ಮಾಡಿದಷ್ಟು ನೀಡು ಬಿಕ್ಷೆ ಕಾಯಕಯೋಗಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಕಟ್ಟಿಸಿದ ಚಿಕ್ಕ ಕೆರೆ- 18 ವರ್ಷಗಳ ನಂತರ ಕೆರೆಗೆ ನೀರು ಈ ಭಾಗರದ ಜನರಲ್ಲಿ ಮಂದಹಾಸ ಮೂಡಿಸಿದ ವರುಣ..

by | 21/05/24 | ಸುದ್ದಿ


ನಾಯಕನಹಟ್ಟಿ ಮೇ 22 ಸುಮಾರು ವರ್ಷಗಳಿಂದ ನೀರು ಕಾಣದ ಕೆರೆಗೆ ನೀರು ಬರುತ್ತಿರುವ ದೃಶ್ಯ ಕಂಡು ಗ್ರಾಮದ ಜನರಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.
ಹೌದು ಇದು ಅತಿ ಕಡಿಮೆ ಮಳೆ ಬೀಳುವ ಪ್ರದೇಶದ ಎಂಬ ಹಣೆ ಪಟ್ಟಿ ಕೊಂಡಿದ್ದ ನಾಯಕನಹಟ್ಟಿ ಬಿಸಿಲಿನ ತಾಪದಿಂದ ತತ್ತರಿಸಿದ ಜನತೆಗೆ ತಡವಾಗಿ ಮುಂಗಾರು ಮಳೆ ಬಂದರೂ ಸಹ ಅತಿ ಹೆಚ್ಚು ದಾಖಲೆ ಮಳೆ ಬಂದಿರುವ ಕಾರಣ ನಾಯಕನಟ್ಟಿ ಸಣ್ಣಕೆರೆಗೆ .ಸುಮಾರು 18 ವರ್ಷಗಳಿಂದ ನೀರು ಕಾಣದ ಕೆರೆಗೆ ಕಳೆದು ಎರಡು ಮೂರು ದಿನಗಳಿಂದ ಸುರಿದ ಮಳೆಗೆ ನೀರು ಹರಿದು ಬರುತ್ತಿದ್ದು ಕೆರೆಯಲ್ಲಿನ ಗುಂಡಿಗಳು ತುಂಬಿಕೊಂಡಿದ್ದು ನೀರು ನೋಡಿ ನಾಯಕನಹಟ್ಟಿ ಪಟ್ಟಣ ಹಾಗೂ ಸುತ್ತ ಮುತ್ತಲ ಜನರಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.


ಮಾಡಿದಷ್ಟು ನೀಡು ಬಿಕ್ಷೆ ಎಂದ ವೇದ ವ್ಯಾಕ್ಯದೊಂದಿಗೆ ಪಟ್ಟಣದ ಚಿಕ್ಕಕೆರೆಯು 16ನೇ ಶತಮಾನದಲ್ಲಿ ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಯವರು ನಾಯಕನಹಟ್ಟಿ ಹೋಬಳಿಯಲ್ಲಿ ಕಟ್ಟಿಸಿದ ಸುಸಜ್ಜಿತ 5 ಕೆರೆಗಳಲ್ಲಿ ಒಂದು ಎಂದು ಹೇಳಲಾಗುತ್ತಿದೆ.
ಏರಿಯು ಸುಮಾರು 300 ಮೀಟರ್ ಉದ್ದವಿದ್ದು, 60 ಅಡಿ ಅಗಲವಿದೆ. ನಾಯಕನಹಟ್ಟಿ ಚಿಕ್ಕಕೆರೆಯು ನೂರಾರು ಹೆಕ್ಟೇರ್ ಪ್ರದೇಶಕ್ಕೆ ನೀರು ಹರಿಸುತ್ತದೆ. ಇದು ಸುಮಾರು 389.19 ಎಕರೆ ವಿಸ್ತೀರ್ಣ ಹೊಂದಿದ್ದು, ಪಟ್ಟಣದ ಸರ್ವೆ ನಂ. 131ರಲ್ಲಿ ಕಂಡು ಬರುತ್ತದೆ. ಇಷ್ಟು ದೊಡ್ಡ ಪ್ರಮಾಣದ ಕೆರೆಯಲ್ಲಿ ನೀರು ಸಂಗ್ರಹವಾದಾಗ ನಾಯಕನಹಟ್ಟಿ ಹೋಬಳಿಯ ಸುಮಾರು 20ಕ್ಕೂ ಹೆಚ್ಚು ಗ್ರಾಮಗಳ ಅಂತರ್ಜಲದ ಮಟ್ಟ ಹೆಚ್ಚುತ್ತದೆ. ಆದರೆ ಕಳೆದ ಸುಮಾರು 18 ವರ್ಷಗಳಿಂದ ಮಳೆಯ ಕೊರತೆಯಿಂದ ಚಿಕ್ಕಕೆರೆಗೆ ನೀರು ಬಾರದೇ ಇರುವುದರಿಂದ ಕೆರೆಯಲ್ಲಿ ಮಣ್ಣು ಹಾಗೂ ಕೆರೆಗೋಡು ತುಂಬಿ ದೊಡ್ಡ ದೊಡ್ಡ ಗುಂಡಿಗಳನ್ನು ನಿರ್ಮಿಸಿದ್ದರು ಮಳೆ ಬಂದ ಕಾರಣ ನೀರು ದೊಡ್ಡ ಗುಂಡಿಗಳು ತುಂಬಿವೆ ಈಗೆ ಮಳೆ ಬಂದರೆ ಕೆರೆ ತುಂಬುವುದು ಖಚಿತ ಕಳೆದ ಬಾರಿ ಮಳೆ ಬಂದಾಗ ಎಲ್ಲಾ ಕೆರೆಗಳು ತುಂಬಿದ್ದವು ಆದರೆ ನಾಯಕನಹಟ್ಟಿ ಚಿಕ್ಕ ಕೆರೆಗೆ ಮಾತ್ರ ನೀರು ಬಂದಿರಲಿಲ್ಲ ಈದಿನ ಕೆರೆಗೆ ನೀರು ಬಂದಿರುವುದು ನಮ್ಮ ಹಾಗೂ ಹಟ್ಟಿತಿಪ್ಪೇಶನ ಕೃಫೆಯೊಂದಿಗೆ ನೀರು ಬಂದಿರುವುದು ನಮ್ಮ ಭಾಗ್ಯ ಎಂದು ಪಟ್ಟಣದ ದಳವಾಯಿ ರುದ್ರಮುನಿ ಜನಧ್ವನಿಯೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page