ಮಾತೆಂದರೆ-ಇದು

ಬಡ್ಡಿದರ ನಿಗಧಿ ಪ್ರದರ್ಶಿಸುವಂತೆ ಜಿಲ್ಲಾಧಿಕಾರಿ ವೆಂಕಟೇಶ್.

ಚಿತ್ರದುರ್ಗ ಮೇ.27:
ಲೇವಾದೇವಿ ಗಿರವಿ ಹಾಗೂ ಹಣಕಾಸು ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961ರ ಪ್ರಕರಣ 28ರಡಿ ಸರ್ಕಾರವು ಬಡ್ಡಿದರ ನಿಗಧಿಪಡಿಸಿದೆ.
ಸರ್ಕಾರವು ಬಡ್ಡಿದರ ನಿಗಧಿಪಡಿಸಿರುವ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಲೈಸೆನ್ಸ್ ಪಡೆದ ಲೇವಾದೇವಿ ಹಾಗೂ ಗಿರವಿದಾರರ ಅಂಗಡಿಯಲ್ಲಿ ಸಾರ್ವಜನಿಕರ ಹಿತದೃಷ್ಟಿಗೆ ಸುಲಭವಾಗಿ ಕಾಣುವಂತೆ ಬಡ್ಡಿದರ ವಿಧಿಸುವ ನಾಮಫಲಕಗಳನ್ನು ನಗದು ಕೌಂಟರ್ ಹತ್ತಿರ ದಪ್ಪ ಅಕ್ಷರಗಳಲ್ಲಿ ಮುದ್ರಿಸಿ ಪ್ರದರ್ಶಿಸಬೇಕು.
ಭದ್ರತೆ ಇರುವ ಸಾಲಗಳಿಗೆ ಗರಿಷ್ಟ ವಾರ್ಷಿಕ ಶೇ.14 ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ಗರಿಷ್ಟ ವಾರ್ಷಿಕ ಶೇ.16 ಮಾತ್ರ ವಿಧಿಸಬೇಕಾಗಿರುತ್ತದೆ. ಈ ದರಗಳಿಗಿಂತ ಮಿತಿ ಮೀರಿದ ಬಡ್ಡಿ ವಿಧಿಸಿ ಸಾಲಗಾರರಿಗೆ ಕಿರುಕುಳ ನೀಡುತ್ತಿದ್ದಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಹಾಗೂ ಗಿರವಿ ಲೇವಾದೇವಿ ಸಹಾಯಕ ನಿಬಂಧಕರು, ಚಿತ್ರದುರ್ಗ ಉಪವಿಭಾಗ, ಚಿತ್ರದುರ್ಗ ಮತ್ತು ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಗಿರವಿ ಲೇವಾದೇವಿ ಉಪ ನಿಬಂಧಕರು, ಚಿತ್ರದುರ್ಗ ಇವರಿಗೆ ದೂರು ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ

ರೈತರ ಖಾತೆಗೆ ಜಮೆಯಾಗುವ ಪರಿಹಾರ ಮೊತ್ತವನ್ನು ಬ್ಯಾಂಕ್‍ನವರು ಸಾಲಕ್ಕೆ ಜಮೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ .


ಚಿತ್ರದಲ್ಲಿ ಮೇ8 ಡಿಬಿಟಿ ಮುಖಾಂತರ ರೈತರ ಖಾತೆಗೆ ಜಮೆಯಾಗುವ ಪರಿಹಾರ ಮೊತ್ತವನ್ನು ಬ್ಯಾಂಕ್‍ನವರು ಸಾಲಕ್ಕೆ ಜಮೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರೈತರ ಸಭೆಯಲ್ಲಿ, ರೈತರು ಬೆಳೆವಿಮೆ ಪರಿಹಾರ, ಬರ ಪರಿಹಾರ, ಪಿಎಂ ಕಿಸಾನ್, ಹಾಲಿನ ಸಹಾಯಧನದ ಮೊತ್ತ, ಉದ್ಯೋಗ ಖಾತ್ರಿಯ ಕೂಲಿ ಮೊತ್ತವನ್ನು ಬ್ಯಾಂಕ್‍ನವರು ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬಗ್ಗೆ ರೈತರು, ರೈತ ಮುಖಂಡರು ದೂರಿದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ರೈತರ ಖಾತೆಗೆ ಜಮೆಯಾಗುವ ಪರಿಹಾರ, ಸಹಾಯಧನ ಮೊತ್ತವನ್ನು ಸರ್ಕಾರವು ನಿರ್ದಿಷ್ಟ ಉದ್ದೇಶಗಳಿಗಾಗಿ ನೀಡುತ್ತಿದ್ದು, ಈ ಮೊತ್ತವನ್ನು ಯಾವುದೇ ಬ್ಯಾಂಕುಗಳು ಸಾಲಗಳಿಗೆ ಜಮೆ ಮಾಡಿಕೊಳ್ಳದೇ ಇರಲು ಕಟ್ಟುನಿಟ್ಟಿನ ನಿರ್ದೇಶನ ನೀಡಿ ಆದೇಶಿಸಿದ್ದಾರೆ.

ಗ್ರಾಮಾಂತರ ಪ್ರದೇಶದಲ್ಲಿ ಶಿಕ್ಷಣ, ಆರೋಗ್ಯ, ಅಭಿವೃದ್ಧಿ ಕಾರ್ಯಕ್ರಮಗನ್ನು ಯಾವುದೇ ಫಲಾಪೇಕ್ಷೆ ಇಲ್ಲದೆ ಸಮಾಜದ ಋಣ ತೀರಿಸುವುದು ದೊಡ್ಡ ಗುಣ ಎಂದು ಪೊಲೀಸ್ ಮಹಾನಿರ್ದೇಶಕ ಡಾ.ಬಿ.ಆರ್.ರವಿಕಾಂತೇ ಗೌಡ,

ಪಾವಗಡ ಮೇ 7 ಸೇವೆ ಮಾಡುವುದು ಮನುಷ್ಯನ ಕರ್ತವ್ಯ, , ಗ್ರಾಮಾಂತರ ಪ್ರದೇಶದಲ್ಲಿ ಶಿಕ್ಷಣ, ಆರೋಗ್ಯ, ಅಭಿವೃದ್ಧಿ ಕಾರ್ಯಕ್ರಮಗನ್ನು ಯಾವುದೇ ಫಲಾಪೇಕ್ಷೆ ಇಲ್ಲದೆ ಸಮಾಜದ ಋಣ ತೀರಿಸುವುದು ದೊಡ್ಡ ಗುಣ ಎಂದು ಪೊಲೀಸ್ ಮಹಾನಿರ್ದೇಶಕ ಡಾ.ಬಿ.ಆರ್.ರವಿಕಾಂತೇ ಗೌಡ, ಐ.ಪಿ.ಎಸ್ ಹೇಳಿದರು.


ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮಕ್ಕೆ ಅವರು ಭೇಟಿ ನೀಡಿ ಕಣ್ಣಿನ ಆಸ್ಪತ್ರೆ, ವಿವಿಧ ಚಿಕಿತ್ಸಾ ಆರೋಗ್ಯ ಕೇಂದ್ರ ಹಾಗೂ ಜಾನುವಾರುಗಳಿಗೆ ಮೇವು ವಿತರಣೆ ಕಾರ್ಯಮ ವೀಕ್ಷಣೆ ಮಾಡಿ ಮಾತನಾಡಿದರು.
ಕುಷ್ಠರೋಗ ನಿರ್ಮೂಲನೆ, ಕ್ಷಯರೋಗ ನಿಯಂತ್ರಣ, ಅಂಧತ್ವ ನಿಯಂತ್ರಣ, ಕಿವಿ, ಗಂಟಲು, ಮೂಗಿನ ಯೋಜನೆ ಮುಂತಾದ ಇಪ್ಪತ್ತಕ್ಕೂ ಹೆಚ್ಚಿನ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದರ ಜೊತೆಯಲ್ಲಿ ತಾವು ಮತ್ತೊಂದು ಅದ್ಭುತವಾದ ವಿಚಾರವನ್ನು ಕಂಡಿರುವುದೇನೆಂದರೆ ಕರ್ನಾಟಕವಲ್ಲದೆ ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಒಡಿಶಾ, ಮುಂತಾದ ರಾಜ್ಯಗಳಲ್ಲಿಯೂ ಸಹ ನೆರೆ ಹಾವಳಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ ಪೂಜ್ಯರ ನೇತೃತ್ವದಲ್ಲಿ ನಡೆಸುತ್ತಿರುವ ಪರಿಹಾರ ಯೋಜನೆಗಳು ದೇಶಕ್ಕೆ ಒಂದು ಮಾದರಿ ಎಂದು ಮೆಚ್ಚಿಗೆ ವ್ಯಕ್ತಪಡಿಸಿದರು.
ಹಿಂದುಳಿದ ಪ್ರದೇಶದಲ್ಲಿ ಶ್ರೀಸ್ವಾಮಿವಿವೇಕಾನಂದರ, ಶ್ರೀಶಾರದಾಶ್ರಮ ಹಾಗೂ ಸುಧಾಮೂರ್ತಿಯವರ ಟ್ರಸ್ಟ್ ಅಡಿಯಲ್ಲಿ ಬಡಮಕ್ಕಳಿಗೆ ಶಿಕ್ಷಣ ಆರೋಗ್ಯ ಸೇವೆ ನೀಡುವ ಜತೆ ಜತೆಯಲ್ಲಿ ಪ್ರಾಣಿ ಸಂಕುಲ, ಗೋ ಮಾತೆಗಳಿಗೆ ಉಚಿತ ಮೇವು ನೀರು , ಉಚಿತ ಆರೋಗ್ಯ ಸೇವೆ ಒದಗಿಸುತ್ತಿರುವುದು ವಿವೇಕಾನಂದರ ಆಶಯಗಳನ್ನು ಸಾಕಾರಮಾಡುವ ನಿಟ್ಟಿನಲ್ಲಿ ಮಹತ್ವದ ಕಾರ್ಯ ಮಾಡುತ್ತಿದೆ.


ಇಂತಹ ಬೀಕರ ಬರಗಾಲದಲ್ಲಿ ದೇವರ ಎತ್ತುಗಳಿಗೆ ಹಾಗೂ ರೈತರ ಜಾನುವಾರುಗಳಿಗೆ ಮೇವು ಒದಗಿಸುತ್ತಿರುವುದು ಇದು ಪುಣ್ಯದ ಕೆಲಸ ಎಂದು ಶ್ರೀ ಜಪಾನಂದಸ್ವಾಮೀಜಿಯವರ ಸೇವೆಯನ್ನು ಶ್ಲಾಘೀಸಿದರು.

ಶ್ರೀ ಜಪಾನಂದಜೀ ಮಾತನಾಡಿ, ಕಳೆದ ಸುಮಾರು 30 ವರ್ಷಗಳಿಂದ ಶ್ರೀರಾಮಕೃಷ್ಣ ಗ್ರಾಮಾಂತರ ಆರೋಗ್ಯ ಕೇಂದ್ರ ನಿರಂತರವಾಗಿ ಜನಸೇವೆ ಸಲ್ಲಿಸುತ್ತಿದೆ. ಕಣ್ಣಿನ ಆಸ್ಪತ್ರೆ ಕೂಡ ಭವಿಷ್ಯದಲ್ಲಿ ಜನರಿಗೆ ಅನುಕೂಲವಾಗಲಿದೆ, ಬಡವರ ಪರವಾದ ಸಾಕಷ್ಟು ಕಾರ್ಯಕ್ರಮವನ್ನು ಆಶ್ರಮದ ವತಿಯಿಂದ ರೂಪಿಸಲಾಗಿದ್ದು, ಇನ್ಫೋಸಿಸ್ ಫೌಂಡೇಷನ್ ನೆರವು ಸ್ಮರಣೀಯ ಎಂದರು.


ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಐ.ಪಿ.ಎಸ್. ರೈತ ಮುಖಂಡರಾದ ಜಯಸಿಂಹರೆಡ್ಡಿ, ಹೊನ್ನಪ್ಪ, ಸುದೇಶ್ ಬಾಬು, ಎಂ.ಭಗವಂತಪ್ಪ, ರಾಮಮೂರ್ತಿ, ರಾಮನಾಥ್, ಕಮಲ್ ಬಾಬು, ಕೃಷ್ಣಮೂರ್ತಿ, ಗೋವಿಂದರಾಜು ಇತರರಿದ್ದರು.

ಮೇವಿನ ಕೊರತೆಯಿಂದ ಸಾವಿನ ಮನೆ ಕದ ತಟ್ಟುವ ಎಮ್ಮೆಗಳಿಗೆ ಮೇವು ನೀಡಿ ಅನ್ನದಾತರ ನೆರವಿಗೆ ದಾವಿಸಿದ ಸಂತ ಶ್ರೀ ಜಪಾನಂದಸ್ವಾಮೀಜಿ.


ಪಾವಗಡ ಮೇ 5 ಬೀಕರ ಬರದ ಛಾಯೆ, ಹಾಗೂ ಬಿಸಿಲಿನ ತಾಪಮಾನದಿಂದ ಜಾನುವಾರುಗಳಿಗೆ ಮೇವು ನೀರಿಲ್ಲದೆ ಸಾವಿನ ಮನೆ ಸೇರುತ್ತಿದ್ದು ರೈತರನ ಹೈನುಗಾರಿಕೆ ಮೇಲು ಕರಿನೆರಳಿನ ಛಾಯೆ ಬಿದ್ದು ಇಲ್ಲೊಬ್ಬ ಸಂತ ಜಾನುವಾರುಗಳ ನೆರವು ನೀಡಲು ಮುಂದಾಗಿದ್ದಾರೆ.
ಹೌದು ಇದು ಪಾವಗಡ ಪಾವಗಡ ಹಾಗೂ ಆಂಧ್ರಪ್ರದೇಶದ ಗಡಿಭಾಗದ ಭಕ್ತರಪಲ್ಲಿ ಗ್ರಾಮದಲ್ಲಿ ಸ್ವಲ್ಪ ನೀರು ಹಾಗೂ ಮೇವು ದೊರೆಯುತ್ತದೆ ಎಂಬ ಆಸೆಯಿಂದ ಅಲ್ಲಿಗೆ ತೆರಳಿದಾಗ ನಡೆದ ಘಟನೆ ಯೇ ಬೇರೆದಾಗಿತ್ತು ಮೆವಿಲ್ಲದೆ ಅಪೌಷ್ಠಿಕತೆಗೆ ತುತ್ತಾಗಿ ಸಂಪೂರ್ಣ ನಿತ್ರಾಣಗೊಂಡು ಶಂಕರು ಗುಳಿ ತಳಿಯ 5 ಎಮ್ಮೆಗಳು ಸಾವಿನ ಮನೆ ಸೇರಿದ್ದು ಕಂಡು ಸಂತ ಶ್ರೀ ಜಪಾನಂದಸ್ವಾಮೀಗಳು ಕಣ್ಣೀರು ಹರಿಸಿ ರೈತರ ಎಮ್ಮೆಗಳಿಗೆ ಮೇವು ಒದಗಿಸುವ ಮೂಲಕ ಮೂಕ ಪ್ರಾಣಿಗಳ ಹಸಿವು ನೀಗಿಸಿ ರೈತರ ನೆರವಿಗೆ ಮುಂದಾಗಿದ್ದಾರೆ.


