ಮಹರ್ಷಿ ವಾಲ್ಮೀಕಿ ಸಮಾಜಕ್ಕೆ ನೀಡಿದ ಉತ್ತಮ ಸಂದೇಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗೆ ಆಚರಣೆಗೆ ಸಾರ್ಥಕತೆ ಬರುತ್ತದೆ ಎಂದು ನಿಕಟಪೂರ್ವ ತಹಶೀಲ್ದಾರ್ ಎನ್ .ರಘುಮೂರ್ತಿ.

by | 28/10/23 | ಸುದ್ದಿ

‌‌‌‌‌‌
ನಾಯಕನಹಟ್ಟಿ ಜನಧ್ವನಿ ವಾರ್ತೆ ಅ.28. ಮಹರ್ಷಿ ವಾಲ್ಮೀಕಿ ಸಮಾಜಕ್ಕೆ ನೀಡಿದ ಉತ್ತಮ ಸಂದೇಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗೆ ಆಚರಣೆಗೆ ಸಾರ್ಥಕತೆ ಬರುತ್ತದೆ ಎಂದು ನಿಕಟಪೂರ್ವ ತಹಶೀಲ್ದಾರ್ ಎನ್ .ರಘುಮೂರ್ತಿ ಅಭಿಪ್ರಾಯ ಪಟ್ಟರು. ತಾಲೂಕಿನ ನಾಯಕನಹಟ್ಟಿ ಪಟ್ಟಣದಲ್ಲಿ ಹಟ್ಟಿ ಮಲ್ಲಪ್ಪ ನಾಯಕ ಸಂಘದ ಹಾಗೂ ವಾಲ್ಮೀಕಿ ಸಮುದಸಯದವತಿಯಿಂದ ಆಯೋಸಿದ್ದ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರು.

