ಮಾನವನ ಬದುಕು ಕೂಡ ಸುಂದರವಾರವಾದ ಸಾಹಿತ್ಯವಿದ್ದಂತೆ, ಬದುಕನ್ನು ಸಾಹಿತ್ಯದಂತೆ ಸುಂದರವಾಗಿ ಕಟ್ಟಿಕೊಳ್ಳಬೇಕು ಎಂದು ಸಾಹಿತಿ ತಿಪ್ಪಣ್ಣ ಮರಿಕುಂಟೆ

by | 21/02/23 | ಸಾಂಸ್ಕೃತಿಕ

  • ಚಳ್ಳಕೆರೆ ಜನಧ್ವನಿ ವಾರ್ತೆ ಫೆ.21
    ಮಾನವನ ಬದುಕು ಕೂಡ ಸುಂದರವಾರವಾದ ಸಾಹಿತ್ಯವಿದ್ದಂತೆ, ಬದುಕನ್ನು ಸಾಹಿತ್ಯದಂತೆ ಸುಂದರವಾಗಿ ಕಟ್ಟಿಕೊಳ್ಳಬೇಕು ಎಂದು ಸಾಹಿತಿ ತಿಪ್ಪಣ್ಣ ಮರಿಕುಂಟೆ.
    ತಾಲ್ಲೂಕಿನ ದೇವರಮರಿಕುಂಟೆ ಗ್ರಾಮದಲ್ಲಿ ಗ್ರಾಮೀಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ನೆನಪು ಮಾಸಿಕ ಕಾರ್ಯಕ್ರಮದಡಿ ಕೃಷಿ ಸಾಹಿತ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಗ್ರಾಮೀಣ ಭಾಗದ ರೈತರಿಗೆ ಸಾಹಿತ್ಯದ ಜೊತೆಯಲ್ಲಿ ಕೃಷಿ ಚಟುವಟಿಕೆಗಳ ಕುರಿತು ಮಾಹಿತಿ ನೀಡುವ ಸಲುವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರೈತರು ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ. ಮಾಹಿತಿ ಪಡೆದ ರೈತರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.
    ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶ ವಿರೂಪಾಕ್ಷಪ್ಪ ಮಾತನಾಡಿ ತಾಲ್ಲೂಕಿನಲ್ಲಿ ವಾಣಿಜ್ಯ ಬೆಳೆಗಳು ಬೆಳೆಯು ಯೋಗ್ಯವಾದ ಭೂಮಿಯಾಗಿರುವುದರಿಂದ ಕಾಳು ಮೆಣಸು, ಗೋಡಂಭಿ, ದ್ರಾಕ್ಷಿ, ಡ್ರಾಗನ್ ನಂತಹ ಬೆಳೆಗಳನ್ನು ಬೆಳೆಯಬಹುದು. ಇದಕ್ಕೆ ಇಲಾಖೆಯಿಂದ ಉತ್ತೇಜ ನೀಡಲಾಗುವುದು ಎಂದು ರೈತರಿಗೆ ಕಿವಿಮಾತು ಹೇಳಿದರು.
    ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಆಶೋಕ್ ಮಾತನಾಡಿ ರೈತರು ಯಾವುದೇ ಬೆಳೆ ಬೆಳೆಯಬೇಕು. ಅದು ಉತ್ತಮ ಇಳುವರಿ ಬರಬೇಕು ಎಂದರೆ ಸಾವಯವ ಗೊಬ್ಬರವನ್ನು ಬಳಸಬೇಕು. ಸಿಕ್ಕ-ಸಿಕ್ಕ ರಾಸಾಯನಿಕ ಗೊಬ್ಬರುಗಳು ಬೆಳೆಗಳಿಗೆ ಹಾಕಿದರೆ ಅ ಬೆಳೆ ಉತ್ತಮವಾದ ಇಳುವರಿ ಬರುವುದುದಿಲ್ಲ ಎಂದು ಹೇಳಿದರು.
    ರೈತರು ಬೆಳೆಗಳಿಗೆ ರಾಸಾಯನಿಕ ಗೊಬ್ಬರುಗಳನ್ನು ಹಾಕುವಾಗ ಇಲಾಖೆಯಿಂದ ಮಾಹಿತಿ ಪಡೆದು ಇಲಾಖೆ ಶಿಪಾರಸ್ಸು, ಸೂಚಿಸುವ ಗೊಬ್ಬರವನ್ನು ಹಾಕಬೇಕು. ಅಕ್ಕಪಕ್ಕ ತೋಟಗಳ ರೈತರು ರಾಸಾಯನಿಕ ಗೊಬ್ಬರಗಳನ್ನು ಹಾಕಿದ್ದಾರೆಂದು ಸಿಕ್ಕ-ಸಿಕ್ಕ ಗೊಬ್ಬರಗಳನ್ನು ಹಾಕಿ ಬೆಳೆಗಳನ್ನು ಹಾಳು ಮಾಡಿಕೊಳ್ಳಬಾರದು ಎಂದು ಹೇಳಿದರು.
    ಈ ವೇಳೆ ರೇಷ್ಮೆ ಇಲಾಖೆ ಸಹಾಯಕ ನಿರ್ದೇಶ ಕೆಂಜೋಚಿರಾವ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷಿö್ಮÃದೇವಿ, ಪಿಡಿಓ ಶಶಿಕಲಾ, ಪ್ರಗತಿಪರ ರೈತ ದಯಾನಂದಮೂರ್ತಿ, ರೈತರಾದ ನರಸಿಂಹಪ್ಪ, ತಿಪ್ಪೇಸ್ವಾಮಿ, ಎನ್.ಟಿ.ಓಬಣ್ಣ ಸೇರಿದಂತೆ ಇತರರಿದ್ದರು.

  • Latest News >>

    ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

    ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

    ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

    ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

    ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

    ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

    ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

    ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

    ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

    ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

    ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

    ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

    ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

    ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

    ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
    ವಿಶ್ಲೇಷಣೆ ಬೇಕು
    ನಮಗೆ ನಿಮ್ಮಂತಹ ಓದುಗರು ಬೇಕು
    ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

    0 Comments

    Submit a Comment

    Your email address will not be published. Required fields are marked *

    You cannot copy content of this page