ಬೀಕರ ಬರಗಾಲ ಹಾಗೂ ಬಿಸಿಲಿನ ತಾಪದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಜನ ಜಾನುವಾರುಗಳು ಬಿಸಿಲಿನ ತಾಪಕ್ಕೆ ನೀರು ಮೇವಿಲ್ಲದೆ ಸಾಯುವ ಸ್ಥಿತಿ ತಲುಪಿದರೂ ಸಹ ಸರಕಾರಗಳು ಮಾತ್ರ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದು ಜನ ಜಾನುವಾರುಗಳ ರಕ್ಷಣೆಗೆ ಮುಂದಾಗುತ್ತಿಲ್ಲ ಚುನಾವಣೆ ಹೆಸರಲ್ಲಿ ಕೋಟಿ ಕೋಟಿ ಹಣ ಖರ್ಚು ಮಾಡಿದರೂ ಸಹ ಕುಡಿಯುವ ನೀರು ಮೇವು ಒದಗಿಸಲು ಮುಂದಾಗುತ್ತಿಲ್ಲ ಎಂದು ಸರಕಾರಗಳ ವಿರುದ್ದ ಕಿಡಿ ಕಾರಿದ್ದಾರೆ.
ಜಪಾನಂದ ಸ್ವಾಮಿಗಳು ಶಂಕರಗಲ್ಲು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಾಡು ಪ್ರಾಣಿಗಳಿಗೆ ಆಹಾರ ನೀರು ಇಲ್ಲದೆ ಇರುವ ಕಾರಣ ರೈತರ ಸಾಕು ಪ್ರಾಣಿಗಳ ಮೇಲೆ ಎರಗಿ ಗಾಯಗೊಳಿಸಿರುವುದು ಕಂಡು ಬಂದರೂ ಸಹ ಸಂಬಂಧ ಪಟ್ಟ ಅಧಿಕಾರಿಗಳು ಮಾನವೀಯತೆ ದೃಷ್ಠಿಯಿಂದ ರೈತರ ನೆರವಿಗೆ ಬಾರದೆ ಇರುವುದು ವಿಪರ್ಯಾಸದ ಸಂಗತಿಯಾಗಿದೆ.
42-43 ° ಬಿಸಿಲಿನಲ್ಲಿ ಬದುಕುತ್ತಿರುವ ಈ ಬಡಪಾಯಿಗಳಿಗೆ ಪೂಜ್ಯ ಸ್ವಾಮಿ ಜಪಾನಂದರೆ ನಡೆದಾಡುವ ದೇವರು ಎಂದು ಈ ಭಾಗದ ನೂರಾರು ಗ್ರಾಮಸ್ತರ ನಂಬಿಕೆ. ಅದೇನೇರಲಿ
ಅತ್ಯಂತ ದುಬಾರಿ ಹಾಗೂ ವಿಶೇಷವಾದ “ಸುರುಟಿ” ತಳಿಯಾದ ಸುಮಾರು 50 ಎಮ್ಮೆಗಳಿಗೆ ಮರು ಜನ್ಮನೀಡಿದ ಪೂಜ್ಯ ಸ್ವಾಮಿ ಜಪಾನಂದಜಿ ಮಹಾರಾಜರು.


ಕಳೆದ ಒಂದು ವಾರದ ಹಿಂದೆ ವೃದ್ಧರಾದ ಶ್ರೀ ರಾಮಪ್ಪ ಹಾಗೂ ಶ್ರೀ ರಾಮಚಂದ್ರಪ್ಪ ಎನ್ನುವ ಬಡ ಹೈನುಗಾರರು ಸ್ವಾಮಿಜೀ ರವರಬಳಿಗೆ ಬಂದು ತಮ್ಮ ದುಃಖ ವನ್ನು ತೂಡಿಕೊಂಡರು. ಅತ್ಯಂತ ದುಬಾರಿ ಹಾಗೂ ವಿಶೇಷ ತಳಿ ಯಾದ “ಸುರುಟಿ “ಎಮ್ಮೆಗಳ ದಾರುಣ ಸ್ಥಿತಿ ಹಾಗೂ ಸುಮಾರು ಎಮ್ಮೆಗಳು ಆಹಾರವಿಲ್ಲದೆ ಪ್ರಾಣಬಿಟ್ಟಿ ರುವುದನ್ನು ವಿವರಿಸಿ ತಮಗೆ ಸಹಾಯಮಾಡದಿದ್ದರೆ ಬದುಕುಳಿದ ಎಮ್ಮಗಳು ಸಾವನನ್ನಪ್ಪುತ್ತಿದ್ದವು ಎಂದು ಕಣ್ಣೀರಾಕಿದ್ದಾರೆ .
ತಕ್ಷಣ ರೈತರ ಮನವಿಗೆ ಸ್ಪಂದಿಸಿದ ಶ್ರೀ ಜಪಾನಂದಸ್ವಾಮೀಜಿಗಲು ರೈತರ ಎಮ್ಮೆಗಳಿಗೆ ಮೇವು ನೀಡಿ ರೈತರ ಬಧುಕಿಗೆ ಆಸರೆಯಾಗಿದ್ದಾರೆ .

ಗುಡುಗು-ಸಿಡಿಲು ಆಘಾತದಿಂದ ಪಾರಾಗಲು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸಲಹೆಗಳು


