ಮಳವಳ್ಳಿ : ಕಬ್ಬಿಣದ ರಾಡಿನಿಂದ ಹೊಡೆದು ವ್ಯಕ್ತಿಯೋರ್ವ ತನ್ನ ಪತ್ನಿ ಯನ್ನು ಹತ್ಯೆಗೈದಿರುವ ಕೃತ್ಯ ವೊಂದು ತಾಲೂಕಿನ ದೇಶವಳ್ಳಿ ಗ್ರಾಮದಲ್ಲಿ ಜರುಗಿದೆ.
ಈ ಗ್ರಾಮದ ಮಹದೇವ ಎಂಬಾತನೇ ತನ್ನ ಪತ್ನಿ 32 ವರ್ಷ ವಯಸ್ಸಿನ ಮಧು ಶ್ರೀ ಎಂಬಾಕೆಯನ್ನು ಹತ್ಯೆ ಗೈದಿರುವ ಆರೋಪಿಯಾಗಿದ್ದಾನೆ.
ನೆನ್ನೆ ರಾತ್ರಿ 10.45 ರ ಸಮಯದಲ್ಲಿ ಕೌಟುಂಬಿಕ ವಿಚಾರವಾಗಿ ಆರಂಭವಾದ ಜಗಳ ವಿಕೋಪಕ್ಕೆ ಹೋಗಿ ಈ ವೇಳೆ ಕಬ್ಬಿಣದ ರಾಡಿನಿಂದ ಪತ್ನಿ ತಲೆಗೆ ಹೊಡೆದ ಎನ್ನಲಾಗಿದೆ.
ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವ ವಾಗಿ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಹತ್ಯೆಗೈದ ನಂತರ ಆರೋಪಿ ಕಿರುಗಾವಲು ಪೊಲೀಸ್ ಠಾಣೆಗೆ ಹಾಜರಾಗಿ ಶರಣಾಗಿದ್ದಾನೆ ಎಂದು ಗೊತ್ತಾಗಿದೆ.
ಕಿರುಗಾವಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments