ಮಾದಿಗ ಸಮಾಜವನ್ನು ಕಡೆಗಣಿಸಿದ ಕಾಂಗ್ರೆಸ್ ಸೋಲಿಸಿ- ಉತ್ತಮ ಸ್ಥಾನ ಮಾನ ಹಾಗೂ ಒಳ ಮೀಸಲಾತಿ ಹೆಚ್ಚಿಸಿದ ಬಿಜೆಪಿಯನ್ನು ಗೆಲ್ಲಿಸಿಮಾದಿಗ ದಂಡೋರಾ ಸಂಸ್ಥಾಪಕ ಮಂದಕೃಷ್ಣ ಮಾದಿಗ ಕರೆ ನೀಡಿದರು.

by | 17/04/24 | ಲೋಕಸಭಾ ಚುನಾವಣೆ-2024


ಚಳ್ಳಕೆರೆ ಜನಧ್ವನಿ ವಾರ್ತೆ ಏ 17 ಒಳ ಮೀಸಲಾತಿ ಕಲ್ಪಿಸಬೇಕೆಂಬ ಮಾದಿಗರ ದಶಕಗಳ ಬೇಡಿಕೆ ಬಿಜೆಪಿ ಈಡೇರಿಸಿದೆ ಎಂದು ಮಾದಿಗ ದಂಡೋರಾ ಸಂಸ್ಥಾಪಕ ಮಂದಕೃಷ್ಣ ಮಾದಿಗ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು.
ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮೈತ್ರಿ ಪಕ್ಷದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ಗೋವಿಂದಕಾರಜೋಳ ಪರ ಮಾದಿಗ ಸಮುದಾಯದ ಮುಖಂಡರು ಆಯೋಜಿಸಿದ್ದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಮಾದಿಗ ಜನರ ಬದುಕಿನಲ್ಲಿ ಗುಣಾತ್ಮಕ ಬದಲಾವಣೆಗೆ ಬಿಜೆಪಿ ಶ್ರಮಿಸುತ್ತಿದೆ. ಮಾದಿಗ ಸಮಾಜದ ಅಭಿವೃದ್ಧಿಗಾಗಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಬಿಜೆಪಿಯನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಬಿಜೆಪಿ ಪಕ್ಷದವತಿಯಿಂದ ದಲಿತ ನಾಯಕ ಗೋವಿಂದಕಾರಜೋಳ ಇವರಿಗೆ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ ಸ್ಥಾನ ನೀಡಿದೆ. ಬಿಜೆಪಿ ಮುಸ್ಲಿಂ ವಿರೋಧಿ ಎಂದು ಕಾಂಗ್ರೆಸ್ ವಿರೋಧಿಸುತ್ತಿದೆ ಆದರೆ ಮುಸ್ಲಿಂ ಸಮುದಾಯ ಡಾ.ಎ.ಜೆ. ಅಬ್ದುಲ್ ಕಲಾಂ ಇವರನ್ನು ರಾಷ್ಟ್ರ ಪತಿಯನ್ನು ಮಾಡಿದೆ , ದಲಿತ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಮಾಡಿದೆ ಬಿಜೆಪಿ ಕೇಂದ್ರ ಹಾಗೂ ರಾಜ್ಯ ಸರಕಾರದ ಅವಧಿಯಲ್ಲಿ ಮಾದಿಗ ಸಮುದಾಯದವರಿಗೆ ಸಚಿವ ಸ್ಥಾನ ನೀಡಿ ಉತ್ತಮ ಸ್ಥಾನ ನೀಡಿದೆ.
ಕಾಂಗ್ರೆಸ್ ಸರಕಾರದಲ್ಲಿ ಡಾ,ಜಿ,ಪರಮೇಶ್ವರ ಇವರಿಗೆ ಮುಖ್ಯ ಮಂತ್ರಿ ಅಥವಾ ಉಪಮುಖ್ಯ ಸ್ಥಾನ ನೀಡಿಲ್ಲ, ಮಲ್ಲಿಕಾರ್ಜುನ ಖರ್ಗೆ ಇವರಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಿದೆ ಮಾದಿಗ ಸಮುದಾಯವನ್ನು ಕಾಂಗ್ರೆಸ್ ಕಡೆಗಣಿಸಿದೆ. ಒಳ ಮೀಸಲಾತಿ ಕಲ್ಪಿಸುವ ಮೂಲಕ ಅಭಿವೃದ್ಧಿಯಿಂದ ವಂಚಿತ ಸಮಾಜದ ಸರ್ವಾಂಗೀಣ ಪ್ರಗತಿಗೆ ಬಿಜೆಪಿ ಮುನ್ನುಡಿ ಬರೆದಿದೆ. ಆದರೆ, ಶೋಷಿತರನ್ನು ಕೇವಲ ಮತ ಬ್ಯಾಂಕ್ ಮಾಡಿಕೊಂಡಿದ್ದ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಬೇಕು. ಕೇಂದ್ರ ಸಚಿವ ಸಂಪುಟದಲ್ಲೂ ದಲಿತರಿಗೆ ಸೂಕ್ತ ಸ್ಥಾನ ಬಿಜೆಪಿ ಒದಗಿಸಿದೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಗೆಲ್ಲಿಸಿದರೆ ಗೋವಿಂದ ಕಾರಜೋಳ ಕೇಂದ್ರ ಸಚಿವರಾಗುವುದು ಗ್ಯಾರೆಂಟಿ ಈಗಾಗಲೆ ಜಿಪಿಪಿ ನಾಯಕರು ಘೋಷಣೆ ಮಾಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಕಿಡಿಕಾರಿದ ಮಂದ ಕೃಷ್ಣ ಮಾದಿಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಯಸ್ಸು ಮತ್ತು ಅನುಭವವಾಗಿದೆ ಆದರೆ ಉಪಯೋಗವಿಲ್ಲ ಮಾದಿಗ ಸಮುದಾಯಕ್ಕೆ ಮೀಸಲಾತಿ ದೊರೆಯುವುದನ್ನು ಸಹಿಸಲಿಲ್ಲ ಪ್ರತಿ ಬಾರಿಯೂ ಅಡ್ಡಿಪಡಿಸುತ್ತಲೆ ಬಂದಿದ್ದಾರೆ. ವಾಜಪೇಯಿ ನೇತೃತ್ವದ ಸರ್ಕಾರ ಮಾದಿಗ ಸಮುದಾಯಕ್ಕೆ ಮೀಸಲಾತಿಯನ್ನು ನೀಡಿತ್ತು ಆದರೆ 2004 ರಿಂದ 2014ರ ವರೆಗೆ ಇದ್ದ ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯಕ್ಕೆ ಮೀಸಲಾತಿಯನ್ನು ನೀಡಲು ಮಲ್ಲಿಕಾರ್ಜುನ ಖರ್ಗೆ ಅವರೇ ಅಡ್ಡಿಪಡಿಸಿದ್ದರು ಕೇಂದ್ರದಲ್ಲಿ ಮಂತ್ರಿ ಸ್ಥಾನದಲ್ಲಿದ್ದರೂ ಸಹ ಮಾದಿಗ ಸಮುದಾಯಕ್ಕೆ ಯಾವುದೇ ಪ್ರಯೋಜನವಾಗಲಿಲ್ಲ ಇದರಿಂದಾಗಿ ಮಾದಿಗ ಸಮುದಾಯ ಇಂದಿಗೂ ಸಹ ಮೀಸಲಾತಿಗಾಗಿ ಹೋರಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಹೈದರಾಬಾದಿನಲ್ಲಿ ನಡೆದ ಮಾದಿಗ ಸಮುದಾಯದ ಸಮಾವೇಶಕ್ಕೆ ಬಂದು ಮೀಸಲಾತಿಯ ಭರವಸೆ ನೀಡಿದರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಮ್ಮ ಸಮುದಾಯಕ್ಕೆ ಆರು ಸ್ಥಾನ ನೀಡಿದರೆ ಬಿಜೆಪಿ 12 ಸ್ಥಾನಗಳನ್ನು ನೀಡಿತು ಇದರಿಂದಲೇ ಗೊತ್ತಾಗುತ್ತದೆ ಕಾಂಗ್ರೆಸ್ ಪಕ್ಷ ಮಾದಿಗ ಸಮುದಾಯವನ್ನು ಯಾವ ಮಟ್ಟಿಗೆ ನೋಡಿಕೊಳ್ಳುತ್ತಿದೆ ಎಂಬುದನ್ನು ತಿಳಿಯಬೇಕಾಗಿದೆ ಕಳೆದ ಬಾರಿಯ ಬಿಜೆಪಿ ಸರ್ಕಾರದ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ 17% ಮೀಸಲಾತಿಯನ್ನು ಮಾದಿಗ ಸಮುದಾಯಕ್ಕೆ ನೀಡಿದೆ ಸದಾಶಿವ ಆಯೋಗವನ್ನು ರಚಿಸಿದ ಕಾಂಗ್ರೆಸ್ ಸರ್ಕಾರ ಅದರ ವರದಿಯನ್ನೇ ಒಪ್ಪಲು ಸಿದ್ಧವಿಲ್ಲ ಇಂತಹ ಕಾಂಗ್ರೆಸ್ ಪಕ್ಷಕ್ಕೆ ಮಾದಿಗ ಸಮುದಾಯವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತ ನೀಡುವ ಬದಲು ಬಿಜೆಪಿಗೆ ಮತ ನೀಡಿದರೆ ಪ್ರಧಾನ ನರೇಂದ್ರ ಮೋದಿಯವರ ಸರ್ಕಾರ ಆಡಳಿತಕ್ಕೆ ಬಂದು ಮೀಸಲಾತಿ ಕಲ್ಪಿಸುತ್ತದೆ ಎಂದರು. 
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಜೆಡಿಎಸ್ ಮುಖಂಡರಾದ ಎಂ.ರವೀಶ್, ಜೆಡಿಎಸ್ ತಾಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಆನಂದಪ್ಪ ,ಕರಿಕೆರೆತಿಪ್ಪೇಸ್ವಾಮಿ, ಬಿಜೆಪಿ ಮುಂಡರಾದ ಅನಿಲ್ ಕುಮಾರ್,ಕೆ.ಟಿ,ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕ ಲೋಕಸಭಾ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಮತಯಾಚನೆ ಮಾಡಿದರಲ್ಲದೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಅಕ್ರೋಶಹೊರಹಾಕಿದ್ದಾರೆ. ರಾಮದಾಸ್ , ಜಯಪಾಲಯ್ಯ, ಮಂಜುನಾಥ್ ,ಇಂದ್ರೇಶ್ ,.ವಿ ವೈ ಪ್ರಮೋದ್, , ನರಸಿಂಹಪ್ಪ ರವಿಕುಮಾರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮಾದಿಗ ಸಮಾಜದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page