ಬಳ್ಳಾರಿ,ಏ.24
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಪ್ರಾಧಿಕಾರದಿಂದ ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸಾರ್ವಜನಿಕರು ಅವುಗಳನ್ನು ಕಡ್ಡಾಯವಾಗಿ ಪಾಲಿಸಿ, ನೈಸರ್ಗಿಕ ಅವಘಡಗಳಿಂದ ಆಗುವ ಹಾನಿಯಿಂದಾಗಿ ತಪ್ಪಿಸಿಕೊಳ್ಳಬಹುದಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸೂಚಿಸಿದೆ.
*ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಸಲಹೆ ಸೂಚನೆಗಳು:*
ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಮುಖಾಂತರ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಬರುವ ಸಂದೇಶಗಳನ್ನು ಗಮನಿಸಬೇಕು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗವುದನ್ನು ತಪ್ಪಿಸಬೇಕು. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಾದ ಮನೆಗಳು, ಕಚೇರಿಗಳು, ಅಂಗಡಿಗಳು ಮತ್ತು ಕಿಟಕಿ ಮುಚ್ಚಿರುವಂತಹ ವಾಹನಗಳಲ್ಲಿ ಆಶ್ರಯ ಪಡೆಯಬೇಕು ಎಂದು ತಿಳಿಸಿದೆ.
ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿಕೊಂಡು ಆಶ್ರಯ ಪಡೆಯಬೇಕು. ಕೆರೆ ಮತ್ತು ನದಿಗಳು ಹಾಗೂ ಇನ್ನಿತರ ನೀರಿನ ಮೂಲಗಳಿಂದ ತಕ್ಷಣವೇ ದೂರವಿರುವುದು, ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು, ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಬೇಕು.
ಗುಡುಗು – ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡಬೇಕು ಹಾಗೂ ಮನೆಗಳಲ್ಲಿ ಇರಬೇಕು. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯಬೇಕು ಹಾಗೂ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರಬೇಕು. ಮರಗಳು ಮತ್ತು ವಿದ್ಯುತ್ ಲೈನ್‍ಗಳಿಂದ ದೂರ ವಾಹನ ನಿಲುಗಡೆ ಮಾಡಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರ ಕಾಯ್ದುಕೊಳ್ಳಬೇಕು.
ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಬೇಕು. ಮಿಂಚನ್ನು ಆಕರ್ಷಿಸುವಂತಹ ವಿದ್ಯುತ್ ಅಥವಾ ಟೆಲಿಫೆÇೀನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ ಹಾಗೂ ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯಬೇಕು. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಬೇಕು. ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೆÇೀನ್‍ಗಳನ್ನು ಬಳಸಬಾರದು ಹಾಗೂ ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿ ಕರೆಯನ್ನು ಬಳಸಬಾರದು.
ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಬೇಕು. ಮಕ್ಕಳು, ವಯೋವೃದ್ದರು, ಜಾನುವಾರುಗಳನ್ನು ಹಾಗೂ ಸಾಕು ಪ್ರಾಣಿಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕಬೇಕು.
ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಮೋಟಾರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡಬಾರದು.
ಆಟದ ಮೈದಾನ, ಉದ್ಯಾನವನಗಳು, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಬೇಕು. ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು. ಅರಣ್ಯ ಪ್ರದೇಶದಿಂದ ಗಿಡ ಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸಬೇಕು. ಮಿಂಚಿನ ಹೊಡೆತದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆಯಿರುವುದರಿಂದ ಎಚ್ಚರಿಕೆ ವಹಿಸಬೇಕು.
ಗುಡುಗು ಸಿಡಿಲಿನ ಸಮಯದಲ್ಲಿ ಬಯಲು ಪ್ರದೇಶದಲ್ಲಿ ಸಿಲುಕಿಕೊಂಡಿದ್ದರೆ, ತಕ್ಷಣವೇ ಹತ್ತಿರದಲ್ಲೇ ಇರುವ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆದು ಅಪಾಯದಿಂದ ಪಾರಾಗಬೇಕು. ಮಿಂಚು ಬರುವ ಸಮಯದಲ್ಲಿ ರಬ್ಬರ್ ಸೋಲ್ ಇರುವ ಪಾದರಕ್ಷೆಗಳು ಮತ್ತು ಕಾರಿನ ಚಕ್ರಗಳು ಸುರಕ್ಷಿತವಲ್ಲದ ಕಾರಣ ಅವುಗಳಿಂದ ದೂರವಿರಬೇಕು.
ವಿದ್ಯುತ್ ಸಂಪರ್ಕ ಹೊಂದಿರುವಂತಹ ವಿದ್ಯುತ್ ಮತ್ತು ಎಲೆಕ್ಟ್ರಿಕಲ್ ಉಪಕರಣಗಳಾದ ಕಂಪ್ಯೂಟರ್, ಲ್ಯಾಪ್‍ಟಾಪ್, ವಿಡಿಯೋ ಗೇಮ್ ಸಾಧನಗಳು, ಮೊಬೈಲ್ ಫೆÇೀನ್, ವಾಷಿಂಗ್ ಮಷಿನ್, ಸ್ಟವ್ ಹಾಗೂ ಇತರೆ ವಿದ್ಯುತ್ ಉಪಕರಣಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬೇಕು. ಬಾಗಿಲುಗಳು, ಕಿಟಕಿಗಳು, ಮಂಟಪಗಳು, ಕಾಂಕ್ರೀಟ್ ನೆಲ, ಬೆಂಕಿಯ ಸ್ಥಳಗಳು, ಸ್ಟವ್‍ಗಳು, ಬಾತ್‍ಟಬ್‍ಗಳು ಅಥವಾ ಇತರೆ ವಿದ್ಯುತ್ ಉಪಕರಣಗಳಿಂದ ದೂರವಿರಬೇಕು.
*ಸಿಡಿಲು ಮತ್ತು ಮಿಂಚು ಬಡಿದಾಗ ಪಾಲಿಸಬೇಕಾದ ಪ್ರಥಮ ಚಿಕಿತ್ಸಾ ವಿಧಾನ:*
ಸಿಡಿಲು ಮತ್ತು ಮಿಂಚು ಬಡಿದ ಸಮಯದಲ್ಲಿ ಪ್ರಾಥಮಿಕವಾಗಿ 112 ಅಥವಾ 108 ಸಹಾಯವಾಣಿಗೆ ಕರೆ ಮಾಡಬೇಕು. ವೈದ್ಯಕೀಯ ಸಿಬ್ಬಂದಿಯು ಆಗಮಿಸುವ ಮುನ್ನವೇ ನೀಡುವ ಅಗತ್ಯ ಪ್ರಥಮ ಚಿಕಿತ್ಸೆಯಿಂದ ಸಿಡಿಲು ಮಿಂಚಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಜೀವವನ್ನು ಉಳಿಸಬಹುದಾಗಿದೆ. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ದೇಹದಲ್ಲಿ ಯಾವುದೇ ವಿದ್ಯುತ್ ಕಣಗಳು ಸಂಚಾರವಾಗುವುದಿಲ್ಲ. ಆದ್ದರಿಂದ, ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ಮುಟ್ಟಿ ಉಪಚರಿಸುವ ವ್ಯಕ್ತಿಗೆ ಯಾವುದೇ ಅಪಾಯವಿರುವುದಿಲ್ಲ.
ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಉಸಿರಾಟ ಹಾಗೂ ಎದೆ ಬಡಿತವನ್ನು ಪರೀಕ್ಷಿಸಬೇಕು. ವ್ಯಕ್ತಿಯ ದವಡೆಗೆ ನೇರವಾಗಿ ಕುತ್ತಿಗೆಯಲ್ಲಿರುವ ರಕ್ತನಾಳವನ್ನು ಪರೀಕ್ಷಿಸುವುದರಿಂದ ಸುಲಭವಾಗಿ ನಾಡಿ ಮಿಡಿತವನ್ನು ತಿಳಿಯಬಹುದು. ವ್ಯಕ್ತಿಯಲ್ಲಿ ಉಸಿರಾಟವು ಕಂಡು ಬರದಿದ್ದಲ್ಲಿ ತಕ್ಷಣವೇ ಕೃತಕ ಉಸಿರಾಟ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ವ್ಯಕ್ತಿಯಲ್ಲಿ ಎದೆಬಡಿತವು ಕಂಡು ಬರದಿದ್ದಲ್ಲಿ ತಕ್ಷಣವೇ Cardiac compressions ಹಾಗೂ Cardiopulmonary Resuscitation ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು.
ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಕಣ್ಣಿನ ದೃಷ್ಟಿ, ಕಿವಿಕೇಳಿಸುವಿಕೆ ಹಾಗೂ ಮೂಳೆಗಳು ಮುರಿದಿವೆಯೇ ಎಂದು ಪರೀಕ್ಷಿಸಬೇಕು. ಇದರಿಂದ ಪಾಶ್ರ್ವವಾಯು, ಲಕ್ಷಾ ಹೊಡೆಯುವುದನ್ನು ಮತ್ತು ಅಧಿಕ ರಕ್ತಸ್ರಾವದಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟಬಹುದು. ಸಿಡಿಲು ಬಡಿಯುವ ಸಾಧ್ಯತೆಯು ಮುಂದುವರೆಯುವುದರ ಬಗ್ಗೆ ಈಗಾಗಲೇ ಸಿಡಿಲಿನ ಹೊಡೆತಕ್ಕೆ ಒಳಗಾಗಿರುವ ವ್ಯಕ್ತಿ ಹಾಗೂ ಅವರನ್ನು ರಕ್ಷಿಸುವವರು ಎಚ್ಚರವಹಿಸಬೇಕು. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯು ಅಪಾಯಕಾರಿ ಸ್ಥಳದಲ್ಲಿದ್ದರೆ, ತಕ್ಷಣವೇ ಅವನನ್ನು ಅಥವಾ ಅವಳನ್ನು ಸೂಕ್ತ ರಕ್ಷಣಾ ಸ್ಥಳಕ್ಕೆ ಸ್ಥಳಾಂತರಿಸಬೇಕು.
ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯು ವಿವಿಧ ರೀತಿಯ ಸುಟ್ಟಗಾಯಗಳಿಂದ ಬಳಲಬಹುದು ಹಾಗೂ ಕಾಣದ ಗಾಯಗಳು, ಆಘಾತಕ್ಕೆ ಒಳಗಾಗಿರಬಹುದು. ಸಿಡಿಲು ಬಡಿದಿರುವ ವ್ಯಕ್ತಿಯಿರುವ ಸ್ಥಳಕ್ಕೆ ತಲುಪಲು ಹಾಗೂ ಸಿಡಿಲು ಬಡಿತಕ್ಕೆ ಒಳಗಾದ ವ್ಯಕ್ತಿಯ ಆರೋಗ್ಯಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿ ನೀಡಬೇಕು ಮತ್ತು ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಬೇಕು.
ವಿಪತ್ತು ನಿರ್ವಹಣಾ ಪ್ರಾಧಿಕಾರ ನೀಡಿರುವ ಸಲಹೆ ಸೂಚನೆಗಳನ್ನು ಪಾಲಿಸುವುದರಿಂದ ಗುಡುಗು ಹಾಗೂ ಸಿಡಿಲಿನಿಂದ ಆಗುವ ಪ್ರಾಣ ಹಾನಿ ಹಾಗೂ ಇನ್ನಿತರ ಅವಘಡಗಳಿಂದ ಪಾರಾಗಬಹುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ತಿಳಿಸಿದೆ.

