ಮಾರಣಾಂತಿಕ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು.

by | 18/11/23 | ಕ್ರೈಂ

.
ಮಾರಣಾಂತಿಕ ಹಲ್ಲೆಗೊಳಗಾಗಿ ಚಿಕಿತ್ಸೆ ಫಲಿಸದೆ ಮೃತ ಪಟ್ಟ ಈರಣ್ಣ
ಚಳ್ಳಕೆರೆ ನ18. ದೇವರ ಪೂಜೆ ವಿಚಾರದಲ್ಲಿ ನಡೆದ ಮಾರಣಾಂತಿಕ ಹಲ್ಲೆಗೊಳಗಾದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ರಂಗನಾಥಪುರ(ಯಳವರಹಟ್ಟಿ)ಗ್ರಾಮದಲ್ಲಿ
ದೇವಸ್ಥಾನದ ಪೂಜೆ ವಿಚಾರದಲ್ಲಿ ಹಳೆಯ
ದ್ವೇಷದಿಂದ ದಿನಾಂಕ :03-10-2023 ರಂದು ಮಧ್ಯಾಹ್ನ 1 :00 ಗಂಟೆ ಸಮಯದಲ್ಲಿ ಗ್ರಾಮ ಬೆಳೆಗೆರೆ
ರಂಗನಾಥಪುರದಲಿ, ಮಾರಮ್ಮನ ದೇವಸ್ಥಾನದ ಮುಂದೆ ಮಾರಮ್ಮನ ಉತ್ಸವ ನೋಡಿಕೊಂಡು ನಿಂತಿರುವಾಗ ಏಕಾಏಕಿಯಾಗಿ ತಿಮ್ಮಣ . ದಾಸಯ್ಯ.ವೆಂಕಟೇಶ ನಾಲ್ಕು ಜನರು ಅವಾಚ್ಯಶಬ್ದಗಳಿಂದ ಬೈದಾಡುತ್ತ ಬಂದು ಅಲೆ ಇದ್ದ
ಕಟ್ಟಿಗೆಗಳನ್ನು ತೆಗೆದುಕೊಂಡು
ಮೈಕೈಗೆ ಹಾಗೂ ತಲೆಗೆ ಹೊಡೆದು ಮಾರಣಾಂತಿಕ ಹಲ್ಲೆ ಮಾಡಿರುತ್ತಾರೆ. ಮಾರಾಣಾಂತಿಕ ಹಲ್ಲೆಗೊಳಗಾದ ಈರಣ್ಣನನ್ನು ಚಿಕಿತ್ಸೆಗಾಗಿ ಚಳ್ಳಕೆರೆ.ಚಿತ್ರದುರ್ಗ. ಶಿವಮೊಗ್ಗ ಹಾಗೂ ಬೆಂಗಳೂರು ಆಸ್ಪತ್ರೆಗಳಿಗೆ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಿಸದೆ ಶನಿವಾರ ಮಧ್ಯಾಹ್ನ .1.30ರ ಸುಮಾರಿನಲ್ಲಿ ಈರಣ್ಣ(50) ಮೃತಪಟ್ಟಿದ್ದು ಮೃತ ದೇಹವನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ಹಲ್ಲೆ ಪ್ರಕರಣ ಚಳ್ಳಕೆರೆ ಠಾಣೆಯಲ್ಲಿ ಅ.5 ರಂದು ನಾಲ್ಕು ಜನರ ಮೇಲೆ ಹಲ್ಲೆ ಪ್ರಕರಣ ದಾಖಲಾಗಿತ್ತು ಚಿಕಿತ್ಸೆ ಫಲಿಸದೆ ಈರಣ್ಣ ಮೃತಪಟ್ಟಿದ್ದಾನೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page