ಮಾರುಕಟ್ಟೆಯನ್ನು ಸಂತೆ ಮೈದಾನಕ್ಕೆ ಸ್ದಳಾಂತರ ಮಾಡಲು ವ್ಯಾಪಾರಿಗಳಿಗೆ ಪೌರಾಯುಕ್ತರು ತಾಕೀತು.

by | 13/12/23 | ಸುದ್ದಿ


ಹಿರಿಯೂರು:
ನೆಹರು ಮಾರುಕಟ್ಟೆ ಸಮೀಪ ಬೆಳಗಿನ ವೇಳೆ ಹಣ್ಣು ವ್ಯಾಪಾರ ನಡೆಯುತ್ತದೆ ಒಂದೇ ಕಡೆ ಸೊಪ್ಪು ತರಕಾರಿ ಹಣ್ಣು ಹೂವಿನ ವ್ಯಾಪಾರ ನಡೆಯುವುದರಿಂದ ಕಿರಿದಾದ ರಸ್ತೆಯಲ್ಲಿ ಪದೇ ಪದೇ ಸಂಚಾರ ದಟ್ಟಣೆ ಉಂಟಾಗುತ್ತದೆ ಆದ್ದರಿಂದ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಈ ಮಾರುಕಟ್ಟೆಯನ್ನು ಸಂತೆ ಮೈದಾನಕ್ಕೆ ಸ್ದಳಾಂತರ ಮಾಡಬೇಕಾಗಿದೆ ಎಂಬುದಾಗಿ ನಗರಸಭೆ ಪೌರಾಯುಕ್ತರಾದ ಹೆಚ್.ಮಹಂತೇಶ್ ಹೇಳಿದರು.
ಪ್ರತಿನಿತ್ಯ ಬೆಳಿಗ್ಗೆ ನಡೆಯುವ ಸೊಪ್ಪು-ತರಕಾರಿ ವಹಿವಾಟನ್ನು ನೆಹರೂ ಮಾರುಕಟ್ಟೆಯಿಂದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪ ಇರುವ ಸಂತೆ ಮೈದಾನಕ್ಕೆ ಸ್ದಳಾಂತರಿಸುವಂತೆ ವ್ಯಾಪಾರಿಗಳಿಗೆ ಸೂಚನೆ ನೀಡಿ, ನಂತರ ಅವರು ಮಾತನಾಡಿದರು .
ಸಂತೆ ನಡೆಯುವ ಜಾಗ ನಗರದ ಮಧ್ಯ ಭಾಗದಲ್ಲಿದ್ದು ವಾರಪೂರ್ತಿ ವ್ಯಾಪಾರ ಮಾಡಬಹುದಾಗಿದೆ, ಆದ್ದರಿಂದ ವ್ಯಾಪಾರಿಗಳು ನೆಹರು ಮಾರುಕಟ್ಟೆ ಬದಲಾಗಿ ಸಂತೆ ಮೈದಾನದಲ್ಲಿ ವ್ಯಾಪಾರ ವಹಿವಾಟು ಮುಂದುವರೆಸಬೇಕೆಂಬ ಉದ್ದೇಶದಿಂದ ಈ ಕ್ರಮಕ್ಕೆ ಮುಂದಾಗಿದ್ದೇವೆ ವರ್ತಕರು ಸಹಕಾರ ನೀಡಬೇಕು ಎಂಬುದಾಗಿ ಹೇಳಿದರು.
ನಗರದ ವ್ಯಾಪಾರಿಗಳು ಈ ಕುರಿತು ಮಾತನಾಡಿ, ದಶಕಗಳಿಂದ ಇಲ್ಲಿಯೇ ವ್ಯಾಪಾರ ವಹಿವಾಟು ನಡೆಸುತ್ತಿದ್ದೇವೆ, ವಾಯುವಿಹಾರಕ್ಕೆ ಹೋಗಿ ಬರುವವರಿಗೆ ಸೊಪ್ಪು ತರಕಾರಿ ಖರೀದಿಸಲು ಇದು ಸೂಕ್ತ ಸ್ಥಳವಾಗಿದ್ದು, ಇಲ್ಲಿಯೇ ವಹಿವಾಟು ಮುಂದುವರಿಸಲು ಅವಕಾಶ ಕೊಡಬೇಕು ಎಂಬುದಾಗಿ ಮನವಿ ಮಾಡಿದರು.
ಆದರೆ ಈ ಕೋರಿಕೆಯನ್ನು ತಿರಸ್ಕರಿಸಿದ ಪೌರಾಯುಕ್ತರು ಸಂತೆ ನಡೆಯುವ ಜಾಗ ಎಲ್ಲರಿಗೂ ಸೂಕ್ತವಾದ ಸ್ಥಳವಾಗಿದೆ, ಹೊರ ಊರುಗಳಿಂದ ಬಸ್ ಇಳಿದು ಬರುವವರಿಗೆ, ನಗರದ ವಿವಿಧ ಬಡಾವಣೆಗಳ ನಿವಾಸಿಗಳಿಗೂ ಅನುಕೂಲವಾಗುತ್ತದೆ, ಇಲ್ಲಿ ವೈಯಕ್ತಿಕ ಪ್ರತಿಷ್ಠೆಯ ಪ್ರಶ್ನೆಯೇ ಇಲ್ಲ, ನಾಗರೀಕರ ಸುರಕ್ಷತೆಯೇ ನಮಗೆ ಮುಖ್ಯ ಎಂಬುದಾಗಿ ಅವರು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀಮತಿ ಸಂದ್ಯಾ, ಸೇರಿದಂತೆ ನಗರಸಭೆ ಪೌರಕಾರ್ಮಿಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page