ಬಯಲು ಸೀಮೆಯ ದೇವರ ಹಸುಗಳಿಗೆ ಸರ್ಕಾರ ಪ್ರತ್ಯೇಕ ಮೇವು ಬ್ಯಾಂಕ್ ಸ್ಥಾಪಿಸಲಿ: ಶ್ರೀ ಜಪಾನಂದ ಸ್ವಾಮೀಜಿ ಅಗ್ರಹ


ಚಳ್ಳಕೆರೆ: ರಾಜ್ಯದ ಬಯಲು ಸೀಮೆ ಪ್ರದೇಶಗಳಾದ ಪಾವಗಡ ಚಿತ್ರದುರ್ಗ ಚಳ್ಳಕೆರೆ ಜಗಳೂರು ಕೂಡ್ಲಿಗಿ ಪ್ರದೇಶಗಳು ಬರಗಾಲದಿಂದ ತತ್ತರಿಸಿದ್ದು ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ ಅದರಲ್ಲೂ ಬುಡಕಟ್ಟು ಸಂಸ್ಕೃತಿಯಲ್ಲಿ ದೇವರ ಹಸುಗಳನ್ನು ಲಾಲನೆ ಪಾಲನೆ ಮಾಡುತ್ತಿರುವ ಕಿಲಾರಿಗಳಿಗೆ ತಮ್ಮ ಹಸುಗಳನ್ನು ಸಲಹಲು ಮೇವಿಲ್ಲದೆ ಪರಿತಪಿಸುವಂತಾಗಿದ್ದು ಹಸುಗಳು ಜೀವನ್ಮರಣ ಸ್ಥಿತಿಗೆ ತಲುಪಿವೆ ಎಂದು ಪಾವಗಡದ ಶ್ರೀರಾಮಕೃಷ್ಣಾಶ್ರಮದ ಶ್ರೀ ಜಪಾನಂದ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.


ನಗರದ ರೋಟರಿ ಬಾಲ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸರ್ಕಾರ ಬರಪೀಡಿತ ತಾಲೂಕುಗಳಲ್ಲಿ ಗೋಶಾಲೆಗಳನ್ನು ತೆರೆದು ಸರಿಯಾದ ನಿರ್ವಹಣೆ ಮಾಡದೆ ಜೈಲಿನಲ್ಲಿ ಕೈದಿಗಳಿಗೆ ತೂಕದ ರೀತಿ ಊಟ ವಿತರಿಸುವಂತೆ ಹಸುಗಳಿಗೆ ಮೇವು ಒದಗಿಸುತ್ತಿದ್ದು ಇದರಿಂದ ಬೇಸಿಗೆಯ ಬಿಸಿಲಿನ ಬೇಗೆ ಹಾಗೂ ಹಸಿವಿನಿಂದ ಹಸುಗಳು ಸಾವನ್ನಪ್ಪುತ್ತಿವೆ ಇನ್ನು ಬುಡಕಟ್ಟು ಸಂಸ್ಕೃತಿಯಲ್ಲಿ ದೇವರ ಹಸುಗಳನ್ನು ಸಲಹುತ್ತಿರುವ ಗೋಪಾಲಕರು ಪಾವಗಡದ ತಮ್ಮ ಆಶ್ರಮದ ಬಳಿ ಬಂದು ನೋವು ತೋಡಿಕೊಳ್ಳುತ್ತಿದ್ದಾರೆ ಇಂತಹ ಸಂದಿಗ್ಧ ಪರಿಸ್ಥಿತಿ ಇದ್ದರು ಸಹ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ನೆಪ ಹೇಳಿ ನುಣುಚಿಕೊಳ್ಳುತ್ತಿರುವುದು ಸರಿಯಲ್ಲ ಹೀಗಾಗಿ ಕಳೆದ ಜನವರಿಯಿಂದಲೂ ಚಳ್ಳಕೆರೆ ಹಾಗೂ ಕೂಡ್ಲಿಗಿ ತಾಲೂಕಿನ 40 ಹಟ್ಟಿಗಳ ದೇವರ ಹಸುಗಳಿಗೆ ಇಲ್ಲಿಯವರೆಗೆ 360 ಟನ್ ನಷ್ಟು ಮೇವನ್ನು ಸುಧಾಮೂರ್ತಿಯವರ ಮೂರ್ತಿ ಫೌಂಡೇಶನ್ ಸಹಾಯ ಹಸ್ತದ ಸಲುವಾಗಿ ಆಶ್ರಮದಿಂದ ವಿತರಿಸಲಾಗಿದೆ ಸರ್ಕಾರ ಇಂತಹ ಬೇಜವಾಬ್ದಾರಿತನದಿಂದ ಹಸುಗಳನ್ನು ಕೊಲ್ಲಲು ಹೊರಟಿದೆ ಎಂದು ಆರೋಪಿಸಿದರು.

ಪ್ರಧಾನಿಗೆ ಪತ್ರ: ಬರಗಾಲದಿಂದ ತತ್ತರಿಸಿರುವ ಬಯಲು ಸೀಮೆ ಪ್ರದೇಶಗಳ ಸ್ಥಿತಿ-ಗತಿಗಳ ಬಗ್ಗೆ ಪ್ರಧಾನಮಂತ್ರಿಯವರಿಗೆ ನಾನು  ಪತ್ರ ಬರೆದಿದ್ದು ಪ್ರಧಾನಮಂತ್ರಿಯ ಕಚೇರಿಯಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೂಡಲೇ ಕ್ರಮ ತೆಗೆದುಕೊಂಡಿರುವ ಬಗ್ಗೆ ಉತ್ತರ ನೀಡುವಂತೆ ತಿಳಿಸಲಾಗಿದೆ ಆದರೆ ಅಧಿಕಾರಿಗಳು ಚುನಾವಣೆಯ ನೆಪವನ್ನು ಹೇಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತ್ಯೇಕ ಮೆವು ಬ್ಯಾಂಕ್ ಗೆ ಒತ್ತಾಯ: ಈ ವೇಳೆ ಮಾತನಾಡಿದ ಜಪಾನಂದ ಸ್ವಾಮೀಜಿ ದೇವರ ಹಸುಗಳು ಗೋಶಾಲೆಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ ಆದ್ದರಿಂದ ಪ್ರತ್ಯೇಕ ಮೇವು ಬ್ಯಾಂಕ್ ಸ್ಥಾಪಿಸಿ ಕಿಲಾರಿಗಳ ಜೀವನ ಮತ್ತು ಹಸುಗಳ ಜೀವ ರಕ್ಷಣೆ ಮಾಡಬೇಕಾಗಿದೆ ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಕಠಿಣ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಿಲಾರಿ ಪಾಲಯ್ಯ ಮಾತನಾಡಿ ಸ್ವಾಮೀಜಿಯವರ ಸಹಾಯ ಹಸ್ತದಿಂದ ದೇವರ ಹಸುಗಳಿಗೆ ಮೇವು ದೊರೆಯುತ್ತಿದೆ ಈಗಾಗಲೇ ಬಿಸಿಲಿನ ತಾಪಕ್ಕೆ 40ಕ್ಕೂ ಹೆಚ್ಚು ದೇವರ ಹಸುಗಳು ಸಾವನ್ನಪ್ಪಿವೆ ಇದರಿಂದ ನಮ್ಮ ಬುಡಕಟ್ಟು ಸಂಸ್ಕೃತಿ ನಶಿಸುವಂತಾಗುತ್ತದೆ ಗೋಶಾಲೆ ಸ್ಥಾಪಿಸಿರುವುದು ನಾವು ವಾಸಿಸುತ್ತಿರುವ ಹಟ್ಟಿಗಳಿಂದ ಸುಮಾರು ಹತ್ತು ಕಿಲೋಮೀಟರ್ ನಷ್ಟು ದೂರವಿದ್ದು ನಮಗೆ ಸರ್ಕಾರ ನೀಡುತ್ತಿರುವ ಮೇವು ತರಲು ಸಾಧ್ಯವಾಗುತ್ತಿಲ್ಲ ಸ್ವಾಮೀಜಿಯವರ ಕೃಪೆಯಿಂದ ಇಂದು ದೇವರ ಹಸುಗಳಿಗೆ ಮೇವು ಒದಗಿಸಲಾಗುತ್ತಿದೆ ಈಗಲಾದರೂ ಸರ್ಕಾರ ತಮ್ಮ ಕಡೆ ಗಮನಹರಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಸೇವಾಶ್ರಮದ ಸೇವಾಕರ್ತರಾದ ಸಿಪಿ ಮಹೇಶ್ ಸಿದ್ದೇಶ್ ಉಪನ್ಯಾಸಕ ಓಬಣ್ಣ ಸೇರಿದಂತೆ ಕಿಲಾರಿಗಳು ಉಪಸ್ಥಿತರಿದ್ದರು.

