್‌ವಿಯ ಸಹ ಯೋಜನಾ ನಿರ್ದೇಶಕರಾದ ಜೆ.ಮುತ್ತುಪಾಂಡಿಯನ್ ಕಾರ್ಯನಿರ್ವಹಿಸಿದ್ದಾರೆ.
ಇದೇವೇಳೆ ಇಸ್ಟಾçಕ್ ನಿರ್ದೇಶಕರಾದ ರಾಮಕೃಷ್ಣ, ಇಸ್ರೋ ಕಾರ್ಯದರ್ಶಿ ಎಸ್.ಸೋಮನಾಥ್ ಪರೀಕ್ಷೆಯನ್ನು ವೀಕ್ಷಿಸಿದರು ಮತ್ತು ಇಡೀ ತಂಡವನ್ನು ಅಭಿನಂದಿಸಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page