ಮಾರ್ಚ್ 10 ರೊಳಗೆ ರೈತರು ಕಟ್ಟಿದ ಬೆಳೆವಿಯನ್ನು ಬಿಡುಗಡೆ ಮಾಡದಿದ್ದರೆ ವಿಧಾನಸಭಾ ಚುನಾವಣೆಗೆ ಬಹಿಷ್ಕಾರ ಮಾಡಲಾಗುವುದು ಎಂದು ರಾಜ್ಯ ರೈತ ಸಂಗದ ಹಿರಿಯ ಉಪಾಧ್ಯಕ್ಷ ಕೆ.ಪಿ ಭೂತಯ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

by | 22/02/23 | Uncategorized


ಚಳ್ಳಕೆರೆ ಜನಧ್ವನಿ ವಾರ್ತೆ ಫೆ.22. ಮಾರ್ಚ್ 10 ರೊಳಗೆ ರೈತರು ಕಟ್ಟಿದ ಬೆಳೆವಿಯನ್ನು ಬಿಡುಗಡೆ ಮಾಡದಿದ್ದರೆ ವಿಧಾನಸಭಾ ಚುನಾವಣೆಗೆ ಬಹಿಷ್ಕಾರ ಮಾಡಲಾಗುವುದು ಎಂದು ರಾಜ್ಯ ರೈತ ಸಂಗದ ಹಿರಿಯ ಉಪಾಧ್ಯಕ್ಷ ಕೆ.ಪಿ
ಭೂತಯ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರೈತರು ತಮ್ಮ ಹೆಂಡ್ತಿ, ಮಗಳ ಒಡವೆ ಅಡ ಇಟ್ಟು ವಿಮೆ ಕಟ್ಟಿದ್ದಾರೆ. ಬಿತ್ತಿದ ಬೀಜ ಸಹ ಪುನಃ ಬಾರದೆ ಬೆಳೆ ಕೈಕೊಟ್ಟಿದೆ. ಒಡವೆಗಳು ಹರಾಜಿಗೆ ಬಂದಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ವಿಮಾ ಕಂಪೆನಿಯವರು ಬಿಡಿಗಾಸೂ ಕೊಡದೆ ರೈತರನ್ನು ಹಗಲು ದರೋಡೆ ಮಾಡ್ತಿದ್ದಾರೆ . ಬೆಳೆ ನಷ್ಟ ಪರಿಹಾರದಲ್ಲೂ ಸುಮಾರು 6 ಸಾವಿರ ರೈತರ ಖಾತೆಗೆ ಹಣ ಬಿಡುಗಡೆ ಮಾಡಿಲ್ಲ.
ಚಳ್ಳಕೆರೆ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಬೆಳೆ ವಿಮೆ ಕಂಪನಿಗಳು ಮಾರ್ಚ್ ಹತ್ತರ ಒಳಗೆ ರೈತರ ಖಾತೆಗೆ ಹಣ ಜಮವಾಗದಿದ್ದರೆ ರೈತರ ಗ್ರಾಮಗಳಿಗೆ ರಾಜಕಾರಣಿಗಳು ಊರ ಒಳಗೆ ಪ್ರವೇಶವಿಲ್ಲ ಎಂಬ ನಾಮಫಲಕ ಹಾಕಲಾಗುವುದು ಎಂದು ರೈತ ಸಂಘದ ಮುಖಂಡ ಕೆಪಿ ಭೂತಯ್ಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಗುಡುಗಿದರು.
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ರೈತರಿಗೆ ಉಪಯುಕ್ತ ಬೆಳೆ ವಿಮೆಯನ್ನು 2016 ನೇ ಬಿಡುಗಡೆಯಾಗಿ ನಂತರ 17 18 ನೇ ಇಸವಿಯಲ್ಲಿ ನೂರು ಕೋಟಿ ರೈತರ ಬೆಳೆ ವಿಮೆ ಬಿಡುಗಡೆಯಾಗಿದ್ದು ಅದರಲ್ಲಿ ಶೇಕಡ 75 ಪರ್ಸೆಂಟೇಜ್ ಪರಿಹಾರ ಸಿಕ್ಕಿದೆ ಇನ್ನೂ 25% ಎಲ್ಲಾ ಗ್ರಾಮ ಪಂಚಾಯತಿಗೆ ಹಣ ಸಂದಾಯ ವಾಗಿದೆ ಅಲ್ಲದೆ 2020 ನೇ ಇಸವಿಯಲ್ಲಿ ಪರ್ಸೆಂಟೇಜ್ ಮೇಲೆ ಹಣ ಸಂದಾಯವಾಗುತ್ತಿದೆ ಬಿಟ್ಟರೆ 22 ,23ನೇ ಸಾಲಿನ ಸಂಪೂರ್ಣ ಅತಿವೃಷ್ಟಿಯಿಂದ ಬೆಳೆ ನಷ್ಟ ರೈತರ ಖಾತೆಗೆ ಜಮವಾಗಿಲ್ಲ, ಇದರಿಂದ ರೈತ ಪಿ ವರ್ಗದವರು ಅತಿವೃಷ್ಟಿಯಿಂದ ರೈತರು ಕಂಗಾಲಾಗಿದ್ದಾರೆ ಇದನ್ನು ಅರಿತು ಕೇಂದ್ರ ಸರ್ಕಾರ ವಾಗಲಿ ರಾಜ್ಯ ಸರ್ಕಾರವಾಗಲಿ ರೈತರ ಬಗ್ಗೆ ಯಾವುದೇ ರೀತಿಯ ಬೆಳೆ ನಷ್ಟ ಪರಿಹಾರವಾಗಲಿ ಸರ್ಕಾರ ನೀಡುವಲ್ಲಿ ವಿಫಲವಾಗಿದೆ ಅಲ್ಲದೆ ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಪ್ರಚಾರ ನಡೆಸಿ ವಿಮೆ ಕಟ್ಟಲು ಪ್ರೇರಣೆ ನೀಡಿದರು ಆದರೆ ರೈತರು, ವಿಮೆ ಕಟ್ಟಿ ತಲೆ ಮೇಲೆ ಕೈ ಎತ್ತಿ ಕೂತಿದ್ದಾರೆ ಇದರಿಂದಾಗಿ ರೈತರು ಸಂಕಷ್ಟಿದಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು
ಈ ವೇಳೆ ರೈತ ಮುಖಂಡ ನಿಜಲಿಂಗಪ್ಪ ಮಾತನಾಡಿ ರೈತರ ಜಮೀನಿಗೆ ಹಿಂಗಾರು ಹಾಗೂ ಮುಂಗಾರು ಸಮಯದಲ್ಲಿ ಸಮೀಕ್ಷೆ ನಡೆಸಬೇಕು ಅಲ್ಲದೆ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಔಷಧಿಗಳನ್ನು ವಿತರಿಸಬೇಕು ಹಾಗೂ ಕೃಷಿ ಉಪಕರಣಗಳನ್ನು ಸರ್ಕಾರ ರದ್ದುಗೊಳಿಸಿದ್ದು ಅದನ್ನು ಹಿಂಪಡೆದು ರೈತರಿಗೆ ಕೃಷಿ ಉಪಕರಣಗಳನ್ನು ಕೊಡಬೇಕು ಅಧಿಕಾರಿಗಳು ಕಾಲಕಾಲಕ್ಕೆ ಸಮೀಕ್ಷೆ ನಡೆಸಿ ರೈತರಿಗೆ ಅನುಕೂಲ ಮಾಡಿಕೊಡುವಂತೆ ಒತ್ತಾಯಿಸಿದರು
ಇದೇ ಸಂದರ್ಭದಲ್ಲಿ ಹಿರಿಯ ರೈತ ಮುಖಂಡ ಜಿ ನಾರಾಯಣ್ ರೆಡ್ಡಿ ಅವರ ಅಕಾಲಿಕ ಮರಣದಿಂದ ಒಂದು ನಿಮಿಷ ಮೌನಚರಣೆ ಮಾಡಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡ ಮಂಜುನಾಥ್ ಟಿ ಹಂಪಣ್ಣ .ರಾಮಸ್ವಾಮಿ. ನಿಜಲಿಂಗಪ್ಪ ಇತರರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page