ರಾಷ್ಟ್ರೀಯ ರೈತ ದಿನಾಚರಣೆ ರೈತರನ್ನು ಕಡೆಗಣಿರುವ ಬಗ್ಗೆ ಜಿಲ್ಲಾ ಜನಸಂಪರ್ಕಸಭೆಯಲ್ಲಿ ಅಧಿಕಾರಿಗಳ ವಿರುದ್ದು ದೂರು ನೀಡಲಾಗುವುದು ರೈತ ಮುಖಂಡ ಕೆ.ಪಿ.ಭೂತಯ್ಯ.

ಚಳ್ಳಕೆರೆ ಡಿ23 ಡಿ.23 ರಂದು ರಾಷ್ಟ್ರೀಯ ರೈತರ ದಿನಾಚರಣೆ ಮಾಡದೆ ಕೃಷಿ ಇಲಾಖೆ ಹಾಗೂ ತಾಲೂಕು ಆಡಳಿತ ನಿರ್ಲಕ್ಷ ತೋರಿದ್ದಾರೆ ಎಂದ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನಿ ದಿ. ಚೌದರಿ ಚರಣಸಿಂಗ್‌ ಅವರ ಜಯಂತ್ಯುತ್ಸವ ದಿನವಾದ ಡಿ.23 ರಂದು ರಾಷ್ಟ್ರೀಯ ರೈತ ದಿನವಾಗಿ ಆಚರಿಸಲಾಗಿದೆ. ಆದರೆ ಕೃಷಿ ಇಲಾಖೆಯ ನಿರ್ಲಕ್ಷದಿಂದಾಗಿ ಡಿ.23ರಂದು ರೈತರ ದಿನಾಚರಣೆಯನ್ನು ಕಸಬಾ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯಲ್ಲಿ ರೈತರನ್ನು ಆಹ್ವಾನಿಸದೆ ಕೆಲವೇ ರೈತರನ್ನು ಕರೆದು ಕಾಟಾಚಾರಕ್ಕೆ ಆಚರಣೆ ಮಾಡಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಅಸಮದಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಜಿಲ್ಲಾಟ್ಟದ ಜನಸಂಪರ್ಕ ಸಭೆಯಲ್ಲಿ ರಾಷ್ಟ್ರೀಯ ರೈತ ದಿನಾರಣೆಯ ಬಗ್ಗೆ ದೂರು ನೀಡಲಾಗುವುದು ಎಂದು ಅಧಿಕಾರಿಗಳ ವಿರುದ್ದ ಕಿಡಿಕಾರಿದ್ದಾರೆ.

ಪತ್ರಕರ್ತರ ಹಾಗೂ ದೃಶ್ಯ ಮಾಧ್ಯಮದವರ ಪರ ಧ್ವನಿ ಎತ್ತಿದ ವಿಧಾನಪರಿಷತ್ ಸದಸ್ಯ ಎಂ.ಚಿದಾನಂದಗೌಡ


ಬೆಳಗಾವಿ
ಪತ್ರಕರ್ತರು ಹಾಗೂ ದೃಶ್ಯ ಮಾಧ್ಯಮದವರಿಗೆ ರಕ್ಷಣಾ ಕಾಯ್ದೆ ಜಾರಿಗೊಳಿಸಿ ಜೀವ ವಿಮಾ ಸೌಲಭ್ಯ ಕಲ್ಪಿಸಿ, ಉಚಿತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಸದಸ್ಯರಾದ ಚಿದಾನಂದ ಗೌಡ ಅವರು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಬುಧವಾರದಂದು ಸದನದ ಶೂನ್ಯ ವೇಳೆಯಲ್ಲಿ ವಿಧಾನಪರಿಷತ್ ಸದಸ್ಯ ಚಿದಾನಂದ ಗೌಡ ಅವರು ಪತ್ರಕರ್ತರು ಹಾಗೂ ದೃಶ್ಯ ಮಾಧ್ಯಮದವರ ಪರವಾಗಿ ಧ್ವನಿ ಎತ್ತಿ ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾರಂಗಕ್ಕೆ ವಿಶೇಷ ಸ್ಥಾನವಿದೆ, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು ವ್ಯವಸ್ಥೆಯ ವೈಫಲ್ಯಗಳನ್ನು ಒಳಿತನ್ನು ಜನತೆಯ ಮುಂದೆ ಇಡುವಲ್ಲಿ ಪತ್ರಿಕಾ ರಂಗ ಬಹಳ ಪ್ರಮುಖ ಪಾತ್ರ ವಹಿಸುತ್ತದೆ ವಾಸ್ತವವನ್ನು ಜನತೆಗೆ ಮುಂದಿಡುವ ಸಂದರ್ಭದಲ್ಲಿ ಪತ್ರಿಕಾ ಮಾಧ್ಯಮ ಹಾಗೂ ದೃಶ್ಯ ಮಾಧ್ಯಮ ವರದಿಗಾರರಿಗೆ ಜೀವಕ್ಕೆ ಆಪತ್ತು ತರುವ ಸನ್ನಿವೇಶಗಳು ನಡೆಯುತ್ತಿರುತ್ತವೆ.
ಸರಕಾರ ಹಾಗೂ ಸಾರ್ವಜನಿಕರ ಮಧ್ಯ ಸಂಪರ್ಕ ಸೇತುವೆಯಾಗಿ ಪ್ರಾಣದ ಹಂಗನ್ನು ತೊರೆದು ನಿಸ್ವಾರ್ಥ ಸೇವೆಯಲ್ಲಿ ತೊಡಗಿರುವ ಪತ್ರಿಕಾ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ವೃತ್ತಿ ಬದುಕಿನಲ್ಲಿ ಯಾವುದೇ ರೀತಿಯ ರಕ್ಷಣೆ ಇಲ್ಲದಂತಾಗಿದೆ ಇದರಿಂದಾಗಿ ಸಮಾಜದಲ್ಲಿನ ವಾಸ್ತವ ಪರಿಸ್ಥಿತಿಯನ್ನು ವರದಿ ಮಾಡಲು ಪತ್ರಕರ್ತರು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.
ಆದ್ದರಿಂದ ಕೂಡಲೇ ರಾಜ್ಯದ ಸಮಸ್ತ ಪತ್ರಕರ್ತ ಹಾಗೂ ದೃಶ್ಯ ಮಾಧ್ಯಮ ಪ್ರತಿನಿಧಿಗಳಿಗೆ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಿ ಪ್ರತಿಯೊಬ್ಬ ವರದಿಗಾರರಿಗೂ ಜೀವ ವಿಮಾ ಸೌಲಭ್ಯ ಕಲ್ಪಿಸಿ ರಾಜ್ಯಾದ್ಯಂತ ಸಂಚರಿಸಲು ಉಚಿತ ಬಸ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಪತ್ರಕರ್ತರು ಹಾಗೂ ದೃಶ್ಯಮಾಧ್ಯಮ ಪ್ರತಿನಿಧಿಗಳಿಗೆ ನ್ಯಾಯ ಒದಗಿಸಬೇಕೆಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.

