ಮಾರುಕಟ್ಟೆಯನ್ನು ಸಂತೆ ಮೈದಾನಕ್ಕೆ ಸ್ದಳಾಂತರ ಮಾಡಲು ವ್ಯಾಪಾರಿಗಳಿಗೆ ಪೌರಾಯುಕ್ತರು ತಾಕೀತು.

by | 13/12/23 | ಸುದ್ದಿ


ಹಿರಿಯೂರು:
ನೆಹರು ಮಾರುಕಟ್ಟೆ ಸಮೀಪ ಬೆಳಗಿನ ವೇಳೆ ಹಣ್ಣು ವ್ಯಾಪಾರ ನಡೆಯುತ್ತದೆ ಒಂದೇ ಕಡೆ ಸೊಪ್ಪು ತರಕಾರಿ ಹಣ್ಣು ಹೂವಿನ ವ್ಯಾಪಾರ ನಡೆಯುವುದರಿಂದ ಕಿರಿದಾದ ರಸ್ತೆಯಲ್ಲಿ ಪದೇ ಪದೇ ಸಂಚಾರ ದಟ್ಟಣೆ ಉಂಟಾಗುತ್ತದೆ ಆದ್ದರಿಂದ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಈ ಮಾರುಕಟ್ಟೆಯನ್ನು ಸಂತೆ ಮೈದಾನಕ್ಕೆ ಸ್ದಳಾಂತರ ಮಾಡಬೇಕಾಗಿದೆ ಎಂಬುದಾಗಿ ನಗರಸಭೆ ಪೌರಾಯುಕ್ತರಾದ ಹೆಚ್.ಮಹಂತೇಶ್ ಹೇಳಿದರು.
ಪ್ರತಿನಿತ್ಯ ಬೆಳಿಗ್ಗೆ ನಡೆಯುವ ಸೊಪ್ಪು-ತರಕಾರಿ ವಹಿವಾಟನ್ನು ನೆಹರೂ ಮಾರುಕಟ್ಟೆಯಿಂದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪ ಇರುವ ಸಂತೆ ಮೈದಾನಕ್ಕೆ ಸ್ದಳಾಂತರಿಸುವಂತೆ ವ್ಯಾಪಾರಿಗಳಿಗೆ ಸೂಚನೆ ನೀಡಿ, ನಂತರ ಅವರು ಮಾತನಾಡಿದರು .
ಸಂತೆ ನಡೆಯುವ ಜಾಗ ನಗರದ ಮಧ್ಯ ಭಾಗದಲ್ಲಿದ್ದು ವಾರಪೂರ್ತಿ ವ್ಯಾಪಾರ ಮಾಡಬಹುದಾಗಿದೆ, ಆದ್ದರಿಂದ ವ್ಯಾಪಾರಿಗಳು ನೆಹರು ಮಾರುಕಟ್ಟೆ ಬದಲಾಗಿ ಸಂತೆ ಮೈದಾನದಲ್ಲಿ ವ್ಯಾಪಾರ ವಹಿವಾಟು ಮುಂದುವರೆಸಬೇಕೆಂಬ ಉದ್ದೇಶದಿಂದ ಈ ಕ್ರಮಕ್ಕೆ ಮುಂದಾಗಿದ್ದೇವೆ ವರ್ತಕರು ಸಹಕಾರ ನೀಡಬೇಕು ಎಂಬುದಾಗಿ ಹೇಳಿದರು.
ನಗರದ ವ್ಯಾಪಾರಿಗಳು ಈ ಕುರಿತು ಮಾತನಾಡಿ, ದಶಕಗಳಿಂದ ಇಲ್ಲಿಯೇ ವ್ಯಾಪಾರ ವಹಿವಾಟು ನಡೆಸುತ್ತಿದ್ದೇವೆ, ವಾಯುವಿಹಾರಕ್ಕೆ ಹೋಗಿ ಬರುವವರಿಗೆ ಸೊಪ್ಪು ತರಕಾರಿ ಖರೀದಿಸಲು ಇದು ಸೂಕ್ತ ಸ್ಥಳವಾಗಿದ್ದು, ಇಲ್ಲಿಯೇ ವಹಿವಾಟು ಮುಂದುವರಿಸಲು ಅವಕಾಶ ಕೊಡಬೇಕು ಎಂಬುದಾಗಿ ಮನವಿ ಮಾಡಿದರು.
ಆದರೆ ಈ ಕೋರಿಕೆಯನ್ನು ತಿರಸ್ಕರಿಸಿದ ಪೌರಾಯುಕ್ತರು ಸಂತೆ ನಡೆಯುವ ಜಾಗ ಎಲ್ಲರಿಗೂ ಸೂಕ್ತವಾದ ಸ್ಥಳವಾಗಿದೆ, ಹೊರ ಊರುಗಳಿಂದ ಬಸ್ ಇಳಿದು ಬರುವವರಿಗೆ, ನಗರದ ವಿವಿಧ ಬಡಾವಣೆಗಳ ನಿವಾಸಿಗಳಿಗೂ ಅನುಕೂಲವಾಗುತ್ತದೆ, ಇಲ್ಲಿ ವೈಯಕ್ತಿಕ ಪ್ರತಿಷ್ಠೆಯ ಪ್ರಶ್ನೆಯೇ ಇಲ್ಲ, ನಾಗರೀಕರ ಸುರಕ್ಷತೆಯೇ ನಮಗೆ ಮುಖ್ಯ ಎಂಬುದಾಗಿ ಅವರು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀಮತಿ ಸಂದ್ಯಾ, ಸೇರಿದಂತೆ ನಗರಸಭೆ ಪೌರಕಾರ್ಮಿಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page