ಮಲ್ಲೂರಹಟ್ಟಿಯಲ್ಲಿ ಸಂಭ್ರಮದ ಶ್ರೀ ಬನಶಂಕರಿ ಜಾತ್ರೆ ಜಾನಪದ ಕಲಾತಂಡಗಳೊಂದಿಗೆ ಸಂಭ್ರಮದ ಆಚರಣೆ*

by | 18/02/24 | ಸುದ್ದಿ


ನಾಯಕನಹಟ್ಟಿ. ಸಮೀಪದ ಮಲ್ಲೂರಹಟ್ಟಿ ಗ್ರಾಮದಲ್ಲಿ ಶ್ರೀ ಬನಶಂಕರಿ ದೇವಿಯ ಜಾತ್ರೆ ವಿಜೃಂಭಣೆಯಿಂದ ಆಚರಿಸಲಾಯಿತು. ಎಂದು ಶ್ರೀ ಬಾಳೇ ಬಂದಮ್ಮ ಸೇವಾ ಅಧ್ಯಕ್ಷ ಬಿ ಶಂಕರಪ್ಪ ತಿಳಿಸಿದರು
ಅವರು ಮಲ್ಲೂರ ಹಟ್ಟಿ ಗ್ರಾಮದ ಶ್ರೀ ಬನಶಂಕರಿ ದೇವಿ ಗಂಗಾಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಶ್ರೀ ಬನಶಂಕರಿ ದೇವಿಯ ದೇವಸ್ಥಾನದಲ್ಲಿ ಶುಕ್ರವಾರ ಕಂಕಣ ಧಾರಣೆ ಗಣಪತಿ ಪೂಜೆ ಮಂಟಪ ಪೂಜೆ ನಂತರ ಶ್ರೀದೇವಿಯ ಉಲಾಯಿಗೆ ಹೊರಟಿತು.
ಶನಿವಾರ ಬೆಳಗ್ಗೆ ಗಂಗಾ ಪೂಜೆಯೊಂದಿಗೆ ಪೂಜಾ ವಿಧಿ ವಿಧಾನಗಳ ಆರಂಭವಾಗಿ ಮಧ್ಯಾಹ್ನ 11.ಗಂಟೆಗೆ ಗೂಂಚಿಗಾರ್ ಮನೆಯಿಂದ ಗುಡಿಗೆ ಬಲಿಯನ್ನ ಹಾಕುವುದು 12 ಗಂಟೆಯಿಂದ ಸಕಲ ವಿರುದ್ಧವಾಗಿಗಳೊಂದಿಗೆ ಶ್ರೀದೇವಿಯ ಹೊಳೆಯ ಪೂಜೆ ಮುತ್ತೈದೆಯರಿಗೆ ಉಡಿ ತುಂಬಿ ಅದ್ದೂರಿ ಮೆರವಣಿಗೆ ಮೂಲಕ ವಿವಿಧ ವೀರಗಾಸೆ ತಮಟೆ ಉರುಮೆ ಜಾನಪದ ಕಲಾ ತಂಡಗಳೊಂದಿಗೆ ಗ್ರಾಮಕ್ಕೆ ಕರೆತರಲಾಯಿತು. ರಾತ್ರಿ 8 ಗಂಟೆಗೆ ಶ್ರೀದೇವಿಯ ತೂಗು ಮಂಚದಲ್ಲಿ ಪಾವಡಿಸಿ ರಾತ್ರಿ ಮದಲ್ಸಿ ನಂತರ ದೀಪಾ ಬೆಳಗಲಾಗುವುದು ಎಂದರು.

ಭಾನುವಾರ ಬೆಳಿಗ್ಗೆ 10:30 ಕ್ಕೆ ಸಕಲ ಬಿರುದಾವಳಿಗಳೊಂದಿಗೆ ಓಕಳಿ ನಂತರ ಗುಡಿ ತುಂಬುವುದು ಅಣ್ಣ- ತಮ್ಮಗಳ ಹಿರಿಯರು ವಿಶೇಷವಾದ ಪೂಜೆ ಆರತಿ ಶ್ರೀ ಬನಶಂಕರಿ ದೇವಿಯ ಎಡೆ ಹಾಕುವುದು ನಂತರ ಮಹಾ ಮಂಗಳಾರತಿಯೊಂದಿಗೆ ಜಾತ್ರೆ ಮುಕ್ತಾಯಗೊಳ್ಳುವುದು ಎಂದು ಶ್ರೀ ಬಾಳೇ ಬಂದಮ್ಮ ಸೇವಾ ಸಮಿತಿಯ ಕಾರ್ಯದರ್ಶಿ ಎಸ್ ತಿಪ್ಪೇಸ್ವಾಮಿ ತಿಳಿಸಿದರು.

ನೂರಾರು ಭಕ್ತರು ಗ್ರಾಮಸ್ಥರು ಶ್ರೀ ಬನಶಂಕರಿ ದೇವಿಯ ಪೂಜಾ ಕಾರ್ಯಗಳಲ್ಲಿ ಭಾಗವಹಿಸಿ ಭಕ್ತಿಯನ್ನ ಸಮರ್ಪಿಸಿದರು.

ಇನ್ನೂ ಶ್ರೀ ಬಾಳೆ ಬಂದಮ್ಮ ದೇವಸ್ಥಾನ ಸೇವಾ ಸಮಿತಿಯ ವತಿಯಿಂದ ಜಾತ್ರೆಗೆ ಬಂದಂತಹ ಭಕ್ತಾದಿಗಳಿಗೆ ಮೂರು ದಿನಗಳ ಕಾಲ ಅನ್ನದಾಸೋಹ ವ್ಯವಸ್ಥೆಯನ್ನು ಕಲ್ಪಿಸಲಾಯಿತು

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ರಾಧಮ್ಮ ಬೋರಣ್ಣ, ಸದಸ್ಯ ಕೆಂಗ ರುದ್ರಪ್ಪ, ಗೌಡ್ರು ತಿಪ್ಪೇಸ್ವಾಮಿ, ಯುವ ಮುಖಂಡ ನಾಗರಾಜ್, ಶ್ರೀ ಬಾಳೇ ಬಂದಮ್ಮ ದೇವಸ್ಥಾನ ಸೇವಾ ಸಮಿತಿಯ ನಿರ್ದೇಶಕರಾದ ಎಂ ಎಸ್ ವಸಂತ, ಎಂ ಟಿ ಶಂಕ್ರಪ್ಪ, ಎಂ ಬಿ ರುದ್ರಮನಿ, ಎಂ ವಿ ನಾಗೇಂದ್ರಪ್ಪ, ಎಂ ಮುಷ್ಟೂರಪ್ಪ, ರಾಜಪ್ಪ, ಪೂಜಾರಿ ತಿಪ್ಪೇಸ್ವಾಮಿ ಸೇರಿದಂತೆ ಮಲ್ಲೂರಹಟ್ಟಿ ಗ್ರಾಮದ ಸಮಸ್ತ ಊರಿನ ಗ್ರಾಮಸ್ಥರು ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page