ಜಿಲ್ಲಾ ಸೂಪರ್ ಡೆಂಟ್ ಆಫ್ ಪೋಲೀಸ್ ಅಧಿಕಾರಿ‌ಧರ್ಮೇಂದ್ರಕುಮಾರ್ ಮೀನಾರವರಿಗೆ ರೈತ ಮುಖಂಡ ಕಸವನಹಳ್ಳಿ‌ರಮೇಶ್ ಅಭಿನಂದನೆ.


ಚಿತ್ರದುರ್ಗ.
ಚಿತ್ರದುರ್ಗ ಜಿಲ್ಲೆ, ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಪ್ರಾರಂಭ ಮಾಡಿ ಅರಣ್ಯ ಸಂಪತ್ತುಗಳ ಲೂಟಿ ಮಾಡುತ್ತಿದ್ದ ಕಳ್ಳರನ್ನು ಚಿತ್ರದುರ್ಗ ಜಿಲ್ಲೆ ಸೂಪರ್ ಡೆಂಟ್ ಆಫ್ ಪೋಲೀಸ್ ಧರ್ಮೇಂದ್ರ ಕುಮಾರ್ ಮೀನಾ ರವರು ಬಂಧಿಸಿದ್ದು, ಇವರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ಪ್ರಶಂಸಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಅತಿಹೆಚ್ಚಿನ ಸಂಖ್ಯೆಯ ಶ್ರೀಗಂಧ ಬೆಳೆಗಾರರಿದ್ದು, ತಮ್ಮ ತಮ್ಮ ಜಮೀನುಗಳಲ್ಲಿ ಕೃಷಿಕರು ಯಥೇಚ್ಛವಾಗಿ ಶ್ರೀಗಂಧ ಸಸಿಗಳನ್ನು ಬೆಳೆಸುತ್ತಿದ್ದು, ಅದರ ರಕ್ಷಣೆಯೇ ರೈತರಿಗೆ ಒಂದು ದೊಡ್ಡ ಸವಾಲ್ ಆಗಿದೆ. ಪ್ರತಿವಾರ ಅಥವಾ ಪ್ರತಿ 15 ದಿನಕ್ಕೊಮ್ಮೆ ಚಿತ್ರದುರ್ಗ ಜಿಲ್ಲೆಯಲ್ಲಿ ಶ್ರೀಗಂಧ ಮರಗಳನ್ನು ಕಡಿಯುವ ಕಳ್ಳರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ.


ಅಲ್ಲದೆ ಸರ್ಕಾರಿ ಅರಣ್ಯಗಳಲ್ಲಿ ಸಹ ಕಳ್ಳತನವಾಗುತ್ತಿದೆ ಇದರಲ್ಲಿ ದೂರು ಕೊಡುವವರ ಸಂಖ್ಯೆ ತುಂಬಾ ಕಡಿಮೆ. ತಾವುಗಳು ಈಗ ಹಿರಿಯೂರು ನಗರದ ಬಬ್ಬೂರು ಗ್ರಾಮದಲ್ಲಿ ಇಬ್ಬರು ಕಳ್ಳರನ್ನು ಹಾಗೂ ಅಪಾರ ಪ್ರಮಾಣದ ಶ್ರೀಗಂಧದ ತುಂಡುಗಳು ರಕ್ತ ಚಂದನದ ತುಂಡುಗಳು ಆನೆದಂತ ಚಿಪ್ಪುಗಳು ವಶಪಡಿಸಿಕೊಂಡಿರುವುದು ಈ ನಿಟ್ಟಿನಲ್ಲಿ ಪೋಲೀಸ್ ಇಲಾಖೆ ಒಂದು ಮಹತ್ವದ ಹೆಜ್ಜೆ ಇಟ್ಟಂತಾಗಿದೆ ಎಂದರಲ್ಲದೆ,
ತಾವುಗಳು ಶ್ರೀಗಂಧ ಬೆಳೆಯುವ ರೈತರನ್ನು ಹಾಗೂ ಸರ್ಕಾರಿ ಅರಣ್ಯದಲ್ಲಿರುವ ಶ್ರೀಗಂಧ ಹಾಗೂ ಇನ್ನಿತರೆ ಅಮೂಲ್ಯವಾದ ವನಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಕಳ್ಳರನ್ನು ಬಂಧಿಸಿರುವುದು ರೈತರಲ್ಲಿ ಒಂದು ರೀತಿಯ ನಿರಾಳಬಾವ ಮೂಡಿಸಿದೆ. ಜಿಲ್ಲೆಯ ಆರು ತಾಲೂಕುಗಳಲ್ಲಿ ಲಕ್ಷಾಂತರ ಸಂಖ್ಯೆಯ ಶ್ರೀಗಂಧವನ್ನು ರೈತರು ತಮ್ಮ ಮಕ್ಕಳಿಗಿಂತ ಹೆಚ್ಚಿನ ಪ್ರಾಧಾನ್ಯತೆಯನ್ನು ಕೊಟ್ಟು ಬೆಳೆಸುತ್ತಿದ್ದಾರೆ ಇದರಿಂದ ರಾಜ್ಯ ರಾಷ್ಟ್ರಕ್ಕೆ ಒಳ್ಳೆಯ ಹೆಸರು ಮತ್ತು ಆದಾಯ ತಂದುಕೊಡುತ್ತದೆ ಎಂದರು.
ಕರ್ನಾಟಕ ಶ್ರೀಗಂಧದ ಬೀಡು ಎಂದು ಮತ್ತೊಮ್ಮೆ ಹೆಸರಾಗಬೇಕೆಂದು ಬಯಸುತ್ತಾ ನೀವು ಶ್ರೀಗಂಧ ಕಳ್ಳರನ್ನು ಮೂಲವತ್ಪಾಟನೆ ಮಾಡಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತಾ, ಚಿತ್ರದುರ್ಗ ಜಿಲ್ಲೆಯ ಶ್ರೀಗಂಧ ಬೆಳೆಗಾರರ ಸಂಘ ಹಾಗೂ ಅಖಿಲ ಕರ್ನಾಟಕ ಶ್ರೀಗಂಧ ಹಾಗೂ ವನಕೃಷಿ ಬೆಳಗಾರರ ಸಂಘದಿಂದ ಜಿಲ್ಲಾ ಶ್ರೀಗಂಧ ಬೆಳೆಗಾರರ ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ರೈತರ ಪರವಾಗಿ ತಮಗೆ ಅಭಿನಂದನೆಗಳು ಎಂದರಲ್ಲದೆ,
ನಮ್ಮ ರಾಜ್ಯ ಶ್ರೀಗಂಧ ಬೆಳೆಗಾರರ ಸಂಘದ ಅಧ್ಯಕ್ಷರಾದ ಶ್ರೀಯುತ ಅಮರನಾರಾಯಣ್ ಅವರು ಮತ್ತು ಪದಾಧಿಕಾರಿಗಳು ಅವಿರತವಾಗಿ ಶ್ರೀಗಂಧ ಬೆಳೆಯ ರಕ್ಷಣೆ ಬಗ್ಗೆ ಹೋರಾಡುತ್ತಿದ್ದಾರೆ. ಚಿತ್ರಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಯಾದ ಶ್ರೀಯುತ ಕಾಂತರಾಜ್ ಅವರಿಗೂ ಅವರ ಸಿಬ್ಬಂದಿ ವರ್ಗದವರಿಗೂ ತಾಲ್ಲೂಕಿನ ರೈತರ ಪರವಾಗಿ ಧನ್ಯವಾದಗಳು ಎಂದರಲ್ಲದೆ, ಇದನ್ನು ಇಲ್ಲಿಗೆ ಬಿಡದೆ ಶ್ರೀಗಂಧ ಕಡಿಯುವ ಕಳ್ಳರು ಅದನ್ನು ಖರೀದಿ ಮಾಡುವ ಕದೀಮರು ಹಾಗೂ ಕಾರ್ಖಾನೆಯವರನ್ನು ಎಡೆಮುರಿ ಕಟ್ಟಬೇಕು ಎಂಬುದಾಗಿ ಈ ಮೂಲಕ ಒತ್ತಾಯಿಸಿದ್ದಾರೆ.