ಶ್ರೀ ರಾಮಾಯಣ ಕಾವ್ಯದಲ್ಲಿ ಧರ್ಮ ಸತ್ಯ ಭಾತೃತ್ವ ಮತ್ತು ನಿಷ್ಠೆಯಿಂದ ಬದುಕುವ ಬಗ್ಗೆ ಉಲ್ಲೇಖವಿದೆ ಹಾಗೆಯೇ ಅಧರ್ಮ ಅನೀತಿ ದ್ವೇಷ ಅಸೂಯೆ ಮತ್ತು ಪರಸ್ತ್ರೀ ವ್ಯಾಮೋಹ ಇವುಗಳಿಂದ ಮನುಷ್ಯನ ಅವನತಿಯು ಹೇಗೆಂದು ಮಹರ್ಷಿ ವಾಲ್ಮೀಕಿ ಅವರು ಈ ಮಹಾ ಕಾವ್ಯದಲ್ಲಿ ಅನಾವರಣಗೊಳಿಸಿದ್ದಾರೆ
ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಆದರ್ಶಗಳಿಗೂ ಮತ್ತು ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳಿಗೂ ಒಂದಕ್ಕೊಂದು ಸಾಮ್ಯತೆ ಇದೆ ಸಾಮಾಜಿಕ ಅಸಮತೋಲನತೆ ಪರಿಶ್ರಮ ಮತ್ತು ನಿಷ್ಠೆಯ ಬಗ್ಗೆ ಇಬ್ಬರು ಕೂಡ ಪ್ರತಿಪಾದಿಸಿದ್ದಾರೆ ಪಾಶ್ಚ್ಯಾತ ರಾಷ್ಟ್ರಗಳಲ್ಲಿ ಇವತ್ತು ಶ್ರೀ ರಾಮಾಯಣ ಮಹಾಕಾವ್ಯವನ್ನು ಪಠಣ ಮಾಡುತ್ತಾರೆಂದರೆ ಅದು ಭಾರತೀಯರ ಹೆಮ್ಮೆಯ ವಿಚಾರ ಆದರೂ ಕೂಡ ಮಹರ್ಷಿ ವಾಲ್ಮೀಕಿ ಅವರು ಮತ್ತು ಡಾ. ಬಿಆರ್ ಅಂಬೇಡ್ಕರ್ ಅವರ ಆಸೆಗಳಂತೆ ಸರಿ ಸಮಾನ ಆದಂತಹ ಸಮಾಜದ ನಿರ್ಮಾಣವಾಗಬೇಕು ಸಮಾಜದಲ್ಲಿ ಸಂಕಷ್ಟದಲ್ಲಿರುವಂತಹ ಜನರ ನೆರವಿಗೆ ಉಳ್ಳವರು ನಿಲ್ಲಬೇಕು ಸಂಪತ್ತು ಹಂಚಿಕೆ ಆಗಬೇಕು ಸಂವಿಧಾನದ ಮತ್ತು ಮೀಸಲಾತಿಯ ನೆರವಿನಿಂದ ಬದುಕು ಕಟ್ಟಿಕೊಂಡಂತಹ ಜನ ಸ್ವಾರ್ಥಿಗಳಾಗಬಾರದೆಂದು ಈ ಇಬ್ಬರು ದರ್ಶನಿಕರ ಆಶಯವಾಗಿತ್ತು ಇವತ್ತು ನಾವು ನೀವೆಲ್ಲರೂ ಕೂಡ ಸಂವಿಧಾನದ ಆಶಯದಂತೆ ಮೀಸಲಾತಿ ಉಂಡಂತವರು ಸಮಾಜದಲ್ಲಿ ಧ್ವನಿ ಇಲ್ಲದವರ ಮತ್ತು ಅಸಹಾಯಕರ ನೆರವಿಗೆ ನಿಂತು ಸಮಾಜದ ಬದಲಾವಣೆಗೆ ಇಂದಿನಿಂದಲೇ ಮುನ್ನುಡಿ ಬರೆಯೋಣವೆಂದು ಹೇಳಿದರು
ಹಟ್ಟಿ ಮಲ್ಲಪ್ಪ ನಾಯಕ ಟ್ರಸ್ಟ್ ಅಧ್ಯಕ್ಷ ಪಟೇಲ ತಿಪ್ಪೇಸ್ವಾಮಿ ಮಾತನಾಡಿ ಈ ಟ್ರಸ್ಟಿಗೆ ಇವತ್ತು ಸುಸಜ್ಜಿತವಾದ ಒಂದು ಕಟ್ಟಡವನ್ನು ಹೊಂತಿಕೆ ರೂಪದಲ್ಲಿ ಪ್ರಮಾಣ ಮಾಡಲಾಗಿದೆ ಈ ಕಟ್ಟಡ ಮುಂದಿನ ದಿನಗಳಲ್ಲಿ ಸದ್ವಿನಿಯೋಗವಾಗಬೇಕು ಹೊಸ ಸುಜ್ಜಿತವಾದಂತ ಗ್ರಂಥಾಲಯ ಮತ್ತು ಜನಾಂಗದ ಏಳಿಗೆಗೆ ಇಲ್ಲಿ ಒಂದು ಸಲಹಾ ಕೇಂದ್ರವನ್ನು ಕೂಡ ತೆರೆಯಲಾಗುತ್ತದೆ ಈ ಮುಖಾಂತರ ನಾಯಕನಹಟ್ಟಿ ಮತ್ತು ತಳುಕು ಹೋಬಳಿಯಲ್ಲಿನ ಜನಾಂಗದ ಜನರಿಗೆ ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಹೆಚ್ಚಿನ ಉತ್ತೇಜನ ನೀಡಿದಂತಾಗುತ್ತದೆ ಎಂದು ಹೇಳಿದರು
ಕಟ್ಟಡದ ಉದ್ಘಾಟನೆ ನಂತರ 20ಕ್ಕೂ ಹೆಚ್ಚು ಕಲಾತಂಡಗಳೊಂದಿಗೆ ಅಪಾರ ಸಂಖ್ಯೆ ಜನರು ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡರು ಯುವಕರು ವಾಲ್ಮೀಕಿ ಅವರ ಜಯ ಘೋಷಣೆ ಹಾಕಿದರು.


ಈ ಸಂದರ್ಭದಲ್ಲಿ ಬಂಡೆ ಕಟ್ಟೆ ಓಬಣ್ಣ ಮುದಿಯಪ್ಪ.ಬಸವರಾಜು ತಿಪ್ಪೇಸ್ವಾಮಿ .ಅನ್ವರ್ .ಬಂಗಾರಿ. ಪಟ್ಟಣ ಪಂಚಾಯತಿ ಸದಸ್ಯರುಗಳು ತಳುಕು ಮತ್ತು ನಾಯಕನಹಟ್ಟಿ ಹೋಬಳಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page