ಚಳ್ಳಕೆರೆ ಕ್ಷೇತ್ರದ ಶಾಸಕರ ಭವನ ಜ್ಞಾನ ಬಂಡರವಾಗಿದ್ದು ಇದು ರಾಜ್ಯಕ್ಕೆ ಮಾದರಿಯಾಗಿದೆ ತರಳು ಬಾಳು ಜಗದ್ದುರು ಬೃಹನ್ಮಠದ ಶ್ರೀಶಿವಕುಮಾರಸ್ವಾಮೀಜಿ .


ಸೆ.27 ಚಳ್ಳಕೆರೆ ಶಾಸಕರ ಭವನ ರಾಜ್ಯಕ್ಕೆ ಮಾದರಿಯಾಗಿದ್ದು ಇದರ ಒಂದು ಸಂಪೂರ್ಣ ವೀಡಿಯೊ ಮಾಡಿಕೊಡಿ ನಾನು ರಾಜ್ಯಕ್ಕೆ ಪ್ರಚಾರ ಮಾಡಲಾಗುವುದು ಎಂದು ಸಿರಿಗೆರೆ ಮಠದ ತರಳು ಬಾಳು ಜಗದ್ದುರು ಬೃಹನ್ಮಠದ ಶ್ರೀಶಿವಕುಮಾರಸ್ವಾಮೀಜಿ ಶ್ಲಾಘಿಸಿದರು.


ಚಳ್ಳಕೆರೆ ನಗರದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ಸಂದರ್ಭದಲ್ಲಿ ಶ್ರೀಗಳು ಶಾಸಕರ ಭವನಕ್ಕೆಭೇಟಿ ನೀಡಿ ವೀಕ್ಷಣೆ ಮಾಡುವ ಮೂಲಕ ಮೆಚ್ಚಿಗೆ ವ್ಯಕ್ತ ಪಡಿಸಿದರು.
ಶಾಸಕರ ಭವನದಲ್ಲಿ ಸ್ವಾತ್ರಂತ್ರ್ಯ ಫೂರ್ವದ ನಂತರ ರಾಷ್ಟ್ರಪತಿ, ರಾಜ್ಯಪಾಲರು, ಪ್ರಧಾನ ಮಂತ್ರಿಗಳ, ರಾಜ್ಯದ ಮುಖ್ಯಮಂತ್ರಿಗಳ, ಚಿತ್ರದುರ್ಗ ಕ್ಷೇತ್ರದ ಸಂಸದರ , ಕ್ಷೇತ್ರದ ಶಾಸಕರ , ಬುದ್ದ, ಬಸವ,ಅಂಬೇಡ್ಕರ್ ಸೇರಿದಂತೆ ರಾಷ್ಟ್ರೀಯ ಹಬ್ಬಗಳ ಆಚರಣೆಯ ಮಹಾನ್ ಸಂತರ ಭಾವ ಚಿತ್ರ ಹಾಗೂ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಪೋಟೊಗಳನ್ನು ಹಾಕಿರುವುದು ನೋಡಿದರೆ ಇಲ್ಲಿ ಜಾತಿ, ಧರ್ಮ, ಪಕ್ಷ ಬೇದ ಮರೆತು ಸರ್ವ ಜನಾಂಗದ ತೋಟವಿದ್ದಂತಿದ

ಶಾಸಕರ ಭವನಕ್ಕೆಬರುವ ಸಾರ್ವಜನಿಕರಿಗೆ ಅನ್ನ ಸಾಂಭಾರ್, ಬಿಸಿ ಬಿಸಿ ಕಾಫೀ, ಓದಲು ಎಲ್ಲಾ ದಿನಪತ್ರಿಕೆಗಳು, ವಿವಿಧ ಪುಸ್ತಗಳನ್ನು ಸಂಗ್ರಹಿ ಗ್ರಂಥಾಲಯ ಮಾಡಿರುವುದು ವಿಶಾಲವಾದ ಸಭಾಂಗಣ ನಿರ್ಮಿಸಿರುವುದು ಇದು ರಾಜಕ್ಕೆ ಮಾದರಿಯಾಗಿದೆ ಎಂದು ಶಾಸಕರ ಭವನದಲ್ಲಿ ಹಾಕಿರುವ ಪೋಟೊಗಳನ್ನು ವೀಕ್ಷಿಸಿ ಶಾಸಕ ಟಿ.ರಘುಮೂರ್ತಿಗೆ ಮೆಚ್ಚಿಗೆ ವ್ಯಕ್ತಪಡಿಸಿದರು.
ಈಸಂದರ್ಭದಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ ಸಹ ಜ್ಞಾನ ಬಂಡರ ತುಂಭಿದ ಶಾಸಕರ ಭವನ ರಾಜ್ಯದಲ್ಲಿ ಇದೇ ಪ್ರಥಮ ಎಂದ ಬಣ್ಣಿಸಿದರು.

ತಾಪಂ ಇಒ ಹೊನ್ನಯ್ಯ ಶ್ರೀಗಳಿಗೆ ಸನ್ಮಾನಿಸಿಲು ಬಂದಾಗ ನೀನು ಹೊನ್ನಯ್ಯ ಅಲ್ವಾ ಎಂದು ಶ್ರೀಗಳು ಪ್ರಶ್ನಿಸಿದಾಗ ಹೌದು ಗುರುಗಳೆ ನೀವು 362 ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ನೆರವಿಗೆ ಬಂದವರು. ಎಂದು ನಮಿಸಿದಾಗ.

ಶ್ರೀಗಳು ಮಾತನಾಡಿ ಅಧಿಕಾರಗಳು ಸರಕಾರಕ್ಕೆ ನೀಡಿದ ತಪ್ಪು ಮಾಹಿತಿಯಿಂದ 2011 ರ ಬ್ಯಾಚ್ ನಲ್ಲಿ ಕೆಎಎಸ್ ಮಾಡಿಕೊಂಡು 362 ಜನರು ಬೀದಿಗೆ ಬೀಳುವಂತಾಗಿತ್ತು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮಾಹಿತಿ ನೀಡಿ ಅಧಿಕಾರಿಗಳ ತಪ್ಪು ಮಾಹಿತಿಯಿಂದ 362 ಜನರು ಬೀದಿಗೆ ಬೀಳುವಂತಾಗಿದೆ ಕೂಡಲೆ ಪರಿಶೀಳನೆ ನಡೆಸಿ ನೌಕರಿ ನೀಡಬೇಕು ನಿಮ್ಮಿಂದ ಸಾಧ್ಯವಾಗದಿದ್ದರೆ ಕೇಂದ್ರ ಸರಕಾರದಿಂದ ಮಾಡಿಸುತ್ತೇನೆ ಎಂದುಹೇಳಿದ್ದೆ ಯಡೀಯೂರಪ್ಪ ಅಧಿಕಾರದಿಂದ ಕೆಳಗಿಳಿದಾಗ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಪರಿಶೀಲನೆ ನಡೆಸಿ 362 ಜನರಿಗೆ ನೌಕರಿ ಆದೇಶ ನೀಡಿದ್ದಾ ರೆ ಎಂದು ಮೆಲುಕು ಹಾಕಿದರು.


ಶಾಸಕ ಟಿ.ರಘುಮೂರ್ತಿ, ನಗರಸಭೆ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

You cannot copy content of this page